ಉತ್ತರಪ್ರಭ

ಕಾರಟಗಿ: ರಾಜ್ಯ ಅಧ್ಯಕ್ಷರಾದ ಆರ್.ಮೋಹನ್ ರಾಜ್, ರಾಜು.ಎಮ್.ತಳವಾರ ಅವರ ಆದೇಶದ ಮೇರೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಯ ಕೊಪ್ಪಳ ಜಿಲ್ಲಾ ಅಧ್ಯಕ್ಷರಾಗಿ ತಾಲೂಕಿನ ಹುಳ್ಕಿಹಾಳ ಗ್ರಾಮದ ದೇವರಾಜ ಉಳೇನೂರನ್ನು ಆಯ್ಕೆ ಮಾಡಲಾಗಿದೆ.

ಪಟ್ಟಣದ ಹೊರವಲಯದ ಪರಿವೀಕ್ಷಣಾ ಮಂದಿರದಲ್ಲಿ ಡಿಎಸ್ಎಸ್ ಸಂಘಟನೆಯ ಬಲವರ್ಧನೆಗೆ ಕರೆಯಲಾಗಿದ್ದ ಪದಾಧಿಕಾರಿಗಳ ಸಭೆಯಲ್ಲಿ ಕೊಪ್ಪಳ ಜಿಲ್ಲಾ ಸಂಘಟನಾ ಉಪಾಧ್ಯಕ್ಷ ಮಂಜುನಾಥ ಆರತಿ ಮಾತನಾಡಿ ಡಿಎಸ್ಎಸ್ ಭೀಮವಾದ ಸಂಘಟನೆಯ ಜಿಲ್ಲಾ ಸಂಚಾಲಕರನ್ನಾಗಿ ದೇವರಾಜ ಹುಳ್ಕಿಹಾಳ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. ಜಿಲ್ಲಾ ಪದಾಧಿಕಾರಿಗಳ ಪಟ್ಟಿಯಲ್ಲಿ ಜಿಲ್ಲಾ ಸಂಘಟನಾ ಸಂಚಾಲಕರಾಗಿ ಮಂಜುನಾಥ ಆರತಿ, ದೇವಪ್ಪ ಕರಡಿ, ಶಾಂತಪ್ಪ ಕನಕಗಿರಿರನ್ನು ಆಯ್ಕೆ ಮಾಡಲಾಗಿದ್ದು ಜಿಲ್ಲಾ ಸಲಹಾ ಸಮಿತಿ ಸದಸ್ಯರನ್ನಾಗಿ ಯಮನೂರಪ್ಪ ಪೂಜಾರಿ, ಕೆಂಚಪ್ಪ ವೀರಪುರರನ್ನು ಆಯ್ಕೆ ಮಾಡಲಾಗಿದೆ.

ಹಾಗೂ ಕಾರಟಗಿ ತಾಲೂಕ ಪದಾಧಿಕಾರಿಗಳ ಆಯ್ಕೆ ಪಟ್ಟಿಯಲ್ಲಿ ತಾಲೂಕ ಅಧ್ಯಕ್ಷರಾಗಿ ಹನುಮಂತಪ್ಪ ನಾಗನಕಲ್, ತಾಲೂಕ ಸಂಘಟನಾ ಸಂಚಾಲಕರಾಗಿ ಶಿವರಾಜ ಉಳೆನೂರು, ರಾಜು ಸಂತೋಷರನ್ನು ಆಯ್ಕೆ ಮಾಡಲಾಗಿದ್ದು, ಖಜಾಂಚಿಯಾಗಿ ಬಸವರಾಜ ಕಾರಟಗಿ ಹಾಗೂ ಬಸವರಾಜ ಈಳಿಗನೂರುರನ್ನು ಆಯ್ಕೆ ಮಾಡಿದ್ದಾರೆಂದು ತಿಳಿಸಿದರು.

ನಂತರ ಕೊಪ್ಪಳ ಜಿಲ್ಲೆಯ ನೂತನ ಸಂಘಟನಾ ಸಂಚಾಲಕ ದೇವರಾಜ ಉಳೇನೂರು ಮಾತನಾಡಿ ಜಿಲ್ಲೆಯ ಸಂಪೂರ್ಣ ಜವಾಬ್ದಾರಿಯನ್ನು ಅಧ್ಯಕ್ಷರನ್ನಾಗಿ ವಹಿಸಿದ್ದಾರೆ. ಜಿಲ್ಲೆಯ ದಲಿತ ಸಮುದಾಯದ ಪರವಾಗಿ ಅವರ ಮೇಲೆ ನಡೆಯುವ ಅನ್ಯಾಯ ಶೋಷಣೆಯ ವಿರುದ್ಧ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ನನ್ನ ಸ್ಥಾನ ದೊರೆಯುವಂತೆ ಮಾಡಿದ ರಾಜ್ಯ ಜಿಲ್ಲಾ ತಾಲ್ಲೂಕು ಎಲ್ಲಾ ಪದಾಧಿಕಾರಿಗಳು ಧನ್ಯವಾದಗಳನ್ನು ಸಲ್ಲಿಸುತ್ತೆನೆ ಎಂದರು. ಈ ಸಂದರ್ಭದಲ್ಲಿ ದಲಿತ ಸಂಘಟನೆಯ ಮುಖಂಡರಾದ ಅಂಜಿನಪ್ಪ ಕಾರಟಗಿ, ಹುಲಿರಾಜ ತೊಂಡಿಹಾಳ ಇದ್ದರು.

Leave a Reply

Your email address will not be published. Required fields are marked *

You May Also Like

ರೋಣ ತಾಲೂಕಾ ಒಳಾಂಗಣ ಕ್ರೀಡಾಂಗಣದ ನೂತನ ಕಟ್ಟಡದ ಉದ್ಘಾಟನೆ

ತಾಲೂಕಿನ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಸುಮಾರು 1.90 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಶನಿವಾರ ಶಾಸಕ ಕಳಕಪ್ಪ ಬಂಡಿ ಉದ್ಘಾಟಿಸಿದರು.

ಆನ್ ಲೈನ್ ಶಿಕ್ಷಣ ರದ್ದುಗೊಳಿಸಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ, ಎಲ್.ಕೆ.ಜಿ, ಯು.ಕೆ.ಜಿ ಹಾಗೂ ಪ್ರಾಥಮಿಕ ಹಂತದ 7ನೇ ತರಗತಿವರೆಗಿನ ಆನ್ ಲೈನ್…

ಶೆಟ್ಟಿಕೇರಿ ಕೆರೆ: ಪಾರಂಪರಿಕ ತಾಣವನ್ನಾಗಿಸಲು ಅಗತ್ಯದ ಕ್ರಮ

ಜೀವ ವೈವಿಧ್ಯತೆಯ ಸಂರಕ್ಷಣೆ ಸಂವರ್ಧನೆಯ ಕಾಯ್ದೆಯ ಸಮರ್ಪಕ ಜಾರಿಗಾಗಿ ಜಿ.ಪಂ, ತಾ.ಪಂ ಮೂಲಕ ಸಮಿತಿಗಳನ್ನು ರಚಿಸಿದ್ದು ಈ ಸಮಿತಿಗಳ ಮೂಲಕ ಜಿಲ್ಲೆಯಲ್ಲಿನ ಜೀವ ವೈವಿಧ್ಯತೆಯನ್ನು ಬಲಪಡಿಸುವುದು ಅಗತ್ಯ ಎಂದು ರಾಜ್ಯ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ್ ತಿಳಿಸಿದರು.

ಇಹಲೋಕ ತ್ಯಜಿಸಿದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು

ಉತ್ತರಪ್ರಭ ಸುದ್ದಿವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು, ಸೋಮವಾರ…