ಉತ್ತರಪ್ರಭ
ಗದಗ:
ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ಅವರು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಾರ್ಚ 13 ರಂದು ಮುಂಜಾನೆ 10.30 ಗಂಟೆಗೆ ಶಿರಹಟ್ಟಿ ನೂತನ ಬಸ ನಿಲ್ದಾಣ ಉದ್ಘಾಟಿಸುವರು. 11.30 ಗಂಟೆಗೆ ಮಹರ್ಷಿ ವಾಲ್ಮೀಕಿ ಭವನ ಕಾಮಗಾರಿ ವೀಕ್ಷಿಸಿ 12.30 ಗಂಟೆಗೆ ದೇವಿಹಾಳದಲ್ಲಿ ಸಾಣ್ವಿ ಪೆಟ್ರೋಲ್ ಬಂಕ್ ಉದ್ಘಾಟಿಸುವರು. ಮಧ್ಯಾಹ್ನ 1.30 ಗಂಟೆಗೆ ಮುಂಡರಗಿಯಲ್ಲಿ ಮಹರ್ಷಿ ವಾಲ್ಮೀಕಿ ಭವನ ಭೂಮಿ ಪೂಜೆ ನೆರವೇರಿಸಿ 2.30 ಗಂಟೆಗೆ ಕೆಲೂರಿನ ಮೃತ ಶ್ರೀಮತಿ ನಿರ್ಮಲಾ ಪಾಟೀಲ ಅವರ ಮನೆಗೆ ಭೇಟಿ ನೀಡಿ ಸಾಯಂಕಾಲ ಹುಬ್ಬಳ್ಳಿಗೆ ತೆರಳುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಶಿರಹಟ್ಟಿ ನೂತನ ಬಸ ಘಟಕ ಉದ್ಘಾಟನೆ ಹಾಗೂ ಅಪಘಾತ ರಹಿತ ಚಾಲಕರಿಗೆ ಬಂಗಾರ, ಬೆಳ್ಳಿ ಪದಕ ವಿತರಣಾ ಸಮಾರಂಭವು ಮಾರ್ಚ 13 ರ ರವಿವಾರ ಬೆಳಗ್ಗೆ 10.30ಗಂಟೆಗೆ ಶಿರಹಟ್ಟಿ ನೂತನ ಬಸ ಘಟಕದಲ್ಲಿ ಜರುಗಲಿದೆ. ವಿಧಾನ ಪರಿಷತ ಸಭಾಪತಿ ಬಸವರಾಜ ಹೊರಟ್ಟಿ ಅವರು ಘನ ಉಪಸ್ಥಿತಿ ವಹಿಸುವರು. ಕೃಷಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಅವರು ಅಪಘಾತ ರಹಿತ ಚಾಲಕರಿಗೆ ಬಂಗಾರ ಹಾಗೂ ಬೆಳ್ಳಿ ಪದಕ ವಿತರಣೆ ಮಾಡುವರು. ಸಾರಿಗೆ ಸಚಿವ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅವರು ನೂತನ ಬಸ ಘಟಕ ಉದ್ಘಾಟಿಸುವರು. ಲೋಕೊಪಯೋಗಿ ಸಚಿವ ಸಮಾರಂಭದ ಜ್ಯೋತಿ ಬೆಳಗಿಸುವರು. ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ವಾ.ಕ.ರ.ಸಾ.ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸುವರು.
ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಕಳಕಪ್ಪ ಬಂಡಿ, ಸಂಸದರುಗಳಾದ ಶಿವಕುಮಾರ ಉದಾಸಿ, ಪಿ.ಸಿ.ಗದ್ದಿಗೌಡರ, ಶಾಸಕ ಎಚ್.ಕೆ.ಪಾಟೀಲ, ವಿಧಾನ ಪರಿಷತ ಸದಸ್ಯರುಗಳಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ಸಲೀಂ ಅಹ್ಮದ, ದ್ರಾಕ್ಷಾರಸ್ ಮಂಡಳಿ ಅಧ್ಯಕ್ಷ ಕಾಂತಿಲಾಲ ಬನ್ಸಾಲಿ, ವಾ.ಕ.ರ.ಸಾ ಸಂಸ್ಥೆ ಉಪಾದ್ಯಕ್ಷ ಬಸವರಾಜ ಕೆಲಗಾರ, ಶಿರಹಟ್ಟಿ ಪಟ್ಟಣ ಪಂಚಾಯತ ಅಧ್ಯಕ್ಷೆ ಶ್ರೀಮತಿ ಗಂಗಮ್ಮ ಆಲೂರ, ಉಪಾಧ್ಯಕ್ಷ ಇಸಾಕ ಆದರಳ್ಳಿ, ವಾ.ಕ.ರ.ಸಾ.ಸಂಸ್ಥೆ ಮಂಡಳಿ ನಿರ್ದೇಶಕರುಗಳಾದ ಅಶೋಕ ಮಳಗಿ, ಸಂತೋಷಕುಮಾರ ಪಾಟೀಲ, ಸಿದ್ದಲಿಂಗೇಶ್ವರ ಮಠದ, ಶರಣ ಪಾಟೀಲ, ಸದಾಶಿವ ತೇಲಿ, ಶಿರಹಟ್ಟಿ ಪಟ್ಟಣ ಪಂಚಾಯತ ಸದಸ್ಯರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ ಕಟಾರಿಯಾ, ವಾಕರಸಾ ಸಂಸ್ಥೆ ವ್ಯವಸ್ಥಾಪಕ ಗುರುದತ್ತ ಹೆಗಡೆ, ಜಿಲ್ಲಾಧಿಕಾರಿ ಎಂ.ಸುoದರೇಶ್ ಬಾಬು, ಜಿ.ಪಂ. ಸಿ.ಇ.ಓ ಭರತ ಎಸ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.

Leave a Reply

Your email address will not be published. Required fields are marked *

You May Also Like

ಜ್ವರದಿಂದ ಬಳಲುತ್ತಿದ್ದಾರೆ ಸಿದ್ದರಾಮಯ್ಯ: ಎರಡು ದಿನದ ಕಾರ್ಯಕ್ರಮಗಳು ರದ್ದು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಅವರು ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ.

ತಮ್ಮ ಅಭ್ಯರ್ಥಿಗಳು ಗೆಲ್ಲಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ!

ಬೆಂಗಳೂರು : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಮೂರೂ ಪಕ್ಷಗಳ ನಡುವೆ ಪೈಪೋಟಿ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ನರೇಗಲ್ಲ: ಲಗೂನಾ ಬ್ರೀಡ್ಜ್ ಕೆಲ್ಸಾ ಮುಗಿಸ್ರಿ: ಕೊಂಕಣಾ ಸುತ್ತಿ ಮೈಲಾರಕ್ ಬರುವಂಗಾಗೈತಿ!

ನಿಗದಿತ ಸಮಯಕ್ಕೆ ಮೇಲ್ಸೆತುವೆ ಕಾಮಗಾರಿ ಮುಕ್ತಾಯವಾಗದ ಕಾರಣ ಗ್ರಾಮಸ್ಥರ ಸ್ಥಿತಿ ಕೊಂಕಣಾ ಸುತ್ತಿ ಮೈಲಾರಕ್ಕೆ ಹೋದ್ರು ಅನ್ನುವಂತಾಗಿದೆ.

ನಾಳೆ ಸತತ 8ನೇ ಬಾರಿ ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ

ನಂಬುಗೆಯ ನಾಯಕರಾಗಿ, ನಾಡಿನ ಶಿಕ್ಷಕ ಸಮುದಾಯದ ಜೀವಧ್ವನಿಯಾಗಿ ಹೋರಾಟದ ಮೂಲಕ ಗುರುತಿಸಿಕೊಂಡ ಹೊರಟ್ಟಿಯವರು ನಾಡಿಗೆ ಪರಿಚಿತರಾಗಿದ್ದೇ…