ಉತ್ತರಪ್ರಭ

ಗದಗ: ಮುಂಡರಗಿ ತಾಲೂಕ ಕೆಲೂರು ಗ್ರಾಮದ ನಿರ್ಮಲಾ ಪಾಟೀಲ ವಾರದ ಹಿಂದೆ ಅರಣ್ಯಾಧಿಕಾರಿಗಳ ಕಿರುಕುಳದಿಂದ ವಿಷಪ್ರಾಶನ ಮಾಡಿ ಚಿಕಿತ್ಸೆ ಫಲಿಸದೆ ಗದಗ ಜಿಮ್ಸ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಇಂದು ಕೆಲೂರಿನ ಮೃತ ಮಹಿಳೆಯ ಮನೆಗೆ ಸಚಿವರಾದ ಶ್ರೀ ರಾಮುಲು ಭೇಟಿಯಾಗಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಮೃತ ಕುಟುಂಬಕ್ಕೆ ವ್ಯಯಕ್ತಿಕವಾಗಿ 2 ಲಕ್ಷ ಪರಿಹಾರ ಮತ್ತು ಚಿಕಿತ್ಸೆ ಪಡೆಯುತ್ತಿದ್ದ ಸರೋಜಾ ಪಾಟೀಲ 50ಸಾವಿರ ರೂಪಾಯಿ ವ್ಯಯಕ್ತಿಕ ಪರಿಹಾರ ನೀಡಿದರು. ಹೋರಾಟಗಾರ ರವಿಕಾಂತ ಅಂಗಡಿಯವರು ಕೆಲೂರಿನ ಮೃತ ಮಹಿಳೆಗೆ ಸರ್ಕಾರದಿಂದ 25 ಲಕ್ಷ ರೂಪಾಯಿಗಳನ್ನು ನೀಡಬೇಕು ಮತ್ತು ಅವರಿಗೆ ವಾಲ್ಮೀಕಿ ನಿಗಮದಿಂದ ಸಿಗುವ ಸೌಲಭ್ಯಗಳನ್ನು ಶೀಘ್ರವಾಗಿ ಸರ್ಕಾರದಿಂದ ಕೋಡಬೇಕು ಮತ್ತು ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಬೇಕು ಎಂದು ಒತ್ತಾಯಿಸಿದರು.


ಈ ಕರಿತು ಪ್ರತಿಕ್ರಿಯಿಸಿದ ಸಚಿವರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಬಂಧಿಸಲು ಸೂಚಿಸಿದೆ ಅವರು ತಲೇ ಮರೆಸಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ನಿರ್ಮಲಾ ಪಾಟೀಲರಿಗೆ ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಶೀಘ್ರದಲ್ಲೇ ಕೊಡಲಾಗುವುದು. ಸರ್ಕಾರ ರೈತ ಪರವಾಗಿ ಇದೆ. ಹಾಗಾಗಿ ರೈತರು ಆತಂಕ ಪಡುವ ಪ್ರಶ್ನೆಯೇ ಇಲ್ಲ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ರವಿಕಾಂತ ಅಂಗಡಿ ,ಶಾಸಕ ರಾಮಣ್ಣ ,ಕಿಸಾಸ ರೈತ ಸಂಘದ ಪದಾದಿಕಾರಿಗಳು ,ಚಂದ್ರಕಾಂತ ಚವ್ಹಾಣ ಎನ್ ಪೂಜಾರ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಕಾರ್ ಟಯರ್ ಬ್ಲಾಸ್ಟ್ : ಇಬ್ಬರು ಬೈಕ್ ಸವಾರರ ದುರ್ಮರಣ

ಉತ್ತರಪ್ರಭಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಹತ್ತಿರ, ಗದಗ ಕಡೆ ಚಲಿಸುತ್ತಿರುವ ಕಾರ್ ಒಂದರ ಟಯರ್ ಬ್ಲಾಸ್ಟ್…

Актуальное работающее зеркало БК Леон Рабочее зеркало официального сайта букмекерской конторы Леон

Актуальное работающее зеркало БК Леон Рабочее зеркало официального сайта букмекерской конторы Леон…

ಬಸ್ ನಿಲ್ದಾಣದಲ್ಲಿ ಶೌಚಾಲಯ ಅವ್ಯವಸ್ಥೆ ಸಾರಿಗೆ ಅಧಿಕಾರಿ ತರಾಟೆಗೆ

ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಶೌಚಾಲಯದ ಅವ್ಯವಸ್ಥೆಯನ್ನು ಸಾರಿಗೆ ಇಲಾಖೆ ಸಂಚಾರಿ ನಿರೀಕ್ಷಕರಿಗೆ ತೋರಿಸುವ ಮೂಲತ ಜೈ ಭೀಮ ಆರ್ಮಿ ಸಂಘಟನೆ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ನಡೆದಿದೆ.

ರೋಣ ಪಟ್ಟಣದಲ್ಲಿ ಕೊರೋನಾ ವಾರಿಯರ್ಸ್ ಪೊಲೀಸರಿಗೆ ಆಹಾರ ವ್ಯವಸ್ಥೆ ಮಾಡಿದ ಹೂವು ಹಣ್ಣು ವ್ಯಾಪಾರಸ್ಥರು

ಗದಗ: ಗದಗ ಜಿಲ್ಲೆಯ ರೋಣ ಪಟ್ಟಣದ ಸೂಡಿ ವೃತ್ತದಲ್ಲಿ ಹೂವು ಹಣ್ಣು ವ್ಯಾಪಾರಸ್ಥರು ಇಂದು ಬೆಳಿಗ್ಗೆ ಶನಿವಾರ ಕೊರೋನಾ ವಾರಿಯರ್ಸ್ ಪೊಲೀಸರಿಗೆ ಬೆಳಗ್ಗಿನ ಉಪಾಹಾರ ವಿತರಣೆ ಮಾಡಲಾಯಿತು.