ಉತ್ತರಪ್ರಭ

ಗದಗ: ಮುಂಡರಗಿ ತಾಲೂಕ ಕೆಲೂರು ಗ್ರಾಮದ ನಿರ್ಮಲಾ ಪಾಟೀಲ ವಾರದ ಹಿಂದೆ ಅರಣ್ಯಾಧಿಕಾರಿಗಳ ಕಿರುಕುಳದಿಂದ ವಿಷಪ್ರಾಶನ ಮಾಡಿ ಚಿಕಿತ್ಸೆ ಫಲಿಸದೆ ಗದಗ ಜಿಮ್ಸ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಇಂದು ಕೆಲೂರಿನ ಮೃತ ಮಹಿಳೆಯ ಮನೆಗೆ ಸಚಿವರಾದ ಶ್ರೀ ರಾಮುಲು ಭೇಟಿಯಾಗಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಮೃತ ಕುಟುಂಬಕ್ಕೆ ವ್ಯಯಕ್ತಿಕವಾಗಿ 2 ಲಕ್ಷ ಪರಿಹಾರ ಮತ್ತು ಚಿಕಿತ್ಸೆ ಪಡೆಯುತ್ತಿದ್ದ ಸರೋಜಾ ಪಾಟೀಲ 50ಸಾವಿರ ರೂಪಾಯಿ ವ್ಯಯಕ್ತಿಕ ಪರಿಹಾರ ನೀಡಿದರು. ಹೋರಾಟಗಾರ ರವಿಕಾಂತ ಅಂಗಡಿಯವರು ಕೆಲೂರಿನ ಮೃತ ಮಹಿಳೆಗೆ ಸರ್ಕಾರದಿಂದ 25 ಲಕ್ಷ ರೂಪಾಯಿಗಳನ್ನು ನೀಡಬೇಕು ಮತ್ತು ಅವರಿಗೆ ವಾಲ್ಮೀಕಿ ನಿಗಮದಿಂದ ಸಿಗುವ ಸೌಲಭ್ಯಗಳನ್ನು ಶೀಘ್ರವಾಗಿ ಸರ್ಕಾರದಿಂದ ಕೋಡಬೇಕು ಮತ್ತು ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಬೇಕು ಎಂದು ಒತ್ತಾಯಿಸಿದರು.


ಈ ಕರಿತು ಪ್ರತಿಕ್ರಿಯಿಸಿದ ಸಚಿವರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಬಂಧಿಸಲು ಸೂಚಿಸಿದೆ ಅವರು ತಲೇ ಮರೆಸಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ನಿರ್ಮಲಾ ಪಾಟೀಲರಿಗೆ ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಶೀಘ್ರದಲ್ಲೇ ಕೊಡಲಾಗುವುದು. ಸರ್ಕಾರ ರೈತ ಪರವಾಗಿ ಇದೆ. ಹಾಗಾಗಿ ರೈತರು ಆತಂಕ ಪಡುವ ಪ್ರಶ್ನೆಯೇ ಇಲ್ಲ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ರವಿಕಾಂತ ಅಂಗಡಿ ,ಶಾಸಕ ರಾಮಣ್ಣ ,ಕಿಸಾಸ ರೈತ ಸಂಘದ ಪದಾದಿಕಾರಿಗಳು ,ಚಂದ್ರಕಾಂತ ಚವ್ಹಾಣ ಎನ್ ಪೂಜಾರ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಮಾಜಿ ಸಚಿವ ಡಾ.ಮಮ್ತಾಜ್ ಇನ್ನಿಲ್ಲ

ಬೆಂಗಳೂರು: ಮಾಜಿ ಸಚಿವ, ನಿವೃತ್ತ ಪ್ರೊಫೆಸರ್ ಮಮ್ತಾಜ್ ಅಲಿಖಾನ್ (94) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಅರಣ್ಯ ಒತ್ತುವರಿ ತೆರವಿನಲ್ಲಿ ಮಾನವೀಯತೆ ಅನುಸರಿಸಲು:ಸಚಿವ ಸಿ.ಸಿ.ಪಾಟೀಲರ ತಾಕೀತು

ರೂ. 5 ಲಕ್ಷ ಪರಿಹಾರ ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕೇಲೂರು ಗ್ರಾಮದಲ್ಲಿ ನಿನ್ನೆ ಅರಣ್ಯ…

ತ್ರಿಪುರಾದಲ್ಲಿ ಸೈನಿಕರಿಗೆ ಮಾತ್ರ ಕಂಡು ಬಂದ ಸೋಂಕು!

ತ್ರಿಪುರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಸಾಗುತ್ತಿದೆ. ಮತ್ತೆ 24 ಜನ ಬಿಎಸ್ ಎಫ್ ಯೋಧರಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ರಾಜ್ಯದಲ್ಲಿ ಒಟ್ಟು ಪ್ರಕರಣ 88 ಕ್ಕೆ ತಲುಪಿವೆ .

ಕಾಂಗ್ರೆಸ್ ಹಿರಿಯ ನಾಯಕ ಸಿದ್ನಾಳ ವಿಧಿವಶ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಂಸದ ಎಸ್.ಬಿ.ಸಿದ್ನಾಳ್ (85) ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.