ಉತ್ತರಪ್ರಭ

ಗದಗ: ಮುಂಡರಗಿ ತಾಲೂಕ ಕೆಲೂರು ಗ್ರಾಮದ ನಿರ್ಮಲಾ ಪಾಟೀಲ ವಾರದ ಹಿಂದೆ ಅರಣ್ಯಾಧಿಕಾರಿಗಳ ಕಿರುಕುಳದಿಂದ ವಿಷಪ್ರಾಶನ ಮಾಡಿ ಚಿಕಿತ್ಸೆ ಫಲಿಸದೆ ಗದಗ ಜಿಮ್ಸ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಇಂದು ಕೆಲೂರಿನ ಮೃತ ಮಹಿಳೆಯ ಮನೆಗೆ ಸಚಿವರಾದ ಶ್ರೀ ರಾಮುಲು ಭೇಟಿಯಾಗಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಮೃತ ಕುಟುಂಬಕ್ಕೆ ವ್ಯಯಕ್ತಿಕವಾಗಿ 2 ಲಕ್ಷ ಪರಿಹಾರ ಮತ್ತು ಚಿಕಿತ್ಸೆ ಪಡೆಯುತ್ತಿದ್ದ ಸರೋಜಾ ಪಾಟೀಲ 50ಸಾವಿರ ರೂಪಾಯಿ ವ್ಯಯಕ್ತಿಕ ಪರಿಹಾರ ನೀಡಿದರು. ಹೋರಾಟಗಾರ ರವಿಕಾಂತ ಅಂಗಡಿಯವರು ಕೆಲೂರಿನ ಮೃತ ಮಹಿಳೆಗೆ ಸರ್ಕಾರದಿಂದ 25 ಲಕ್ಷ ರೂಪಾಯಿಗಳನ್ನು ನೀಡಬೇಕು ಮತ್ತು ಅವರಿಗೆ ವಾಲ್ಮೀಕಿ ನಿಗಮದಿಂದ ಸಿಗುವ ಸೌಲಭ್ಯಗಳನ್ನು ಶೀಘ್ರವಾಗಿ ಸರ್ಕಾರದಿಂದ ಕೋಡಬೇಕು ಮತ್ತು ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಬೇಕು ಎಂದು ಒತ್ತಾಯಿಸಿದರು.


ಈ ಕರಿತು ಪ್ರತಿಕ್ರಿಯಿಸಿದ ಸಚಿವರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಬಂಧಿಸಲು ಸೂಚಿಸಿದೆ ಅವರು ತಲೇ ಮರೆಸಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ನಿರ್ಮಲಾ ಪಾಟೀಲರಿಗೆ ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಶೀಘ್ರದಲ್ಲೇ ಕೊಡಲಾಗುವುದು. ಸರ್ಕಾರ ರೈತ ಪರವಾಗಿ ಇದೆ. ಹಾಗಾಗಿ ರೈತರು ಆತಂಕ ಪಡುವ ಪ್ರಶ್ನೆಯೇ ಇಲ್ಲ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ರವಿಕಾಂತ ಅಂಗಡಿ ,ಶಾಸಕ ರಾಮಣ್ಣ ,ಕಿಸಾಸ ರೈತ ಸಂಘದ ಪದಾದಿಕಾರಿಗಳು ,ಚಂದ್ರಕಾಂತ ಚವ್ಹಾಣ ಎನ್ ಪೂಜಾರ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಜಿಮ್ಸನಲ್ಲಿ ಘಟಿಕೋತ್ಸವ : ಸಚಿವ ಪಾಟೀಲ ಹೇಳಿಕೆ

ವೈದ್ಯ ವೃತ್ತಿ ಪವಿತ್ರ ವೃತ್ತಿಯಾಗಿದ್ದು ವೈದ್ಯ ನಾರಾಯಣ ಭವೋ ಎಂಬ ಗಾದೆಗೆ ತಕ್ಕಂತೆ ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸುವಂತೆ ವೈದ್ಯ ಪದವಿ ಪಡೆದ ವಿಧ್ಯಾರ್ಥಿಗಳಿಗೆ ರಾಜ್ಯ ಸಣ್ಣ ಕೈಗಾರಿಕೆ, ವಾರ್ತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು.

ನಿಗದಿತ ವೇಳಾಪಟ್ಟಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಹೊರಟ್ಟಿ ಪತ್ರ

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಒಪ್ಪಿಗೆಯ ಮೇರೆಗೆ ವಿಧಾನ ಪರಿತ್ತಿಗೆ ಕಾಂಗ್ರೆಸ್ ಪಕ್ಷ…

ಬಾಲ್ಯ ವಿವಾಹ ಮದುವೆಯಲ್ಲಿ ಪಾಲ್ಗೊಂಡವರ ವಿರುದ್ಧ ಶಿಸ್ತಿನ ಕ್ರಮ

ಮಕ್ಕಳ ರಕ್ಷಣೆ, ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಾಗುವ ಲೈಂಗಿಕ ದೌರ್ಜನ್ಯ ತಡೆಗೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ.ಆಂಟೋನಿ ಸೆಬಾಸ್ಟಿನ್ ಸೂಚನೆ ನೀಡಿದರು.