ಉತ್ತರಪ್ರಭ
ಗದಗ: ಮುಂಡರಗಿ ತಾಲೂಕ ಕೆಲೂರು ಗ್ರಾಮದ ನಿರ್ಮಲಾ ಪಾಟೀಲರು ಒಂದು ವಾರದ ಹಿಂದೆ ಅರಣ್ಯಾಧಿಕಾರಿಗಳ ಕಿರುಕುಳದಿಂದ ವಿಷಪ್ರಾಶನ ಮಾಡಿ ಚಿಕಿತ್ಸೆ ಫಲಿಸದೆ ಗದಗ ಜಿಮ್ಸ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಇಂದು ರವಿಕಾಂತ ಅಂಗಡಿಯವರ ನೇತೃತ್ವದಲ್ಲಿ ಸಚಿವರಾದ ಶ್ರೀ ರಾಮುಲುರವರನ್ನು ಭೇಟಿಯಾಗಿ ಘಟನೆ ಕುರಿತು ಮಾಹಿತಿಯನ್ನು ನೀಡಿದರು. ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್ ವಿ ಸಂಕನೂರ ಸಚಿವರಿಗೆ ಬಗರಹುಕುಂ ಮತ್ತು ಅರಣ್ಯ ಸಾಗುವಳಿದಾರರಿಗೆ ಅರಣ್ಯ ಇಲಾಲಾಖೆಯಿಂದ ನೀಡುತ್ತಿರುವ ಕಿರುಕುಳದ ಬಗ್ಗೆ ಈಗಾಗಲೇ ಸದನದಲ್ಲಿ ಪ್ರಸ್ತಾಪ ಮಾಡಲಾಗಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಉತ್ತರ ಕರ್ನಾಟಕ ಮಹಾಸಭಾ ಹಾಗೂ ಬಗರ ಹುಕುಂ ಸಾಗುವಳಿದಾರರ ಸಮಿತಿ ಅಧ್ಯಕ್ಷ ರವಿಕಾಂತ ಅಂಗಡಿ ಕೆಲೂರಿನ ಮೃತ ಮಹಿಳೆಗೆ ಸರ್ಕಾರದಿಂದ 25 ಲಕ್ಷ ರೂಪಾಯಿಗಳನ್ನು ನೀಡಬೇಕು ಮತ್ತು ಅವರಿಗೆ ವಾಲ್ಮೀಕಿ ನಿಗಮದಿಂದ ಸಿಗುವ ಸೌಲಭ್ಯಗಳನ್ನು ಶೀಘ್ರವಾಗಿ ಸರ್ಕಾರದಿಂದ ಕೋಡಬೇಕು ಮತ್ತು ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಬೇಕು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಬಂಧಿಸಬೆಕೆಂದು ಒತ್ತಾಯಿಸಿದರು.
ಈ ಕರಿತು ಪ್ರತಿಕ್ರಿಯಿಸಿದ ಸಚಿವರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಬಂಧಿಸಲು ಸೂಚಿಸಿದೆ ಅವರು ತಲೇ ಮರೆಸಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ನಿರ್ಮಲಾ ಪಾಟೀಲರಿಗೆ ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಶೀಘ್ರದಲ್ಲೇ ಕೊಡಲಾಗುವುದು. ಸರ್ಕಾರ ರೈತ ಪರವಾಗಿ ಇದೆ ಹಾಗಾಗಿ ರೈತರು ಆತಂಕ ಪಡುವ ಪ್ರಶ್ನೆಯೇ ಇಲ್ಲ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್ ವಿ ಸಂಕನೂರ, ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷರಾದ ಬಸಣ್ಣ ಬೆಳದಡಿ , ಚಂದ್ರಕಾಂತ ಚವ್ಹಾಣ, ಎನ್ ಟಿ ಪೂಜಾರ ಹಾಗೂ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಗಂಗಾಮತ ಸಮಾಜದ ವಧು-ವರರ ಸಮಾವೇಶ

ನಿಜಶರಣ ಅಂಬಿಗರ ಚೌಡಯ್ಯನವರ ಸಮಾಜದಿಂದ ವಧು-ವರರ ಸಮಾವೇಶ ಜ.31 ರಂದು ಶ್ರೀ ತೋಂಟದ ಸಿದ್ಧಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಪೂಜ್ಯಶ್ರೀ ಷ.ಬ್ರ. ಫಕೀರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಜರುಗಲಿದೆ.

ಶೀಘ್ರವೇ ಅಂಗನವಾಡಿ ಬಾಗಿಲು ತೆರೆಯಲು ಸರ್ಕಾರ ನಿರ್ಧಾರ

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಬಂದ್ ಆಗಿದ್ದ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕಾಫಿ ನಾಡಿನಲ್ಲಿ ಸದ್ಯದಲ್ಲಿಯೇ ಶುರುವಾಗಲಿದೆ ವೈದ್ಯಕೀಯ ಕಾಲೇಜು!

ಬೆಂಗಳೂರು : ಕಾಫಿ ನಾಡಿನಲ್ಲಿ 24 ರಿಂದ 30 ತಿಂಗಳಲ್ಲಿ ಸುಸಜ್ಜಿತ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ.

ರಾಜ್ಯಸಭಾ ಚುನಾವಣೆ: ಸಂಘ ನಿಷ್ಟರಿಗೆ ಮಣೆ ಕಮಲದಲ್ಲಿ ಅಸಂತೋಷ..!

ಬೆಂಗಳೂರು: ಇತ್ತಿಚೆಗಷ್ಟೆ ಶಾಸಕ ಉಮೇಶ್ ಕತ್ತಿ ತಮ್ಮ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭೆಗೆ ಕಳಿಸಬೇಕು ಎಂದು…