ಉತ್ತರಪ್ರಭ ಸುದ್ದಿ
ಲಕ್ಷ್ಮೇಶ್ವರ: ಸಾರಿಗೆ ಸಂಸ್ಥೆಯ ಬಸವೊಂದರ ವೀಲ್ ಜೇಂಟ್ ಕಟ್ ಆಗಿರುವ ಪರಿಣಾಮ, ಬಸ್ ಪಲ್ಟಿಯಾಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗೋವನಾಳ ಹಾಗೂ ಯಲವಿಗಿ ಮಧ್ಯದಲ್ಲಿ ನಡೆದಿದೆ.
ಗದಗನಿಂದ ಹಾವೇರಿಗೆ ಹೊರಟಿದ್ದ ಬಸ್ ಗೋನಾಳ ಸಮೀಪದ ಹಳ್ಳದಲ್ಲಿ ಪಲ್ಟಿಯಾಗಿದ್ದು ರಸ್ತೆ ತಿರುವಿನಲ್ಲಿ ವೀಲ್ ಜೇಂಟ್ ಕಟ್ ಆಗಿದ್ದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಜಾರಿದೆ. ಅಲ್ಲದೇ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ತೀವ್ರ ಗಾಯಗೊಂಡಿದ್ದು ಅಂಬ್ಯಲೆನ್ಸ ಮೂಲಕ ಸ್ಥಳೀಯ ಆಸ್ಪತ್ರೆ ದಾಖಲಾಗಿದೆ.


ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಯಲವಿಗಿ ಗ್ರಾಮದ ಜನರು ಪೊಲೀಸರಿಗೆ ಹಾಗೂ ಅಂಬ್ಯುಲೆನ್ಸ ಸಿಬ್ಬಂದಿಗೆ ಮಾಹಿತಿ ನೀಡಿ ಪ್ರಯಾಣಿಕರನ್ನು ಆಸ್ಪತ್ರೆಗೆ ತಲುಪಿಸುವ ಕಾರ್ಯವನ್ನು ಮಾಡಿದರು. ನಂತರ ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಪಿ.ಎಸ್.ಐ.ಪ್ರಕಾಶ ಅವರು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೋನಾ ಸೊಂಕು ನಿಯಂತ್ರಣಕ್ಕೆ ಪ್ಲಾಸ್ಮಾ ಥೆರಫಿ

ಕೊರೋನಾ ಸೋಂಕಿಗೆ ಯಾವುದೇ ಔಷಧಿ ಕಂಡು ಹಿಡಿಯಲಾಗಿಲ್ಲ. ಆದರೆ ರಾಜ್ಯದಲ್ಲಿ ಈ ಸೋಂಕು ನಿಯಂತ್ರಣಕ್ಕೆ ಪ್ಲಾಸ್ಮಾ ಥೆರಫಿ ಚಿಕಿತ್ಸೆಗೆ ರಾಜ್ಯದ ವೈದ್ಯರು ಮುಂದಾಗಿದ್ದು ಇಬ್ಬರು ಪ್ಲಾಸ್ಮಾ ದಾನ ಮಾಡುವ ಮೂಲಕ ಇತರರಿಗೂ ಪ್ರೇರಣೆಯಾಗಿದ್ದಾರೆ.

ಮೆದುಳು ಜ್ವರ ಲಸಿಕಾಕರಣದ ಅಭಿಯಾನ ಯಶಸ್ವಿಗೊಳಿಸಿ:ಜಿಲ್ಲಾಧಿಕಾರಿ ವೈಶಾಲಿ

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯಾದ್ಯಂತ ಡಿಸೆಂಬರ್ 5 ರಿಂದ 24 ರವರೆಗೆ ಮೆದುಳು ಜ್ವರ ಲಸಿಕಾಕರಣವನ್ನು…

ಕೊರೋನಾ ಪಾಸಿಟಿವ್ ಹಿನ್ನೆಲೆ ಸವಣೂರು ಸಂಪೂರ್ಣ ಲಾಕ್ ಡೌನ್

ಸವಣೂರು ಪಟ್ಟಣವನ್ನಿಂದು ಸಂಪೂರ್ಣ ಸೀಲ್ ಡೌನ್ ಮಾಡಲಾಯಿತು. ಪಟ್ಟಣದ ಎಲ್ಲ ಗಡಿಗಳನ್ನ ಬಂದ್ ಮಾಡಿ ಯಾರೂ ಹೊರ ಹೊಗದಂತೆ ಮತ್ತು ಒಳ ಬರದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಸೀಲ್ ಡೌನ್ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು.

ಕೋವಿಡ್ ಲಸಿಕೆ ಪಡೆದ ಜಿ.ಎಸ್.ಪಾಟೀಲ

ಭೀಮಸೇನ್ ಜೋಶಿ ಆಸ್ಪತ್ರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಪಾಟೀಲ ಕೋವಿಡ್ ಲಸಿಕೆ ಹಾಕಿಸಿಕೊಂಡರು.