ಉತ್ತರಪ್ರಭ ಸುದ್ದಿ
ಲಕ್ಷ್ಮೇಶ್ವರ: ಸಾರಿಗೆ ಸಂಸ್ಥೆಯ ಬಸವೊಂದರ ವೀಲ್ ಜೇಂಟ್ ಕಟ್ ಆಗಿರುವ ಪರಿಣಾಮ, ಬಸ್ ಪಲ್ಟಿಯಾಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗೋವನಾಳ ಹಾಗೂ ಯಲವಿಗಿ ಮಧ್ಯದಲ್ಲಿ ನಡೆದಿದೆ.
ಗದಗನಿಂದ ಹಾವೇರಿಗೆ ಹೊರಟಿದ್ದ ಬಸ್ ಗೋನಾಳ ಸಮೀಪದ ಹಳ್ಳದಲ್ಲಿ ಪಲ್ಟಿಯಾಗಿದ್ದು ರಸ್ತೆ ತಿರುವಿನಲ್ಲಿ ವೀಲ್ ಜೇಂಟ್ ಕಟ್ ಆಗಿದ್ದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಜಾರಿದೆ. ಅಲ್ಲದೇ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ತೀವ್ರ ಗಾಯಗೊಂಡಿದ್ದು ಅಂಬ್ಯಲೆನ್ಸ ಮೂಲಕ ಸ್ಥಳೀಯ ಆಸ್ಪತ್ರೆ ದಾಖಲಾಗಿದೆ.


ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಯಲವಿಗಿ ಗ್ರಾಮದ ಜನರು ಪೊಲೀಸರಿಗೆ ಹಾಗೂ ಅಂಬ್ಯುಲೆನ್ಸ ಸಿಬ್ಬಂದಿಗೆ ಮಾಹಿತಿ ನೀಡಿ ಪ್ರಯಾಣಿಕರನ್ನು ಆಸ್ಪತ್ರೆಗೆ ತಲುಪಿಸುವ ಕಾರ್ಯವನ್ನು ಮಾಡಿದರು. ನಂತರ ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಪಿ.ಎಸ್.ಐ.ಪ್ರಕಾಶ ಅವರು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ನಗರಸಭೆ ಚುನಾವಣೆ: ಕಾಂಗ್ರೆಸ್ ಪಕ್ಷದಿಂದ 35 ವಾರ್ಡಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮ

ಉತ್ತರಪ್ರಭಗದಗ: ಗದಗ-ಬೆಟಗೇರಿ ನಗರಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ 35 ವಾರ್ಡಗಳಿಗೆ  ಅಭ್ಯರ್ಥಿಗಳ ಹೆಸರು ಅಂತಿಮ 35 ವಾರ್ಡಗಳ…

ಕೆ.ಎಸ್ಆರ.ಟಿ.ಸಿ ನೌಕರರಿಗೆ ಸಂಬಳರಹಿತ ರಜೆ ಅಮಾನವೀಯ:ಸರ್ಕಾರ ದಿವಾಳಿಯಾಗಿದೆಯೇ?: ಸಿದ್ದರಾಮಯ್ಯ ಆಕ್ರೋಶ

ಕೆ.ಎಸ್.ಆರ.ಟಿ.ಸಿ ನೌಕರರಿಗೆ 1 ವರ್ಷ ಸಂಬಳರಹಿತ ರಜೆ ನೀಡಲು ಹೊರಟಿರುವುದು ಕಾರ್ಮಿಕ ವಿರೋಧಿ ನಡೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.ಸರ್ಕಾರದ ಯೋಚನೆ ಕಾರ್ಮಿಕ ವಿರೋಧಿ ಮತ್ತು ಅಮಾನವೀಯ

ಬೆಳಿಗ್ಗೆ ಅಪ್ಪನ ಸಾವಿನ ದುರಂತ: ಗದಗನಲ್ಲಿ ಎಸ್.ಎಸ್.ಎಲ್.ಸಿ ಅಗ್ನಿ ಪರಿಕ್ಷೆ ಎದುರಿಸಿದ ಅನುಷಾ!

ಗದಗ: ಮುಂಜಾನೆ ಮರಳಿ ಬಾರದ ಲೋಕಕ್ಕೆ ಅಪ್ಪ ಹೋಗಿದ್ದಾನೆ. ಮನೆ ತುಂಬ ದು:ಖದ ವಾತಾವರಣ. ನೆರೆಹೊರೆಯವರು, ಸಂಬಂಧಿಕರು ಜಮಾಯಿಸುತ್ತಿದ್ದಾರೆ. ಈ ದುಗೂಡದಲ್ಲಿಯೂ ಗದಗಿನ ಈಶ್ವರ ನಗರದ ನಿವಾಸಿ, ತೋಂಟದಾರ್ಯ ಪ್ರೌಢ ಶಾಲೆಯ ವಿದ್ಯಾರ್ಥಿನಿ 16ರ ಬಾಲಕಿ ಪಾಲಿಗೆ ಇವತ್ತಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಕೇವಲ ಪರೀಕ್ಷೆ ಆಗಿರಲಿಲ್ಲ. ಇದು ಅಗ್ನಿ ಪರೀಕ್ಷೆ, ಧರ್ಮ ಪರೀಕ್ಷೆ.

ಎಲ್ಲರಿಗೂ ಕೊರೋನಾ ವಿಮೆ ಒದಗಿಸಿ: ಎಚ್.ಕೆ. ಪಾಟೀಲ್ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ದಿನೆದಿನೇ ಸೋಂಕಿನ ಹಬ್ಬುವಿಕೆ ಹೆಚ್ಚುತ್ತಿದೆ. 40 ಸಾವಿರ ಪ್ರಕರಣಗಳ ಟೆಸ್ಟ್ ಫಲಿತಾಂಶ ಬಾಕಿಯಿದೆ.…