ಬೆಂಗಳೂರು: ನಟ ದಿವಂಗತ ಪುನೀತ್ ರಾಜ್‌ಕುಮಾರ್‌ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಕೊಡುವ ಸಂಬಂಧ ಆದಷ್ಟು ಬೇಗ ಕಾರ್ಯಕ್ರಮದ ದಿನಾಂಕ ನಿಗದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪುನೀತ್ ರಾಜ್‌ಕುಮಾರ್ 47ನೇ ಹಟ್ಟುಹಬ್ಬಕ್ಕೆ ಶುಭಾಶಯಗಳನ್ನು ತಿಳಿಸಿರುವ ಬಸವರಾಜ ಬೊಮ್ಮಾಯಿ ಅವರು ಗುರುವಾರ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದರು.

‘ನಮ್ಮೆಲ್ಲರ ಅಚ್ಚುಮೆಚ್ಚಿನ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬ ಇದೆ. ಅವರು ಇದ್ದಿದ್ದರೆ ಸಂಭ್ರಮದಿಂದ ಆಚರಿಸುತ್ತಿದ್ದೆವು. ಆದರೆ, ಅವರನ್ನು ಕಳೆದುಕೊಂಡ ದುಃಖದಲ್ಲಿದ್ದೇವೆ. ಆದರೆ. ಅವರು ಪ್ರೇರಣೆ ಆಗಿದ್ದಾರೆ. ಅವರ ಆದರ್ಶದ ಬದುಕು, ಸಾರ್ವಜನಿಕವಾಗಿ ನಡೆದುಕೊಂಡ ರೀತಿ, ಬಡವರಿಗೆ ಸಹಾಯ, ದಾನ ಮಾಡಿದ ರೀತಿ ಎಲ್ಲರಿಗೂ ಪ್ರೇರಣೆ. ಚಿಕ್ಕ ವಯಸ್ಸಿಗೆ ಆದರ್ಶ ಪ್ರಾಯರಾಗಿ ಬದುಕಿದರು’ ಎಂದು ಹೇಳಿದರು.

Leave a Reply

Your email address will not be published. Required fields are marked *

You May Also Like

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಕೊರೊನಾ ಪಾಸಿಟಿವ್

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ವಿಷಯದ ಕುರಿತು ಸ್ವತಃ ಎಚ್.ಡಿ.ದೇವೇಗೌಡ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ಪ್ರತ್ಯೇಕವಾಗಿರುವುದಾಗಿ ಹೇಳಿದ್ದಾರೆ. ಜೊತೆಗೆ, ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಕೊರೊನಾ ಪರೀಕ್ಷೆ ಮಾಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ, ಪಕ್ಷದ ಕಾರ್ಯಕರ್ತರು ಆತಂಕಪಡಬೇಡಿ ಎಂದು ಕೂಡ ಕೋರಿದ್ದಾರೆ.

ಬಿಹಾರದಲ್ಲಿ ಕ್ವಾರಂಟೈನ್ ಆದವರಿಗೆ ಕಾಂಡೋಮ್ ಉಚಿತ..!

ಕ್ವಾರಂಟೈನ್ ಪೂರ್ಣಗೊಳಿಸಿ ಮನೆಗಳಿಗೆ ಹಿಂದಿರುಗುತ್ತಿರುವ ಕಾರ್ಮಿಕರಿಗೆ ಬಿಹಾರ ಸರ್ಕಾರ ಕಾಂಡೋಮ್, ಗರ್ಭನಿರೋಧಕ, ಪ್ರೆಗ್ರನ್ಸಿ ಕಿಟ್ ಳನ್ನು ಉಚಿತವಾಗಿ ನೀಡಿದೆ.

ಭಾರಿ ಮಳೆಗೆ ಬೆಂಗಳೂರಿನಲ್ಲಾದ ಅನಾಹುತಗಳು..!

ಬೆಂಗಳೂರು: ನಗರದಲ್ಲಿ ಉತ್ತಮ ಮಳೆ ಸುರಿದಿದ್ದು, ಇಂದು ಸುರಿದ ಮಳೆಗೆ ಉದ್ಯಾನ ನಗರಿಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ.…