ಉತ್ತರಪ್ರಭ ಸುದ್ದಿ
ಬೆಂಗಳೂರು:
ಉಕ್ರೇನ್‌ನಲ್ಲಿ ರಷ್ಯಾ ಶೆಲ್ ದಾಳಿಗೆ ಮೃತಪಟ್ಟಿದ್ದ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಪಾರ್ಥಿವ ಶರೀರ ಭಾನುವಾರ ಮಾರ್ಚ 20ರ ಬೆಳಗ್ಗೆ 3 ಗಂಟೆಗೆ ಬೆಂಗಳೂರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶುಕ್ರವಾರ ಅಂತರರಾಜ್ಯ ಜಲ ವಿವಾದ ಕುರಿತು ಸರ್ವ ಪಕ್ಷ ಸಭೆ ನಡೆಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಈ ವಿಷಯವನ್ನು ಅವರು ತಿಳಿಸಿದರು. ನವೀನ್ ಮೃತದೇಹ ಈಗಾಗಲೇ ಪತ್ತೆಯಾಗಿದ್ದು, ಪಾರ್ಥಿವ ಶರೀರ ತರಲು ಎಲ್ಲ ರೀತಿಯ ಸಿದ್ಧತೆ ನಡೆಯುತ್ತಿದೆ. ಭಾನುವಾರ ಪಾರ್ಥಿವ ಶರೀರ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಗುವುದು ಎಂದರು. ಮಾರ್ಚ್ 1ರಂದು ಉಕ್ರೇನ್‌ನ ಖಾರ್ಕೀವ್‌ನಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ ನವೀನ್ ಶೇಕರಪ್ಪ ಮೃತಪಟ್ಟಿದ್ದರು. ಯುದ್ಧದಿಂದಾಗಿ ಮೃತದೇಹ ತರಲು ಸಾಧ್ಯವಾಗಿರಲಿಲ್ಲ. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಸತತ ಶ್ರಮಪಟ್ಟಿತ್ತು ಇದರ ಫಲವಾಗಿ ನವೀನ ಮೃತ ದೇಹ ಭಾನುವಾರ ಬೆಂಗಳೂರು ತಲುಪಲಿದೆ ಎಂದು ತಿಳಿಸಿದರು.

ಜಾಹಿರಾತು
ಜಾಹಿರಾತು

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ 72; ರಾಜ್ಯದಲ್ಲಿಂದು 10,947 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 72 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9700ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರೀಯ 676 ಪ್ರಕರಣಗಳಿವೆ. ಇಂದು 63 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು ಬಿಡುಗಡೆಯಾಗಿರುವ ಪ್ರಕರಣಗಳ ಸಂಖ್ಯೆ 8889. ಒಟ್ಟು ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 135ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 925 ಕ್ಕೆ ಏರಿಕೆ

ಬೆಂಗಳೂರು: ಇಂದಿನ 63 ಪ್ರಕರಣಗಳು ಸೇರಿ ರಾಜ್ಯದಲ್ಲಿ ಪತ್ತೆಯಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 925 ಕ್ಕೆ…

ಸರ್ಕಾರದ ಸಪ್ತಪದಿ ಯೋಜನೆಯಡಿ ಮದುವೆ ಆಗ್ಬೇಕಾ..? ಇಲ್ಲಿದೆ ಪೂರ್ಣ ಮಾಹಿತಿ

2019-20 ನೇ ಸಾಲಿನಿಂದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಅಧಿಸೂಚಿತ ದೇವಾಲಯಗಳಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ನಡೆಸಲು ಸೂತ್ತೋಲೆಗಳನ್ನು ಹೊರಡಿಸಲಾಗಿದೆ.

ಪುರಾಣ ಕವಿ ರಾಮಣ್ಣ ಬ್ಯಾಟಿ ಇನ್ನಿಲ್ಲ

ಗದಗ: ಕರ್ನಾಟಕ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಗದುಗಿನ ತೋಂಟದಾರ್ಯ ಲಿಂಗೈಕ್ಯ ಪರಮಪೂಜ್ಯ ಡಾಕ್ಟರ್ ತೋಂಟದ ಸಿದ್ದಲಿಂಗ…