ಉತ್ತರಪ್ರಭ ಸುದ್ದಿ
ಬೆಂಗಳೂರು:
ಉಕ್ರೇನ್‌ನಲ್ಲಿ ರಷ್ಯಾ ಶೆಲ್ ದಾಳಿಗೆ ಮೃತಪಟ್ಟಿದ್ದ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಪಾರ್ಥಿವ ಶರೀರ ಭಾನುವಾರ ಮಾರ್ಚ 20ರ ಬೆಳಗ್ಗೆ 3 ಗಂಟೆಗೆ ಬೆಂಗಳೂರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶುಕ್ರವಾರ ಅಂತರರಾಜ್ಯ ಜಲ ವಿವಾದ ಕುರಿತು ಸರ್ವ ಪಕ್ಷ ಸಭೆ ನಡೆಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಈ ವಿಷಯವನ್ನು ಅವರು ತಿಳಿಸಿದರು. ನವೀನ್ ಮೃತದೇಹ ಈಗಾಗಲೇ ಪತ್ತೆಯಾಗಿದ್ದು, ಪಾರ್ಥಿವ ಶರೀರ ತರಲು ಎಲ್ಲ ರೀತಿಯ ಸಿದ್ಧತೆ ನಡೆಯುತ್ತಿದೆ. ಭಾನುವಾರ ಪಾರ್ಥಿವ ಶರೀರ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಗುವುದು ಎಂದರು. ಮಾರ್ಚ್ 1ರಂದು ಉಕ್ರೇನ್‌ನ ಖಾರ್ಕೀವ್‌ನಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ ನವೀನ್ ಶೇಕರಪ್ಪ ಮೃತಪಟ್ಟಿದ್ದರು. ಯುದ್ಧದಿಂದಾಗಿ ಮೃತದೇಹ ತರಲು ಸಾಧ್ಯವಾಗಿರಲಿಲ್ಲ. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಸತತ ಶ್ರಮಪಟ್ಟಿತ್ತು ಇದರ ಫಲವಾಗಿ ನವೀನ ಮೃತ ದೇಹ ಭಾನುವಾರ ಬೆಂಗಳೂರು ತಲುಪಲಿದೆ ಎಂದು ತಿಳಿಸಿದರು.

ಜಾಹಿರಾತು
ಜಾಹಿರಾತು

Leave a Reply

Your email address will not be published. Required fields are marked *

You May Also Like

ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರನ್ನು ಕೆರಳಿಸಿದ ಮಹಾರಾಷ್ಟ್ರ ಸಚಿವ!

ಔರಂಗಾಬಾದ್ : ಗಡಿ ಹಾಗೂ ಭಾಷೆಯ ವಿಷಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡುವುದರ ಮೂಲಕ ಮಹಾರಾಷ್ಟ್ರದ ಸಚಿವ ಜಯಂತ್ ಪಾಟೀಲ್, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.

ಕಿಡಿಗೇಡಿಗಳಿಂದ ವಾಮಾಚಾರ – ಆತಂಕಗೊಂಡ ಗ್ರಾಮಸ್ಥರು!

ಮಡಿಕೇರಿ : ಕಿಡಿಗೇಡಿಗಳ ವಾಮಾಚಾರಕ್ಕೆ ಗ್ರಾಮಸ್ಥರು ಆತಂಕಕ್ಕೊಳಗಾಗಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗುಹ್ಯದಲ್ಲಿ ನಡೆದಿದೆ.

ಉಪಹಾರಕ್ಕೆ ಸೀಮಿತವಾದ ಬಜೆಟ್ ಮಂಡನೆ ಪೂರ್ವಭಾವಿ ಸಭೆ

ಉತ್ತರಪ್ರಭ ಸುದ್ದಿ ನರೆಗಲ್ಲ: ಪಟ್ಟಣ ಪಂಚಾಯತಿಯಲ್ಲಿ ಶುಕ್ರವಾರ ನಡೆಯಬೆಕಿದ್ದ ಬಜೆಟ್ ಮಂಡನೆ ಪೂರ್ವಭಾವಿ ಸಬೆಗೆ ಮುಖ್ಯಾಧಿಕಾರಿ…

ಕೊರೋನಾ ಸೋಂಕಿತರ ಚಿಕಿತ್ಸೆಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚುಎಷ್ಟು ಗೊತ್ತಾ?

ಕೊರೋನಾ ಸೋಂಕಿತರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇನ್ನು ಇಡೀ ದೇಶದ ಆರ್ಥಿಕ ಸ್ಥಿತಿ ಅಷ್ಟಕ್ಕಷ್ಟೆ. ಆದರೆ ಒಬ್ಬ ಕೊರೋನಾ ಸೋಂಕಿತರಿಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚು ಎಷ್ಟು ಎಂದು ನೋಡುವುದಾದರೆ ನಿಜಕ್ಕೂ ಆಶ್ಚರ್ಯ.