ಉತ್ತರಪ್ರಭ ಸುದ್ದಿ
ಬೆಂಗಳೂರು:
ಉಕ್ರೇನ್‌ನಲ್ಲಿ ರಷ್ಯಾ ಶೆಲ್ ದಾಳಿಗೆ ಮೃತಪಟ್ಟಿದ್ದ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಪಾರ್ಥಿವ ಶರೀರ ಭಾನುವಾರ ಮಾರ್ಚ 20ರ ಬೆಳಗ್ಗೆ 3 ಗಂಟೆಗೆ ಬೆಂಗಳೂರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶುಕ್ರವಾರ ಅಂತರರಾಜ್ಯ ಜಲ ವಿವಾದ ಕುರಿತು ಸರ್ವ ಪಕ್ಷ ಸಭೆ ನಡೆಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಈ ವಿಷಯವನ್ನು ಅವರು ತಿಳಿಸಿದರು. ನವೀನ್ ಮೃತದೇಹ ಈಗಾಗಲೇ ಪತ್ತೆಯಾಗಿದ್ದು, ಪಾರ್ಥಿವ ಶರೀರ ತರಲು ಎಲ್ಲ ರೀತಿಯ ಸಿದ್ಧತೆ ನಡೆಯುತ್ತಿದೆ. ಭಾನುವಾರ ಪಾರ್ಥಿವ ಶರೀರ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಗುವುದು ಎಂದರು. ಮಾರ್ಚ್ 1ರಂದು ಉಕ್ರೇನ್‌ನ ಖಾರ್ಕೀವ್‌ನಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ ನವೀನ್ ಶೇಕರಪ್ಪ ಮೃತಪಟ್ಟಿದ್ದರು. ಯುದ್ಧದಿಂದಾಗಿ ಮೃತದೇಹ ತರಲು ಸಾಧ್ಯವಾಗಿರಲಿಲ್ಲ. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಸತತ ಶ್ರಮಪಟ್ಟಿತ್ತು ಇದರ ಫಲವಾಗಿ ನವೀನ ಮೃತ ದೇಹ ಭಾನುವಾರ ಬೆಂಗಳೂರು ತಲುಪಲಿದೆ ಎಂದು ತಿಳಿಸಿದರು.

ಜಾಹಿರಾತು
ಜಾಹಿರಾತು

Leave a Reply

Your email address will not be published. Required fields are marked *

You May Also Like

ವಿಶ್ವ ಬ್ಯಾಂಕ್ ನಿಂದ ದೇಶಕ್ಕೆ 1 ಬಿಲಿಯನ್ ಯುಎಸ್ಡಿ ಡಾಲರ್ ನೆರವು

ಭಾರತ ಸರ್ಕಾರದ ಹಲವು ಯೋಜನೆಗಳನ್ನು ಪರಾಮರ್ಶಿಸಿ ಕೊರೋನಾ ಸಂಕಷ್ಟ ಕಾಲದಲ್ಲಿ ಇದೀಗ ವಿಶ್ವ ಬ್ಯಾಂಕ್ ಭಾರತದ ನೆರವಿಗೆ ಧಾವಿಸಿದೆ.

ಸರ್ಕಾರದ ರೈತ ವಿರೋಧಿ ನೀತಿ ಕುರಿತು ರೈತ ಸಂಘದಿಂದ ಜಾಗೃತಿ

ಜನಪರ, ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಇಂದು ರೈತ ಸಂಘ ಕರಪತ್ರ ಹಂಚುವ ಮೂಲಕ ಜಾಗೃತಿ ಮೂಡಿಸಿತು.

ಗದಗ ಜಿಲ್ಲೆಯಲ್ಲಿ ಮಣ್ಣು-ಮಾಫಿಯಾ ಹಸಿವಿಗೆ ಬೋಳಾಗುತ್ತಿವೆ ಹೊಲ!

ಲಕ್ಷ್ಮೇಶ್ವರ: ಹಾಡು ಹಗಲೇ ಜಿಲ್ಲೆಯ ಲಕ್ಷ್ಮೇಶ್ವರದ ಹಲವು ಹಳ್ಳಿಗಳಲ್ಲಿ ಹೊಲಗಳ ಮಣ್ಣನ್ನು ಹೊತ್ತೊಯುತ್ತಿದೆ ಮಣ್ಣು ಮಾಫಿಯಾ.…

ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 22000 ಅತಿಥಿ ಶಿಕ್ಷಕರ ನೇಮಕಾತಿ

ಉತ್ತರಪ್ರಭ ಹುದ್ದೆ: 2022-23 ನೇ ಶೈಕ್ಷಣಿಕ ಸಾಲಿನ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ…