ಉತ್ತರಪ್ರಭ
ಮುಳಗುಂದ:
ಪಟ್ಟಣದಲ್ಲಿ ಸಾಂಪ್ರದಾಯಕ ಹೋಳಿ ಹಬ್ಬವನ್ನ ಶಾಂತಿ ಸಂಭ್ರಮದಿoದ ಆಚರಿಸಲಾಯಿತು. ಊರಿನ ಪ್ರಮುಖ ಬೀದಿಗಳಲ್ಲಿ ಕಾಮ-ರತಿ ಪ್ರತಿಸ್ಥಾಪಿಸಿ ಶನಿವಾರ ಬೆಳಗಿನಜಾವ ಕಾಮದಹನ ಮಾಡಿದರು.
ಹೋಳಿ ಆಚರಣೆಯಲ್ಲಿ ಎಲ್ಲ ವರ್ಗದ ಯುವಕರು ಪಾಲ್ಗೊಳ್ಳುವ ಮೂಲಕ ಸೌಹಾರ್ದತೆ ಮೆರೆದರು. ನಾನಾ ವೇಷದರಿಸಿದ ಚಿಣ್ಣರು, ಯುವಕರು, ಮಹಿಳೆಯರು ಪರಸ್ಪರ ರಂಗು ರಂಗಿನ ಬಣ್ಣದೋಕಳಿಯಲ್ಲಿ ಮಿಂದೆದ್ದರು. ಪ್ರಮುಖವಾಗಿ ಚಿಂದಿಪೇಟಿ ಓಣಿ ಯವಕರು ವಾಹನದ ಮೇಲೆ ಕಾಮ ರತಿ ಪ್ರತಿಕೃತಿ ನಿರ್ಮಿಸಿದ್ದರು.
ಜಗ್ಗಲಿಗೆ ಬಡಿತ, ಕಣಿ ನಾದಕ್ಕೆ ಹೆಜ್ಜೆಹಾಕಿ ಹೋಳಿ ಪದಗಳನ್ನು ಹಾಡುತ್ತ ಊರಿನ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿದರು. ಪುರದ ಓಣಿ, ಸವಳಭಾವಿ ಓಣಿ, ಚೌಡನಪೇಟಿ, ಕೋಟಿ ಓಣಿ ಯುವಕರು ನಾನಾ ವೇಷ ಧರಿಸಿ, ಹಾಸ್ಯ, ವಿನೋದಾವಳಿಯ ಅಣಕು ಶವ ಯಾತ್ರೆ ಮಾಡಿದರು. ಮಕ್ಕಳ ದಂಡು ಮನೆ ಮನೆಗೆ ತೆರಳಿ ಹೋಳಿಗೆ ತುಪ್ಪದ ಪ್ರಸಾದ ಸವಿದರು. ಓಣಿಯ ಬೀದಿಯಲ್ಲಿ ಚಿಣ್ಣರ ಬಾರಿಸುವ ಹಲಿಗೆ ನಾದ ರಿಂಗಣಿಸಿತು. ಪ್ರಮುಖ ಗಣ್ಯರು ಸೇರಿದಂತೆ ಎಲ್ಲರು ಹೋಳಿ ಆಚರಣೆಯಲ್ಲಿ ಪಾಲ್ಗೊಂಡಿದ್ದರು.

ಜಾಹಿರಾತು
ಜಾಹಿರಾತು
ಜಾಹಿರಾತು
ಜಾಹಿರಾತು
Leave a Reply

Your email address will not be published. Required fields are marked *

You May Also Like

ರಾಜ್ಯಾದ್ಯಂತ ಎರಡುದಿನ ಭಾರಿ ಮಳೆ : ಗದಗ ಸೆರಿ ಇನ್ನು ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..!

ಉತ್ತರಪ್ರಭ ಸುದ್ದಿ ಬೆಂಗಳೂರು: ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹವಾಮಾನ ವೈಪರಿತ್ಯ ಹಿನ್ನೆಲೆ ರಾಜ್ಯದಲ್ಲಿ…

ಅಗರಬತ್ತಿ ಮಾರುವ ಕುಟುಂಬದಲ್ಲಿ ಸಾಗರನ ಸಾಧನೆಯ ಸುವಾಸನೆ

ಸಾಧೆನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸಾಧಿಸಬೇಕು ಎನ್ನುವ ಛಲವೊಂದಿದ್ದರೆ, ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಅಗರಬತ್ತಿ ಮಾರುವ ಕುಟುಂಬವೊಂದವರ ಕುವರನ ಕಥೆ ತಾಜಾ ಉದಾಹರಣೆ.

ಗದಗ ಜಿಲ್ಲೆಯ 9 ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಭಂಧ ತೆರವು

ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 9 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು. ಇದೀಗ 9 ಪ್ರದೇಶಗಳ ನಿರ್ಭಂಧವನ್ನು ಜಿಲ್ಲಾಡಳಿತ ತೆರವುಗೊಳಿಸಲಾಗಿದೆ.

ಶಿರಹಟ್ಟಿ ಕಟ್ಟಿಗೆ ಅಡ್ಡೆ ಪ್ರಕರಣ: ಡಿಸಿ ಆದೇಶಕ್ಕೂ ಕಿಮ್ಮತ್ತು ಕೊಡದ ಶಿರಹಟ್ಟಿ ತಹಶೀಲ್ದಾರ್..!

ಈಗಾಗಲೇ ನಿಮ್ಮ ಉತ್ತರಪ್ರಭ ಶಿರಹಟ್ಟಿಯಲ್ಲಿನ ಕಟ್ಟಿಗೆ ಅಡ್ಡಗಳ ಕುರಿತು ಹಾಗೂ ಅಧಿಕಾರಿಗಳ ನಡೆ ಕುರಿತು 6 ಸರಣಿ ಲೇಖನವನ್ನು ಪ್ರಕಟಿಸಿದೆ.