ಉತ್ತರಪ್ರಭ
ಮುಳಗುಂದ:
ಪಟ್ಟಣದಲ್ಲಿ ಸಾಂಪ್ರದಾಯಕ ಹೋಳಿ ಹಬ್ಬವನ್ನ ಶಾಂತಿ ಸಂಭ್ರಮದಿoದ ಆಚರಿಸಲಾಯಿತು. ಊರಿನ ಪ್ರಮುಖ ಬೀದಿಗಳಲ್ಲಿ ಕಾಮ-ರತಿ ಪ್ರತಿಸ್ಥಾಪಿಸಿ ಶನಿವಾರ ಬೆಳಗಿನಜಾವ ಕಾಮದಹನ ಮಾಡಿದರು.
ಹೋಳಿ ಆಚರಣೆಯಲ್ಲಿ ಎಲ್ಲ ವರ್ಗದ ಯುವಕರು ಪಾಲ್ಗೊಳ್ಳುವ ಮೂಲಕ ಸೌಹಾರ್ದತೆ ಮೆರೆದರು. ನಾನಾ ವೇಷದರಿಸಿದ ಚಿಣ್ಣರು, ಯುವಕರು, ಮಹಿಳೆಯರು ಪರಸ್ಪರ ರಂಗು ರಂಗಿನ ಬಣ್ಣದೋಕಳಿಯಲ್ಲಿ ಮಿಂದೆದ್ದರು. ಪ್ರಮುಖವಾಗಿ ಚಿಂದಿಪೇಟಿ ಓಣಿ ಯವಕರು ವಾಹನದ ಮೇಲೆ ಕಾಮ ರತಿ ಪ್ರತಿಕೃತಿ ನಿರ್ಮಿಸಿದ್ದರು.
ಜಗ್ಗಲಿಗೆ ಬಡಿತ, ಕಣಿ ನಾದಕ್ಕೆ ಹೆಜ್ಜೆಹಾಕಿ ಹೋಳಿ ಪದಗಳನ್ನು ಹಾಡುತ್ತ ಊರಿನ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿದರು. ಪುರದ ಓಣಿ, ಸವಳಭಾವಿ ಓಣಿ, ಚೌಡನಪೇಟಿ, ಕೋಟಿ ಓಣಿ ಯುವಕರು ನಾನಾ ವೇಷ ಧರಿಸಿ, ಹಾಸ್ಯ, ವಿನೋದಾವಳಿಯ ಅಣಕು ಶವ ಯಾತ್ರೆ ಮಾಡಿದರು. ಮಕ್ಕಳ ದಂಡು ಮನೆ ಮನೆಗೆ ತೆರಳಿ ಹೋಳಿಗೆ ತುಪ್ಪದ ಪ್ರಸಾದ ಸವಿದರು. ಓಣಿಯ ಬೀದಿಯಲ್ಲಿ ಚಿಣ್ಣರ ಬಾರಿಸುವ ಹಲಿಗೆ ನಾದ ರಿಂಗಣಿಸಿತು. ಪ್ರಮುಖ ಗಣ್ಯರು ಸೇರಿದಂತೆ ಎಲ್ಲರು ಹೋಳಿ ಆಚರಣೆಯಲ್ಲಿ ಪಾಲ್ಗೊಂಡಿದ್ದರು.

ಜಾಹಿರಾತು
ಜಾಹಿರಾತು
ಜಾಹಿರಾತು
ಜಾಹಿರಾತು
Leave a Reply

Your email address will not be published. Required fields are marked *

You May Also Like

ಹೆಲ್ಮೆಟ್ ಜಾಗೃತಿ: ವಾಹನ ಸವಾರರಿಗೆ ಪೊಲೀಸ್ ಇಲಾಖೆಯಿಂದ ಜಾಗೃತಿ ಕಾರ್ಯ

ಪೊಲೀಸ್ ಇಲಾಖೆಯಿಂದ ಶ್ರೀ ಕಾಲಕಾಲೇಶ್ವರ ವೃತ್ತದಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಕರಪತ್ರ ನೀಡುವ ಮೂಲಕ ಕಡ್ಡಾಯವಾಗಿ ಹೆಲ್ಮೇಟ್ ಧರಿಸಿ ವಾಹನ ಚಲಾವಣೆ ಮಾಡಬೇಕು ಎಂದು ಶುಕ್ರವಾರ ಜಾಗೃತಿ ಮೂಡಿಸಿದರು.

ಗದಗ ಎಸ್ಪಿ ಯತೀಶ ಎನ್ ವರ್ಗಾವಣೆ

ಉತ್ತರಪ್ರಭ ಸುದ್ದಿ ಗದಗ: ಗದಗ ಜಿಲ್ಲೆಗೆ ನೂತನ ಎಸ್ಪಿ ಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ದೇವರಾಜು ಅವರನ್ನು ನೂತನ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಆಗಮಿಸಲಿದ್ದು .ಎನ್ ಯತೀಶರವರನ್ನು ಮಂಡ್ಯ ಜಿಲ್ಲೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ .ಎನ್ ಯತೀಶರವರು ಕೊವಿಡ್ ಸಮಯದಲ್ಲಿ ಮಾಡಿದ ಕಾರ್ಯ ಗದುಗಿನ ಜನತೆ ಮರೆಯಲಾರರು.

ಗೂಗಲ್ ನಿಂದ ನೀವು ಹಣ ಸಂಪಾದನೆ ಮಾಡಬಹುದು

ಗೂಗಲ್​ ಕಂಪನಿ ಟಾಸ್ಕ್​ ಮೇಟ್​ ಎಂಬ ಅಪ್ಲಿಕೇಶನ್​ ಒಂದರ ಟೆಸ್ಟಿಂಗ್​ ನಡೆಸುತ್ತಿದೆ. ಇದರ ಸಹಾಯದಿಂದ ಬಳಕೆದಾರರು ಹಣ ಸಂಪಾದನೆ ಮಾಡಬಹುದಾಗಿದೆ.

ಜಿಲ್ಲೆಯಲ್ಲಿ ಕೊವಿಡ್-19 ನಿಯಂತ್ರಣಕ್ಕೆ ಸೂಕ್ತ ಕ್ರಮವಹಿಸಿ: ಸಚಿವ ಸಿ.ಸಿ.ಪಾಟೀಲ

ಗದಗ: ಕಳೆದ ಕೆಲವು ದಿನಗಳಿಂದ ಕೊವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕೊವಿಡ್-19 ನಿಯಂತ್ರಣಕ್ಕೆ ಅಗತ್ಯವಿರುವ…