ಉತ್ತರಪ್ರಭ ಸುದ್ದಿ
ಮಣಿಪುರ:
ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಣಿಪುರದ ಹಂಗಾಮಿ ಸಿಎಂ ಎನ್ ಬಿರೇನ್ ಸಿಂಗ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವೀಕ್ಷಕರಾದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕಾನೂನು ಸಚಿವ ಕಿರಣ್ ರಿಜಿಜು ಅವರು ರಾಜ್ಯದಲ್ಲಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಬಿರೇನ್ ಸಿಂಗ್‌ರನ್ನು ಆಯ್ಕೆ ಮಾಡಿದ್ದಾರೆ.
ಬಿಜೆಪಿಯ ಹಿರಿಯ ನಾಯಕ ತೊಂಗA ಬಿಸ್ವಜಿತ್ ಸಿಂಗ್ ಹೆಸರು ಕೇಳಿ ಬಂದಿತು. ಈಗ ಹಾಲಿ ಸ್ಪೀಕರ್ ಯುಮ್ನಮ್ ಖೇಮ್‌ಚಂದ್ ಸಿಂಗ್ ಹೆಸರು ಮುಂಚೂಣಿಯಲ್ಲಿತ್ತು. ಆದರೆ, ಅಂತಿಮವಾಗಿ ನೊಗ್ತೋಂಬಮ್ ಬಿರೇನ್ ಸಿಂಗ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತೊಂದು ಅವಧಿಗೆ ಆಯ್ಕೆಯಾಗಿದ್ದಾರೆ.
ಬಿರೇನ್ ಸಿಂಗ್ ಸಂಕ್ಷಿಪ್ತ ವ್ಯಕ್ತಿಚಿತ್ರ: ನೊಗ್ತೋಂಬಮ್ ಬಿರೇನ್ ಸಿಂಗ್ ಅವರು 1961ರ ಜನವರಿ 1ರಂದು ಜನಿಸಿದ್ದಾರೆ. ಮಣಿಪುರ ವಿಶ್ವವಿದ್ಯಾಲಯದಲ್ಲಿ ಬಿ.ಎ ಪದವಿ ಪಡೆದಿದ್ದಾರೆ. ಫುಟ್ಬಾಲ್ ಆಟಗಾರರಾಗಿ ಜನಪ್ರಿಯತೆ ಗಳಿಸಿದ್ದರು. ನಂತರ ಗಡಿ ಭದ್ರತಾ ಪಡೆ(ಬಿಎಸ್ಎಫ್) ಗೆ ಆಯ್ಕೆಯಾಗಿ ಗಡಿ ಕಾಯ್ದಿದ್ದಾರೆ. ಫುಟ್ಬಾಲ್ ಆಟಗಾರರಾಗಿ ಸ್ಥಳೀಯ ಪಂದ್ಯಾವಳಿಗಳಲ್ಲದೆ ಡುರಾಂಡ್ ಕಪ್ ಪಂದ್ಯಾವಳಿಯಲ್ಲೂ ಭಾಗಿಯಾಗಿದ್ದರು.
1992ರಲ್ಲಿ ಪತ್ರಿಕೋದ್ಯಮಕ್ಕೆ ಧುಮುಕಿದ ಬಿರೇನ್ ಸಿಂಗ್ ಅವರು ನಹರೊಲ್ಗಿ ತೌಡಂಗ್ ಎಂಬ ಹೆಸರಿನ ಸ್ಥಳೀಯ ಪತ್ರಿಕೆಯನ್ನು ಸ್ಥಾಪಿಸಿದರು. ನಂತರ 2001ರ ತನಕ ಪತ್ರಿಕೆಯ ಸಂಪಾದಕರಾಗಿ ಕಾರ್ಯನಿರ್ವಹಿಸಿದರು.2002ರಲ್ಲಿ ಡೆಮೊಕ್ರಾಟಿಕ್ ರೆವಲ್ಯೂಷನರಿ ಪೀಪಲ್ಸ್ ಪಾರ್ಟಿಗೆ ಸೇರಿಕೊಂಡರು. ಹಿಂಗಾAಗ್ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ಶಾಸಕರಾಗಿ ಆಯ್ಕೆಯಾದರು. 2007ರಲ್ಲಿ ಮತ್ತೊಮ್ಮೆ ಜಯ ದಾಖಲಿಸಿದ್ದಲ್ಲದೆ, 2012ರ ತನಕ ಸಚಿವ ಸಂಪುಟ ಸದಸ್ಯರಾಗಿದ್ದರು.

Leave a Reply

Your email address will not be published. Required fields are marked *

You May Also Like

ಉದ್ಧವ್ ಠಾಕ್ರೆ ಮನದಲ್ಲಿ ಮೂಡಿದ ನಿರಾಳ!

ಕೇಂದ್ರ ಚುನಾವಣಾ ಆಯೋಗವು ಮೇ. 27ರ ಒಳಗೆ ಮಹಾರಾಷ್ಟ್ರದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಅನುಮತಿ ನೀಡಿದ್ದು, ಸಿಎಂ ಉದ್ದವ್ ಠಾಕ್ರೆಗೆ ಸಂತಸ ತಂದಿದೆ.

ಕೊಪ್ಪಳದಲ್ಲೂ ಕೊರೋನಾ ಸಪ್ಪಳ: ಮೂರು ಪಾಸಿಟಿವ್ ದೃಢ

ಕೊಪ್ಪಳ: ಈವರೆಗೆ ಯಾವುದೇ ಪಾಸಿಟಿವ್ ಪ್ರಕರಣಗಳಿಲ್ಲದೇ ಕೊಪ್ಪಳ ಜಿಲ್ಲೆ ಗ್ರೀನ್ ಝೋನ್ ನಲ್ಲಿತ್ತು. ಆದರೆ ಇದೀಗ…

ಅಲ್ವಿದಾ ನಿಸಾರ್ ಚಾಚಾ ಎನ್ನಲು ಮನಸಾಗುತ್ತಿಲ್ಲ..!

ಅಲ್ವಿದಾ ನಿಸಾರ್ ಅಹ್ಮದ್ ಚಾಚಾ. ನಿಮ್ಮ ಪದ್ಯಗಳ ಸಂತೆಯಲ್ಲಿ ನಾವು ನಿತ್ಯ ಕಳೆದುಹೋಗುತ್ತೇವೆ. ನರಸಿಂಹರಾಜ ಕಾಲೋನಿಯ ದ್ವಾರಕಾ ಹೋಟೆಲ್ ಮುಂದೆ ನೀವು ಅಂದು ನಿಂತಿದ್ದ ಜಾಗದಲ್ಲೇ ನಿಂತಿರುತ್ತೀರಿ ಎಂದು ಭಾವಿಸುತ್ತೇನೆ. ಹೋಗಿ ಬನ್ನಿ.

ವಾರದ ಹಿಂದಷ್ಟೆ ಹೊಗಳಿದ ಅಮೇರಿಕಾ ಪ್ರಧಾನಿ ಮೋದಿ ಅಕೌಂಟ್ ಅನ್ ಫಾಲೋ ಮಾಡಿದ್ದೇಕೆ?

ಅಮೆರಿಕದ ವರ್ತನೆ ಯಾವ ಸಂದರ್ಭದಲ್ಲಿ ಹೇಗೆ ಇರುತ್ತದೆ ಎಂಬುವುದೇ ತಿಳಿಯದಂತಾಗಿದೆ. ಮೂರು ವಾರಗಳ ಹಿಂದೆಯಷ್ಟೇ ಭಾರತದ ಪ್ರಧಾನಿಯನ್ನು ಹೊಗಳಿ, ಮೋದಿ ಅವರ ಅಕೌಂಟ್ ಫಾಲೋ ಮಾಡಲು ಪ್ರಾರಂಭಿಸಿದ್ದ ಶ್ವೇತಭವನ ಈಗ ಅನ್ ಫಾಲೋ ಮಾಡಿದೆ ಇದಕ್ಕೆ ಕಾರಣವೇನು ಎನ್ನುವುದು ಮಾತ್ರ ನಿಗೂಢವಾಗಿದೆ.