ಉತ್ತರಪ್ರಭ ಸುದ್ದಿ
ಮಣಿಪುರ:
ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಣಿಪುರದ ಹಂಗಾಮಿ ಸಿಎಂ ಎನ್ ಬಿರೇನ್ ಸಿಂಗ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವೀಕ್ಷಕರಾದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕಾನೂನು ಸಚಿವ ಕಿರಣ್ ರಿಜಿಜು ಅವರು ರಾಜ್ಯದಲ್ಲಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಬಿರೇನ್ ಸಿಂಗ್‌ರನ್ನು ಆಯ್ಕೆ ಮಾಡಿದ್ದಾರೆ.
ಬಿಜೆಪಿಯ ಹಿರಿಯ ನಾಯಕ ತೊಂಗA ಬಿಸ್ವಜಿತ್ ಸಿಂಗ್ ಹೆಸರು ಕೇಳಿ ಬಂದಿತು. ಈಗ ಹಾಲಿ ಸ್ಪೀಕರ್ ಯುಮ್ನಮ್ ಖೇಮ್‌ಚಂದ್ ಸಿಂಗ್ ಹೆಸರು ಮುಂಚೂಣಿಯಲ್ಲಿತ್ತು. ಆದರೆ, ಅಂತಿಮವಾಗಿ ನೊಗ್ತೋಂಬಮ್ ಬಿರೇನ್ ಸಿಂಗ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತೊಂದು ಅವಧಿಗೆ ಆಯ್ಕೆಯಾಗಿದ್ದಾರೆ.
ಬಿರೇನ್ ಸಿಂಗ್ ಸಂಕ್ಷಿಪ್ತ ವ್ಯಕ್ತಿಚಿತ್ರ: ನೊಗ್ತೋಂಬಮ್ ಬಿರೇನ್ ಸಿಂಗ್ ಅವರು 1961ರ ಜನವರಿ 1ರಂದು ಜನಿಸಿದ್ದಾರೆ. ಮಣಿಪುರ ವಿಶ್ವವಿದ್ಯಾಲಯದಲ್ಲಿ ಬಿ.ಎ ಪದವಿ ಪಡೆದಿದ್ದಾರೆ. ಫುಟ್ಬಾಲ್ ಆಟಗಾರರಾಗಿ ಜನಪ್ರಿಯತೆ ಗಳಿಸಿದ್ದರು. ನಂತರ ಗಡಿ ಭದ್ರತಾ ಪಡೆ(ಬಿಎಸ್ಎಫ್) ಗೆ ಆಯ್ಕೆಯಾಗಿ ಗಡಿ ಕಾಯ್ದಿದ್ದಾರೆ. ಫುಟ್ಬಾಲ್ ಆಟಗಾರರಾಗಿ ಸ್ಥಳೀಯ ಪಂದ್ಯಾವಳಿಗಳಲ್ಲದೆ ಡುರಾಂಡ್ ಕಪ್ ಪಂದ್ಯಾವಳಿಯಲ್ಲೂ ಭಾಗಿಯಾಗಿದ್ದರು.
1992ರಲ್ಲಿ ಪತ್ರಿಕೋದ್ಯಮಕ್ಕೆ ಧುಮುಕಿದ ಬಿರೇನ್ ಸಿಂಗ್ ಅವರು ನಹರೊಲ್ಗಿ ತೌಡಂಗ್ ಎಂಬ ಹೆಸರಿನ ಸ್ಥಳೀಯ ಪತ್ರಿಕೆಯನ್ನು ಸ್ಥಾಪಿಸಿದರು. ನಂತರ 2001ರ ತನಕ ಪತ್ರಿಕೆಯ ಸಂಪಾದಕರಾಗಿ ಕಾರ್ಯನಿರ್ವಹಿಸಿದರು.2002ರಲ್ಲಿ ಡೆಮೊಕ್ರಾಟಿಕ್ ರೆವಲ್ಯೂಷನರಿ ಪೀಪಲ್ಸ್ ಪಾರ್ಟಿಗೆ ಸೇರಿಕೊಂಡರು. ಹಿಂಗಾAಗ್ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ಶಾಸಕರಾಗಿ ಆಯ್ಕೆಯಾದರು. 2007ರಲ್ಲಿ ಮತ್ತೊಮ್ಮೆ ಜಯ ದಾಖಲಿಸಿದ್ದಲ್ಲದೆ, 2012ರ ತನಕ ಸಚಿವ ಸಂಪುಟ ಸದಸ್ಯರಾಗಿದ್ದರು.

Leave a Reply

Your email address will not be published. Required fields are marked *

You May Also Like

ನಂಬಿದ್ರ ನಂಬ್ರಿ-ಬಿಟ್ರಬಿಡ್ರಿ: 66 ವರ್ಷದ ಹೆಣ್ಮಗಳಿಗೆ 18 ತಿಂಗಳದಾಗ 8 ಮಕ್ಕಳು ಹುಟ್ಟ್ಯಾವು!

ಸತ್ತವ್ರು ಬದಕಿದ್ದು, ಬದುಕಿದವರು ಸತ್ತಿದ್ದು ಇಂಥ ಅದೆಷ್ಟ್ ಘಟನಾ ನಾವು ಕೇಳಿವಿ, ನೋಡಿವಿ. ಆದ್ರ ಎಂತೆಂಥ ಚಿತ್ರ-ವಿಚಿತ್ರ ಘಟನೆನಾ ನಾವು ಕೇಳಿವಿ, ನೋಡಿವಿ. ಆದ್ರ ಈ ಘಟನಾ ಮಾತ್ರ ನಾವು ಎಂದು ಕಾಣದ್ದು, ಕೇಳದ್ದು ಅಂದ್ರು ತಪ್ಪಾಗ್ಲಿಕ್ಕಿಲ್ಲ.

ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸೋಣ ಎಂದ ಉಭಯ ದೇಶಗಳು!

ನವದೆಹಲಿ: ಲಡಾಖ್ ಪ್ರದೇಶದ ಗಾಲ್ವಾನ್‌ ಕಣಿವೆಯಲ್ಲಿ ಪೂರ್ವ ನಿಯೋಜಿತರಾಗಿ ಚೀನಾ ಸೈನಿಕರು ನಮ್ಮ ಸೈನಿಕರ ಮೇಲೆ…

ಸೇಡಿನ ಕೊಲೆಗಳಲ್ಲಿ ದೇಶದಲ್ಲಿಯೇ ಬೆಂಗಳೂರು ಮೊದಲ ಸ್ಥಾನದಲ್ಲಿ!

ಬೆಂಗಳೂರು : ದೇಶದಲ್ಲಿ ದ್ವೇಷದಿಂದ ಕೊಲೆಗಳು ಹೆಚ್ಚಾಗುತ್ತಿದ್ದು, ಆತಂಕ ಮನೆ ಮಾಡುತ್ತಿದೆ. ಹೀಗೆ ಸೇಡಿನ ಕೊಲೆಗಳು ನಡೆದಿರುವ ಪಟ್ಟಿಯಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿ ಬಂದು ನಿಂತಿದೆ.

ರಾಷ್ಟಪತಿ ಭಾಷಣಕ್ಕೆ ಬಹಿಷ್ಕರಿಸಲು 16 ವಿಪಕ್ಷಗಳಿಂದ ನಿರ್ಧಾರ

ನಾಳೆಯಿಂದ ಅಧಿವೇಶನ ಸಂಸತ್‌ ಬಜೆಟ್‌ ಆರಂಭವಾಗಲಿದ್ದು, ಕೇಂದ್ರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಗುಲಾಂ ನಬಿ ಹೇಳಿದ್ದಾರೆ.