ಉತ್ತರಪ್ರಭ

ಮುಂಡರಗಿ: ಗದಗ ಪೊಲೀಸರು ಅಂದರ್ ಬಾಹರ್ ಅಡ್ಡೆ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಕ್ಷಾಂತರ ರೂಪಾಯಿ ಜೂಜಾಟದಲ್ಲಿ ಅಂದರೆ ಅಂದರ್ ಬಾಹರ್ ಆಡುತ್ತಿದ್ದ ಸರ್ಕಾರಿ ನೌಕರ ಸೇರಿದಂತರ 17 ಜನರು ಮೇಲೆ ಪ್ರಕರಣ ದಾಖಲಾಗಿದೆ.


ಹೌದು‌ ಇದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಿದರಹಳ್ಳಿ ಬಳಿ ಅಂದರ್ ಬಾಹರ್ ಆಡುತ್ತಿದ್ದವರ ಮೇಲೆ ದಾಳಿ ನಡೆಸಿದ ಪೊಲೀಸರು ಬೇರೆ ಬೇರೆ ಜಿಲ್ಲೆಯ ಜೂಜುಕೋರರ ಮೇಲೆ ಪೋಲಿಸರು ಕಾರಯಾಚರಣೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ಡಿ ದೇವರಾಜು ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ಪಂಡ್ ಅಡ್ಡೆಯ ಮೇಲೆ ದಾಳಿ ನಡೆಸಿ 17 ಆರೋಪಿಗಳಿಂದ ಒಟ್ಟು 14.83 ಲಕ್ಷ ರೂ. ಹೆಚ್ಚಿನ ಹಣ, 04 ಕಾರು ಹಾಗೂ 18 ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ.
ಇದರಲ್ಲಿ ಅಚ್ಚರಿಯೆಂದರೆ ಸರ್ಕಾರಿ ನೌಕರನು ಭಾಗಿ ಆಗಿದ್ದು, ಬೇರೆ ಬೇರೆ ವೃತ್ತಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ . ಗದಗ ಮೂಲದವರು ಪರಾರಿಯಾಗಿದ್ದು ಬೇರೆ ಜಿಲ್ಲೆಗಳಾದ ಚಿತ್ರದುರ್ಗ, ಹಾವೇರಿ, ದಾವಣಗೆರೆ, ವಿಜಯನಗರ, ಬಳ್ಳಾರಿಯ ಆರೋಪಿಗಳು ಸೆರೆ ಸಿಕ್ಕದ್ದಾರೆ. ಆರೋಪಿಗಳ ಮೇಲೆ ಕೆ.ಪಿ ಆ್ಯಕ್ಟ್ 87 ಕಲಂನಡಿ ಜೂಜಾಟದ ಕೇಸ್ ದಾಖಲಿಸಲಾಗಿದೆ.
ಫಂಡ್ ಗೇಮ್ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ವಿಜಯ ಬಿರಾದಾರ, ಇನ್ಸ್‌ಪೆಕ್ಟರ್‌ ಮಹಾಂತೇಶ್ ಟಿ. ಹಾಗೂ 10ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ತೋಂಟದ ಶ್ರೀ ಕಣ್ಣಂಚಿನಲ್ಲಿ ಹಸಿರು ಸೊಗಸು…

ಮುಂಗಾರು ಋತುವಿನಲ್ಲಿ ಹಚ್ಚು ಹಸಿರಾಗಿ ಕಂಗೊಳಿಸುವ ಆಲಮಟ್ಟಿ ಧರೆಯ ಮೇಲಿನ ನೈಸರ್ಗಿಕ ಹಸಿರಿನ ಕಾವ್ಯ ವೈಭವವನ್ನು ಗದುಗಿನ ತೋಂಟದಾರ್ಯ ಸಂಸ್ಥಾನಮಠದ ಪೀಠಾಧಿಪತಿ ತೋಂಟದ ಡಾ. ಸಿದ್ದರಾಮ ಮಹಾಸ್ವಾಮೀಜಿಯವರು ಕಣ್ತುಂಬಿಸಿಕೊಂಡು ಖುಷಿ ಪಟ್ಟರು.

ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 11923…

ಅಮೇರಿಕಾದಲ್ಲಾದ ಹಾನಿಯನ್ನು ಚೀನಾ ದೇಶವೇ ತುಂಬಿಕೊಲಿ:ಟ್ರಂಪ್ ಆಗ್ರಹ..!

ಚೀನಾದ ನಿಷ್ಕಾಳಜಿಯೇ ಕೊರೋನಾ ಸೋಂಕು ವ್ಯಾಪಕವಾಗಲು ಕಾರಣ ಹೀಗಾಗಿ ನಮಗೆ ಆಗಿರುವ ಹಾನಿಯನ್ನು ತುಂಬಿಕೊಡುವಂತೆ ಚೀನಾ ದೇಶವನ್ನು ಆಗ್ರಹಿಸುತ್ತೇನೆ ಎಂದು ಅಮೇರಿಕಾ ಅಧ್ಯಕ್ಷ ಟ್ರಂಪ್ ಅಸಮಾಧಾನ ಹೊರಹಾಕಿದರು.

ಗದಗ ಜಿಲ್ಲೆಗೂ ಒಂದು ವಾರದ ಲಾಕ್ಡೌನ್?

ಸಿಎಂ ಯಡಿಯೂರಪ್ಪ ಸೋಂಕು ಹೆಚ್ಚುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡೀಯೋ ಸಂವಾದ ನಡೆಸುತ್ತಿದ್ದಾರೆ. ಅಭಿಪ್ರಾಯ ಆಧರಿಸಿ ಲಾಕ್ ಡೌನ್ ಜಾರಿ ಮಾಡಬಹುದು ಎನ್ನಲಾಗಿದೆ.