ಉತ್ತರಪ್ರಭ

ಮುಂಡರಗಿ: ಗದಗ ಪೊಲೀಸರು ಅಂದರ್ ಬಾಹರ್ ಅಡ್ಡೆ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಕ್ಷಾಂತರ ರೂಪಾಯಿ ಜೂಜಾಟದಲ್ಲಿ ಅಂದರೆ ಅಂದರ್ ಬಾಹರ್ ಆಡುತ್ತಿದ್ದ ಸರ್ಕಾರಿ ನೌಕರ ಸೇರಿದಂತರ 17 ಜನರು ಮೇಲೆ ಪ್ರಕರಣ ದಾಖಲಾಗಿದೆ.


ಹೌದು‌ ಇದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಿದರಹಳ್ಳಿ ಬಳಿ ಅಂದರ್ ಬಾಹರ್ ಆಡುತ್ತಿದ್ದವರ ಮೇಲೆ ದಾಳಿ ನಡೆಸಿದ ಪೊಲೀಸರು ಬೇರೆ ಬೇರೆ ಜಿಲ್ಲೆಯ ಜೂಜುಕೋರರ ಮೇಲೆ ಪೋಲಿಸರು ಕಾರಯಾಚರಣೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ಡಿ ದೇವರಾಜು ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ಪಂಡ್ ಅಡ್ಡೆಯ ಮೇಲೆ ದಾಳಿ ನಡೆಸಿ 17 ಆರೋಪಿಗಳಿಂದ ಒಟ್ಟು 14.83 ಲಕ್ಷ ರೂ. ಹೆಚ್ಚಿನ ಹಣ, 04 ಕಾರು ಹಾಗೂ 18 ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ.
ಇದರಲ್ಲಿ ಅಚ್ಚರಿಯೆಂದರೆ ಸರ್ಕಾರಿ ನೌಕರನು ಭಾಗಿ ಆಗಿದ್ದು, ಬೇರೆ ಬೇರೆ ವೃತ್ತಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ . ಗದಗ ಮೂಲದವರು ಪರಾರಿಯಾಗಿದ್ದು ಬೇರೆ ಜಿಲ್ಲೆಗಳಾದ ಚಿತ್ರದುರ್ಗ, ಹಾವೇರಿ, ದಾವಣಗೆರೆ, ವಿಜಯನಗರ, ಬಳ್ಳಾರಿಯ ಆರೋಪಿಗಳು ಸೆರೆ ಸಿಕ್ಕದ್ದಾರೆ. ಆರೋಪಿಗಳ ಮೇಲೆ ಕೆ.ಪಿ ಆ್ಯಕ್ಟ್ 87 ಕಲಂನಡಿ ಜೂಜಾಟದ ಕೇಸ್ ದಾಖಲಿಸಲಾಗಿದೆ.
ಫಂಡ್ ಗೇಮ್ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ವಿಜಯ ಬಿರಾದಾರ, ಇನ್ಸ್‌ಪೆಕ್ಟರ್‌ ಮಹಾಂತೇಶ್ ಟಿ. ಹಾಗೂ 10ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ದಲಿತರು ಕುಡಿದ ಚಹಾ ಕಪ್ ತೊಳೆದ ತಹಶೀಲ್ದಾರ

ಯಾರಿಗೆ ಬಂತು? ಎಲ್ಲಿಗೆ ಬಂತು ನಲವತ್ತೇಳರ ಸ್ವಾತಂತ್ರ‍್ಯ, ಸಿದ್ಧಲಿಂಗಯ್ಯನವರ ಈ ಕವಿತೆ ಕೇಳುತ್ತಲೇ ಅನೇಕರ ಯೋಚನೆ ಅಸ್ಪೃಶ್ಯತೆ ಕಡೆಗೆ ಹೊರಳುತ್ತವೆ. ಅಸ್ಪೃಶ್ಯತೆ ಇನ್ನು ಜೀವಂತವಿರುವ ಇಂತಹ ವರ್ತಮಾನದಲ್ಲಿ ತಹಶೀಲ್ದಾರರೊಬ್ಬರು ಅಸ್ಪೃಶ್ಯತೆ ಬಗ್ಗೆ ಜಾಗೃತಿ ಮೂಡಿಸಲು ದಲಿತರು ಕುಡಿದ ಚಹ ಕಪ್ ತೊಳೆದರೆ? ಎಸ್! ಮುಂಡರಗಿ ತಹಶೀಲ್ದಾರ್ ಆಶಪ್ಪ ಪೂಜಾರ್ ಅವರು ಮಾಡಿದ್ದು ಅದನ್ನೇ.

ಅಂದಪ್ಪ ಸಂಕನೂರ ಹುಟ್ಟು ಹಬ್ಬ ಪ್ರಯುಕ್ತ ರಕ್ತದಾನ: ರಕ್ತದಾನದಿಂದ ಜೀವ ಉಳಿಸಿದ ಪುಣ್ಯಪ್ರಾಪ್ತಿ

ದಾನಗಳಲ್ಲಿಯೇ ಶ್ರೇಷ್ಠತೆಯನ್ನು ಪಡೆದ ರಕ್ತದಾನದಿಂದ ಮತ್ತೊಂದು ಜೀವ ಉಳಿಸಿದ ಪುಣ್ಯ ಪ್ರಾಪ್ತಿಯಾಗುತ್ತದೆ. ಈ ನಿಟ್ಟಿನಲ್ಲಿ ರಕ್ತದಾನ ಮಾಡುವ ಮೂಲಕ ಅಂದಪ್ಪ ಸಂಕನೂರ ಅವರ ಜನ್ಮದಿನ ಆಚರಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ

ಇಬ್ರಾಹಿಂ ಸುತಾರ ಅವರಿಗೆ ಶ್ರದ್ಧಾಂಜಲಿ

ಮುಳಗುಂದ : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಕನ್ನಡದ ಕಬೀರ ಎಂದೆ ಖ್ಯಾತರಾಗಿದ್ದ ಇಬ್ರಾಹಿಂ ಸುತಾರ ಅವರು…

ಆಲಮಟ್ಟಿ ಜಲಾಶಯ ಭದ್ರತಾ ಪಡೆ ಇನ್ಸ್‌ಪೆಕ್ಟರ್ ಮರನೂರ ಸೇವೆಯಿಂದ ಅಮಾನತ್ತು

ಆಲಮಟ್ಟಿ : ಆಲಮಟ್ಟಿ ಜಲಾಶಯ ಭದ್ರತಾ ಕರ್ತವ್ಯಕ್ಕೆ ನಿಯೋಜನೆವಾಗಿದ್ದ ಕೆ.ಎಸ್.ಐ.ಎಸ್.ಎಫ್. 3 ನೇ ಪಡೆ ಪೋಲಿಸ್…