ಉತ್ತರಪ್ರಭ

ಮುಂಡರಗಿ: ಗದಗ ಪೊಲೀಸರು ಅಂದರ್ ಬಾಹರ್ ಅಡ್ಡೆ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಕ್ಷಾಂತರ ರೂಪಾಯಿ ಜೂಜಾಟದಲ್ಲಿ ಅಂದರೆ ಅಂದರ್ ಬಾಹರ್ ಆಡುತ್ತಿದ್ದ ಸರ್ಕಾರಿ ನೌಕರ ಸೇರಿದಂತರ 17 ಜನರು ಮೇಲೆ ಪ್ರಕರಣ ದಾಖಲಾಗಿದೆ.


ಹೌದು‌ ಇದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಿದರಹಳ್ಳಿ ಬಳಿ ಅಂದರ್ ಬಾಹರ್ ಆಡುತ್ತಿದ್ದವರ ಮೇಲೆ ದಾಳಿ ನಡೆಸಿದ ಪೊಲೀಸರು ಬೇರೆ ಬೇರೆ ಜಿಲ್ಲೆಯ ಜೂಜುಕೋರರ ಮೇಲೆ ಪೋಲಿಸರು ಕಾರಯಾಚರಣೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ಡಿ ದೇವರಾಜು ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ಪಂಡ್ ಅಡ್ಡೆಯ ಮೇಲೆ ದಾಳಿ ನಡೆಸಿ 17 ಆರೋಪಿಗಳಿಂದ ಒಟ್ಟು 14.83 ಲಕ್ಷ ರೂ. ಹೆಚ್ಚಿನ ಹಣ, 04 ಕಾರು ಹಾಗೂ 18 ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ.
ಇದರಲ್ಲಿ ಅಚ್ಚರಿಯೆಂದರೆ ಸರ್ಕಾರಿ ನೌಕರನು ಭಾಗಿ ಆಗಿದ್ದು, ಬೇರೆ ಬೇರೆ ವೃತ್ತಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ . ಗದಗ ಮೂಲದವರು ಪರಾರಿಯಾಗಿದ್ದು ಬೇರೆ ಜಿಲ್ಲೆಗಳಾದ ಚಿತ್ರದುರ್ಗ, ಹಾವೇರಿ, ದಾವಣಗೆರೆ, ವಿಜಯನಗರ, ಬಳ್ಳಾರಿಯ ಆರೋಪಿಗಳು ಸೆರೆ ಸಿಕ್ಕದ್ದಾರೆ. ಆರೋಪಿಗಳ ಮೇಲೆ ಕೆ.ಪಿ ಆ್ಯಕ್ಟ್ 87 ಕಲಂನಡಿ ಜೂಜಾಟದ ಕೇಸ್ ದಾಖಲಿಸಲಾಗಿದೆ.
ಫಂಡ್ ಗೇಮ್ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ವಿಜಯ ಬಿರಾದಾರ, ಇನ್ಸ್‌ಪೆಕ್ಟರ್‌ ಮಹಾಂತೇಶ್ ಟಿ. ಹಾಗೂ 10ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕತ್ತಲೆ ಸೀಳಿ ಬೆಳಕು ಮೂಡಿಸಿದ ಸ್ವರಾಜ್ಯ ಸೂರ್ಯ ಗಾಂಧಿ: ಡಾ. ಸವಿತಾ ದೇಸಾಯಿ

ನಿಡಗುಂದಿ : ಲೋಕಮಾನ್ಯ ತಿಲಕರು ತೀರಿದ ನಂತರ ಸ್ವಾತಂತ್ರ್ಯ ಸಂಗ್ರಾಮದ ಬಾನಂಗಳದಲ್ಲಿ ಕವಿದಿದ್ದ ಕತ್ತಲನ್ನು ಸತ್ಯ,…

ಶಿರಹಟ್ಟಿ: ನೂತನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಉದ್ಘಾಟನೆ

ಕಳೆದ ಹತ್ತು ತಿಂಗಳಿನಿಂದ ನೆನೆಗುದಿಗೆ ಬಿದಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕಾ ನೂತನ ಕೇಂದ್ರ ಕಚೇರಿಯನ್ನು ಮಂಗಳವಾರ ಶಾಸಕ ರಾಮಣ್ಣ ಲಮಾಣಿ ಉದ್ಘಾಟಿಸಿದರು.

ಗದಗನಲ್ಲಿ ಗೂಳಿ ಕಾಳಗ: ವಾಹನ ಸವಾರರ ಪರದಾಟ!

ನಗರದಲ್ಲಿ ಬಿಡಾಡಿ ದನಗಳ ಕಾಟ ಹೆಚ್ಚಾಗಿದೆ. ರಸ್ತೆಯ ಮಧ್ಯೆಯೇ ಪ್ರತಿ ದಿನ ಬಿಡಾಡಿ ದಿನಗಳ ಕಾದಾಟ ಸಾಮಾನ್ಯವಾಗಿ ಬಿಟ್ಟಿದೆ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ.

ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ಮಾಡಿದ ಬಿಜೆಪಿ ಕಾರ್ಯಕರ್ತರು

ಲಕ್ಷ್ಮೇಶ್ವರ: ಪಟ್ಟಣದ ಶಿಗ್ಲಿ ಕ್ರಾಸ್ ನಲ್ಲಿ ಸರ್ಕಲ್ ನಲ್ಲಿ ಬಿಜೆಪಿ ಯುವಮೋರ್ಚಾ ಶಿರಹಟ್ಟಿ ಘಟಕ ಹಾಗೂ…