ಉತ್ತರಪ್ರಭ ಸುದ್ದಿ
ಗದಗ:
ಗದಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಗದಗ, ಮುಂಡರಗಿ, ಶಿರಹಟ್ಟಿ, ಲಕ್ಷೆö್ಮÃಶ್ವರ, ನರಗುಂದ ಮತ್ತು ಗಜೇಂದ್ರಗಡ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಝಾದ ಮಾದರಿ ಶಾಲೆಗಳಿಗೆ 2022-23 ನೇ ಸಾಲಿಗೆ 6 ನೇ ತರಗತಿ ಒಟ್ಟು 360 ವಿದ್ಯಾರ್ಥಿಗಳ ದಾಖಲಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದರಲ್ಲಿ 75% ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಹಾಗೂ 25% ರಷ್ಟು ಇತರೇ ವರ್ಗದವರಿಗೆ ವಿತರಿಸಲಾಗುವುದು. ಅಂಗವಿಕಲ ವಿದ್ಯಾರ್ಥಿಗಳು, ವಿಶೇಷ ಗುಂಪಿಗೆ ಸೇರಿದ ಅಂದರೆ ಅನಾಥ ಮಕ್ಕಳು, ವಿಧವೆಯರ ಮಕ್ಕಳು, ಪೌರ ಕಾರ್ಮಿಕರ ಮಕ್ಕಳು ಇತ್ಯಾದಿಗಳಿಗೆ 3% ರಷ್ಟು ಆಸನಗಳನ್ನು ಕಾಯ್ದಿರಿಸಲಾಗಿದೆ 6ನೇ ತರಗತಿಗೆ ದಾಖಲಾತಿ ಬಯಸುವ ವಿದ್ಯಾರ್ಥಿಗಳು 5 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು, ಅರ್ಜಿಗಳನ್ನು ದಿ:30-04-2022 ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗದಗ ಇವರನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಕೆಳಕಂಡ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ.


ಗದಗ: ದೂ.ಸಂ. 9901132191; ರೋಣ: ದೂ.ಸಂ. 849485588; ಮುಂಡರಗಿ: ದೂ.ಸಂ. 9916689778; ಶಿರಹಟ್ಟಿ: ದೂ.ಸಂ. 7144799182; ನರಗುಂದ: ದೂ.ಸಂ. 9901501170

ಜಾಹಿರಾತು
Leave a Reply

Your email address will not be published. Required fields are marked *

You May Also Like

ಯುವಜನ ಸಂಕಲ್ಪ ಯಾತ್ರೆಗೆ ಅದ್ದೂರಿ ಚಾಲನೆ ಯುವಜನತೆಯಲ್ಲಿ ಉಕ್ಕಿದ ದೇಶ ಭಕ್ತಿ

ಆಲಮಟ್ಟಿ : ರಾಷ್ಟ್ರಧರ್ಮ ದೃಷ್ಟಾರ,ನೈಷ್ಟಿಕ ಬ್ರಮ್ಮಚಾರಿ,ಸಮಾಜಮುಖಿಯ ಅದಮ್ಯ ಚೇತನ, ಕನಾ೯ಟಕ ಗಾಂಧಿ ಹಡೇ೯ಕರ ಮಂಜಪ್ಪನವರ ಕರ್ಮಭೂಮಿಯಲ್ಲಿಂದು…

ಲಾಕ್ ಡೌನ್ ಅವಧಿಯಲ್ಲಿ ಶಾಲೆ ಶೃಂಗಾರ ಮಾಡಿದ ಅಕ್ಷರದಾತರು

ಲಾಕ್ ಡೌನ್ ಪರಿಣಾಮ ಶಾಲೆಗಳ ಬಾಗಿಲು ಮುಚ್ಚಿದ ವಿಚಾರ ಎಲ್ಲರಿಗೂ ಗೊತ್ತಿದೆ. ಆದ್ರೆ ಶಾಲೆ ಬಾಗಿಲು ಮುಚ್ಚಿದ ಅವಧಿಯನ್ನೇ ಸದ್ಬಳಕೆ ಮಾಡಿಕೊಂಡು ಶಿಕ್ಷಕರು ಶಾಲೆಯನ್ನ ಮದುವಣಗಿತ್ತಿಯಂತೆ ಶೃಂಗಾರ ಮಾಡಿದ್ದಾರೆ. ಶಾಲೆ ಗೋಡೆಗಳಲ್ಲಿ ಶೈಕ್ಷಣಿಕ ಬೀಜ ಬಿತ್ತಿ ಫಲಕ್ಕಾಗಿ ಕಾಯುತ್ತಿದ್ದಾರೆ ಅಕ್ಷರದಾತರು.

ವಿದ್ಯೆಗಿಂತ ಮಿಗಿಲಾದ ಸಂಪತ್ತು ಮತ್ತೊಂದಿಲ್ಲ- ಶಿವಾನಂದ ಪಟ್ಟಣಶೆಟ್ಚರ

ಚಿತ್ರ ವರದಿ: ಗುಲಾಬಚಂದ ಜಾಧವಆಲಮಟ್ಟಿ : ಹೊಸ ಶಿಕ್ಷಣ ನೀತಿ ಬಂದಿದೆ. ಸ್ಪಧಾ೯ತ್ಮಕ ಮನೋಭಾವ ವಿದ್ಯಾರ್ಥಿಗಳಲ್ಲಿ…

ಲಿಂ, ತೋಂಟದ ಸಿದ್ದಲಿಂಗ ಶ್ರೀ ಆದರ್ಶಗಳ ಮೇರು ಪರ್ವತ – ಡಾ.ಸಿದ್ದರಾಮ ಸ್ವಾಮೀಜಿ ಅಭಿಮತ

ಸಚಿತ್ರ ವರದಿ : ಗುಲಾಬಚಂದ ಜಾಧವ ಗದಗ : ಕ್ರಿಯಾಶೀಲತೆಯ ಮಾತೃ ಹೃದಯಿ ಲಿಂಗೈಕ್ಯ ಡಾ.ತೋಂಟದ…