ಉತ್ತರಪ್ರಭ ಸುದ್ದಿ
ಗದಗ: ಪರೀಕ್ಷಾ ಕೊಠಡಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ್ದ ಪ್ರಕರಣ. ಐವರು ಮೇಲ್ವಿಚಾರಕರು, ಇಬ್ಬರು ಅಧೀಕ್ಷಕರು ಸೇರಿದಂತೆ ಏಳು ಜನರ ಅಮಾನತ್ತು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇಂದು ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯು ನಗರದ ಸಿಎಸ್ ಪಾಟೀಲ ಪ್ರೌಢ ಶಾಲೆಯ ನಡೆಸಲಾಯಿತು.

ಈ ಸಂದರ್ಭದಲ್ಲಿ ಕೆಲ ವಿದ್ಯಾರ್ಥಿನಿಯರು ಪರೀಕ್ಷಾ ಕೊಠಡಿಯಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆ ಗೆ ಅವಕಾಶ ನೀಡಿದ್ದ ಶಿಕ್ಷಕರು ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ.ಮಾರ್ಚ್ 28 ರಂದು ನಡೆದಿದ್ದ ಪ್ರಥಮ ಭಾಷೆ ಪರೀಕ್ಷೆ ವೇಳೆ ಹಿಜಾಬ್ ಗೆ ಅವಕಾಶ ನೀಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ವರದಿ ಹಿನ್ನೆಲೆ ಪರೀಕ್ಷಾ ಮೇಲ್ವಿಚಾರಕರು, ಸೂಪರಿಟೆಂಡೆಂಟ್ ಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪರೀಕ್ಷಾ ಕೇಂದ್ರದ ಅಧೀಕ್ಷಕರು ಕೆಬಿ ಭಜಂತ್ರಿ, ಬಿಎಸ್ ಹೊನ್ನಗುಡಿ,ಕೊಠಡಿ ಮೇಲ್ವಿಚಾರಕರಾದ ಎಸ್ ಜಿ ಗೋಡಕೆ, ಎಸ್ ಎಸ್ ಗುಜಮಾಗಡಿ, ವಿಎನ್ ಕಿವುಡರ್, ಎಸ್ ಯು ಹೊಕ್ಕಳದ, ಎಸ್ ಎಮ್ ಪತ್ತಾರ ಅವರನ್ನೂ ಅಮಾನತು ಮಾಡಿ ತಕ್ಷಣಕ್ಕೆ ಜಾರಿಯಾಗುವಂತೆ ಏಳು ಜನರನ್ನ ಅಮಾನತು ಮಾಡಿ ಗದಗ ಡಿಡಿಪಿಐ ಜಿ ಎಮ್ ಬಸವಲಿಂಗಪ್ಪ ಆದೇಶ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಬಿಕ್ಕಟ್ಟು – ಹೊಸ ಮಾರ್ಗಸೂಚಿಯ ಮೊರೆ ಹೋದ ಸರ್ಕಾರ!

ಬೆಂಗಳೂರು: ಸದ್ಯ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ಬೇರೆ ಬೇರೆ ರಾಜ್ಯಗಳಿಂದಲೂ ಜನರು ರಾಜ್ಯಕ್ಕೆ…

ಕೊರ್ಲಹಳ್ಳಿ ಟೋಲ್ ನಾಕಾ ಸಿಬ್ಬಂದಿ ಗೂಂಡಾಗಿರಿ..!

ಮುಂಡರಗಿ: ಟೋಲ್ ನಾಕಾ ಹಣದ ವಿಚಾರಕ್ಕೆ ಸಂಬಂಧ ಪಟ್ಟಂತೆ ಟೋಲ್ ಸಿಬ್ಬಂಧಿಗಳು ಗೂಂಡಾಗಿರಿ ನಡೆಸಿದ್ದು ನಾಲ್ವರನ್ನು…

ಮಹಾದೇವಪ್ಪ ಬಸಪ್ಪ ಹೆಬ್ಬಾಳ ನಿಧನ

ಆಲಮಟ್ಟಿ:ಬಸವನಬಾಗೇವಾಡಿ ತಾಲ್ಲೂಕಿನ ಮಣ್ಣೂರ ಗ್ರಾಮದ ಲಿಂಗಾಯತ ಸಮಾಜದ ಮುಖಂಡ ಮಹಾದೇವಪ್ಪ ಬಸಪ್ಪ ಹೆಬ್ಬಾಳ (69) ಶುಕ್ರವಾರ…

ಸಂವಿಧಾನಕ್ಕೆ ತೆಲೆ ಬಾಗಿ ನಡೆದರೆ ಬದುಕು ಪಾವನ ಮಕ್ಕಳು ಶೈಕ್ಷಣಿಕ ಪ್ರಭಲತೆ ಸಾಧಿಸಬೇಕು – ಜಿ.ಎಂ.ಕೋಟ್ಯಾಳ

ಆಲಮಟ್ಟಿ : ಸರಕಾರ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಹಾಗು ಮಕ್ಕಳ ಕಲಿಕೆಯ ಪ್ರಗತಿಗಾಗಿ ನಾನಾ ಬಗೆಯ…