ಉತ್ತರಪ್ರಭ ಸುದ್ದಿ
ಗದಗ:
ನಾಡು ಮೆಚ್ಚಿದ ಜನನಾಯಕ, ಸಹಕಾರ ರಂಗದ ಭೀಷ್ಮ ದಿ. ಕೆ.ಎಚ್. ಪಾಟೀಲ ಅವರ ಧರ್ಮಪತ್ನಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಧುರೀಣ ಹಾಗೂ ಶಾಸಕ ಶ್ರೀ ಎಚ್.ಕೆ.ಪಾಟೀಲರ ಮಾತೋಶ್ರೀಯವರಾದ ಶ್ರೀಮತಿ ಪದ್ಮಾವತಿ ಕೆ. ಪಾಟೀಲರು ಇಂದು ಮಧ್ಯಾಹ್ನ 4 ಗಂಟೆಗೆ ಸ್ವರ್ಗವಾಸಿಗಳಾದರೆಂದು ತಿಳಿಸಲಾಗಿದೆ.
88 ವಸಂತಗಳ ತುಂಬುಜೀವನ ನಡೆಸಿದ ಶ್ರೀಮತಿ ಪದ್ಮಾವತಿಯವರು ಕೆಲಕಾಲದಿಂದ ವೃದ್ಧಾಪ್ಯ ಸಹಜ ತೊಂದರೆಗಳಿoದ ಬಳಲುತ್ತಿದ್ದರು. ಅವರು ತಮ್ಮ ಹಿಂದೆ ಇಬ್ಬರು ಪುತ್ರರಾದ ಎಚ್.ಕೆ.ಪಾಟೀಲ ಹಾಗೂ ಪಿ.ಕೆ.ಪಾಟೀಲರು, ಸೊಸೆಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳನ್ನು ಅಪಾರ ಬಂಧು-ಬಳಗವನ್ನು ಬಿಟ್ಟು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಹುಲಕೋಟಿಯ ಮುಕ್ತಿಧಾಮದಲ್ಲಿ ನಾಳೆ ದಿನಾಂಕ 5 ರಂದು ಮಂಗಳವಾರ ಮಧ್ಯಾಹ್ನ 2 ಗಂಟೆಗೆ ನೆರವೇರಲಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

You May Also Like

ಕೊರ್ಲಹಳ್ಳಿ: ಕುಡಿಯುವ ನೀರಿನ ಪೈಪ್ ಒಡೆದು ನೀರು ಪೋಲು!

ಗದಗ ನಗರಕ್ಕೆ ಸರಬರಾಜಾಗುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಿಂದ ಗದಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಇದಾಗಿದೆ. ಕೊರ್ಲಹಳ್ಳಿ ಸಮೀಪದಲ್ಲಿ ಹೆದ್ದಾರಿ ಪಕ್ಕದಲ್ಲಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.

ಶಿರಹಟ್ಟಿ ತಾಲೂಕ ದೇವಿಹಾಳ ತಾಂಡಾ ಬಗರಹುಕುಮ್ ಸಾಗುವಳಿ; ಸದನದಲ್ಲಿ ಚರ್ಚಿಸಲು ವಿರೋಧ ಪಕ್ಷದ ನಾಯಕರಿಗೆ – ರವಿಕಾಂತ ಅಂಗಡಿ ಒತ್ತಾಯ

ಉತ್ತರಪ್ರಭ ಸುದ್ದಿಗದಗ: ಶಿರಹಟ್ಟಿ ತಾಲೂಕ ದೇವಿಹಾಳ ತಾಂಡಾದ ಬಗರ ಹುಕುಮ್ ಸಾಗುವಳಿದಾರರಿಗೆ ಅರಣ್ಯ ಇಲಾಖೆಯಿಂದ ಸಾಗುವಳಿ…

ನಗರ ಸಭೆ ಚುನಾವಣೆ: 35 ನೇ ವಾರ್ಡ ಬಿಜೆಪಿ ಪಾಲಿಗೆ

ಗದಗ ಬೇಟಗೇರಿ:ನಗರ ಸಭೆ 35ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 35ನೇ  ವಾರ್ಡನಲ್ಲಿ ಬಿಜೆಪಿಗೆ…

11 ಎಕರೆ ಹೊಲದಾನ್ ಗೋವಿನ ಜೋಳ ಬೆಂಕಿಗೆ ಆಹುತಿ!

ಆಕಸ್ಮಿಕ ಬೆಂಕಿಗೆ ಮೆಕ್ಕೆಜೋಳ ಸುಟ್ಟು ಭಸ್ಮಗೊಂಡ ಘಟನೆ ಗದಗ ಜಿಲ್ಲೆಯ ನಾಗಾವಿ ತಾಂಡಾದಲ್ಲಿ ನಡೆದಿದೆ. ಇದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ನಾಶವಾಗಿದೆ. ಲಕ್ಷ್ಮಣ್ ಪವಾರ್ ಎಂಬುವರಿಗೆ ಸೇರಿದ 11 ಎಕರೆ ಜಮೀನಿನಲ್ಲಿ ಬೆಳೆದಿದ್ದ ಅಂದಾಜು 2.5 ಲಕ್ಷ ರೂ. ಮೌಲ್ಯದ ಬೆಳೆ ನಾಶವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಿದಿಸಲು ಪ್ರಯತ್ನಿಸಿದರು.