ಉತ್ತರಪ್ರಭ

ಗದಗ: ಪೋಕ್ಸೊ ಕಾಯ್ದೆಯಡಿ ಗದಗ ಜಿಲ್ಲಾ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಖೈದಿಯೊಬ್ಬ ಕಟ್ಟಡದ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಜಾಮೀನು ಸಿಕ್ಕ ಬೆನ್ನಲ್ಲೇ ಇಂತಹ ಘಟನೆ ನಡೆದಿದೆ. ಗದಗ ಜಿಲ್ಲೆಯ ಗದಗ ತಾಲೂಕಿನ ಅಡವಿ ಸೋಮಾಪುರ ತಾಂಡಾದ ರಾಜು ಪಾಂಡಪ್ಪ ಲಮಾಣಿ ಎಂದು ತಿಳಿದು ಬಂದಿದೆ.

ಘಟನೆ ಹಿನ್ನಲೆ: ಅಡವಿ ಸೋಮಾಪುರ ತಾಂಡಾದ ರಾಜು ಪಾಂಡಪ್ಪ ಲಮಾಣಿ ಗದಗನ ಜೆಟಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮತ್ತು ಅದೇ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಅಡವಿ ಸೋಮಾಪುರ ತಾಂಡಾದ ಅಪ್ರಾಪ್ತ ವಯಸ್ಸಿನ ಯುವತಿಯನ್ನು (16ವರ್ಷ 7 ತಿಂಗಳು) ಪ್ರೀತಿಸುತ್ತಿದ್ದ. ತಾನು ಪ್ರೀತಿಸುತ್ತಿದ್ದ ಹುಡುಗಿಯನ್ನು ಗೋವಾಗೆ ಕರೆದುಕೊಂಡು ಹೋಗಿದ್ದು ಈ ಕುರಿತು ಹುಡುಗಿಯ ಮನೆಯವರು ಗದಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಾಣೆ ಪ್ರಕರಣ ದಾಖಲಿಸಲಾಗಿತ್ತು. ಹುಡುಗಿ ಅಪ್ರಾಪ್ತ ಇರುವುದರಿಂದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಕಳೆದ 20-25 ದಿನಗಳ ಹಿಂದೆಯಷ್ಟೇ ರಾಜು ಲಮಾಣಿ ಜೈಲಿನಲ್ಲಿದ್ದ ಎನ್ನಲಾಗಿದೆ.

ಹುಡುಗಿಯ ಮನೆಯವರು ಗುರುವಾರ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ, ಜಾಮೀನು ಮೇಲೆ ಬಿಡುಗಡೆಯಾದರೂ ನಿನ್ನನ್ನು ಬಿಡುವುದಿಲ್ಲ ಎಂದು ಬೆದರಿಕೆ ಹಾಕಲಾಗಿದ್ದು, ಆದ್ದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಆತ್ಮಹತ್ಯೆಗೆ ಜೈಲು ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿದ ಮೃತ ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

Leave a Reply

Your email address will not be published. Required fields are marked *

You May Also Like

ಅಗಡಿ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ ಆರಂಭ

ನಗರದ ಪ್ರತಿಷ್ಠಿತ ಶ್ರೀಮತಿ.ಕಮಲಾ ಹಾಗೂ ಶ್ರೀ.ವೆಂಕಪ್ಪ ಎಂ ಅಗಡಿ ಇಂಜನೀಯರಿಂಗ್ ಕಾಲೇಜು,ಲಕ್ಷ್ಮೇಶ್ವರದಲ್ಲಿ ಸಿಇಟಿ ಆಪ್ಷನ್ ಎಂಟ್ರಿ ಸಹಾಯ ಕೇಂದ್ರ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದಂತಹ ಡಾ.ಉದಯಕುಮಾರ ಹಂಪಣ್ಣವರ ತಿಳಿಸಿದ್ದಾರೆ.

ಕೋಳಿಗೆ ಡಿಸೆಂಟ್ರಿಯಂತೆ..! ಕಾರಣ ಹೇಳಿ ಹೊರಬಂದ ವ್ಯಕ್ತಿಯ ಮಾತು ಕೇಳಿ..!

ಗದಗ: ಕೋಳಿಗೆ ಭೇದಿ, ಆಸ್ಪತ್ರೆಗೆ ಕರೆದುಕೊಂಡು ಹೋಗ್ತಿದ್ದೇನೆ. ಹೀಗಂತ ಕಾರಣ ನೀಡಿದ ವ್ಯಕ್ತಿ ಮಾತಿಗೆ ಪೊಲೀಸರೆ ಸುಸ್ತಾದರು. ಲಾಕ್ ಡೌನ್ ಹಿನ್ನೆಲೆ ಅನಾವಶ್ಯಕ ಓಡಾಟಕ್ಕೆ ಬ್ರೇಕ್ ಬಿದ್ದಿದೆ.

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ: ಗದಗನಲ್ಲಿ ಜನ ಜಾಗೃತಿ ರಥಕ್ಕೆ ಚಾಲನೆ

ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸಂಘ ಇವರ ಸಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜನಜಾಗೃತಿ ರಥಕ್ಕೆ ಜಿಲ್ಲಾಡಳಿತ ಭವನದಲ್ಲಿಂದು ಚಾಲನೆ ನೀಡಲಾಯಿತು.

ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಮೊಸಳೆ ಪತ್ತೆ ಕಾರ್ಯ

ಮಲಪ್ರಭಾ ನದಿಯಲ್ಲಿ ನಿನ್ನೆಯಷ್ಟೆ ಮೊಸಳೆ ಪ್ರತ್ಯಕ್ಷವಾಗಿದ್ದು, ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿತ್ತು. ಜಿಲ್ಲೆ ರೋಣ ತಾಲೂಕಿನ ಹೊಳೆಆಲೂರ ಗ್ರಾಮದ ಬಳಿಯ ಮಲಪ್ರಭಾ ನದಿಯಲ್ಲಿಯೇ ಮೊಸಳೆ ಕಂಡು ಬಂದಿತ್ತು.