ಉತ್ತರಪ್ರಭ

ನರೆಗಲ್ಲ: ಪಶ್ಚಿಮ ಶಿಕ್ಷಕರ ವಿಧಾನ ಪರಿಷತ್ ಕ್ಷೇತ್ರ ಪ್ರಜ್ಞಾವಂತರನ್ನು ಒಳಗೊಂಡ ಪವಿತ್ರ ಕ್ಷೇತ್ರವಾಗಿದ್ದು ಈ ಬಾರಿಯು ಹೊರಟ್ಟಿಯವರ ದಾಖಲೆ ಗೆಲುವಿಗೆ ಎಲ್ಲರೂ ಕೈಜೋಡಿಸಬೇಕಾಗಿದೆ ಎಂದು ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಗೌರವಾಧ್ಯಕ್ಷ ಬಸವರಾಜ ಧಾರವಾಡ ಹೇಳಿದರು.ಅವರು ಪಟ್ಟಣದ ಪತ್ರಿಕಾ ಭವನದಲ್ಲಿ ನಡೆದ ,ಬಸವರಾಜ ಪಥ.ಪುಸ್ತಕ ಬಿಡುಗಡೆಯ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಬಸವರಾಜ ಹೊರಟ್ಟಿಯವರು ಪಕ್ಷಾತೀತ, ಜ್ಯಾತ್ಯಾತೀತ ನಾಯಕರಾಗಿ ಸುದೀರ್ಘ 42 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡಿದ್ದು ತಮ್ಮ ಅಧಿಕಾರಾವಧಿಯಲ್ಲಿ ಶಿಕ್ಷಕರ ನೇಮಕ.ಹಾಗೂ ಅನುದಾನ ರಹಿತ ಖಾಸಗಿ ಶಾಲಾ ಕಾಲೇಜಗಳಿಗೆ ಅನುದಾನ.ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಿದ್ದಾರೆ.ಇಂಥ ಒಬ್ಬ ಹುಟ್ಟು ಹೋರಾಟಗಾರನ ವಿರುದ್ಧ ಮಾತನಾಡುವವರ ವಿರುದ್ಧ ರಾಜ್ಯ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘ ಖಂಡಿಸುತ್ತದೆ ಪರೋಕ್ಷವಾಗಿ ಮೋಹನ ಲಿಂಬಿಕಾಯಿಯವರಿಗೆ ಎಚ್ಚರಿಕೆ ನೀಡಿದರು.

ಮೋಹನ ಲಿಂಬಿಕಾಯಿಯವರು ಹತಾಶರಾಗಿ ಮಾತನಾಡುದನ್ನು ಬಿಡಬೇಕು ತಮ್ಮ ಪಕ್ಷದ ಆಂತರಿಕ ವಿಚಾರಗಳನ್ನು ಹಿರಿಯ ಮುಖಂಡರ ಜೊತೆಗೆ ಚರ್ಚಿಸಬೇಕು ಅದನ್ನ ಬಿಟ್ಟು ಅಸಂವಿಧಾನಿಕವಾಗಿ ಮಾತನಾಡಿದರೆ ನಾವು ಸಹಿಸುವುದಿಲ್ಲ. ಹೊರಟ್ಟಿಯವರು ಪಕ್ಷ ಸೇರ್ಪಡೆ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆಗಳು ನಡೆದಿದ್ದು ಅವರನ್ನು ಬಿಜೆಪಿಗೆ ಬರಲು ಗ್ರೀನ್ ಸಿಗ್ನಲ್ ಸಿಕ್ಕಿದೆ ಮುಂದೆ ಬರುವ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಅವರ ಸ್ವರ್ದೆ ಖಚಿತ ಎಂದರು.

ದಾಖಲೆ ಗೆಲುವಿನತ್ತ ಚಿತ್ತ:
ಉತ್ತರ ಕರ್ನಾಟಕ ಅದರಲ್ಲೂ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ 1980ರಿಂದ ಹೊರಟ್ಟಿ ಅವರೇ ವಿಧಾನ ಪರಿಷತ್‌ ಸದಸ್ಯರಾಗಿದ್ದಾರೆ. ಈಗಾಗಲೇ ಒಂದೇ ಕ್ಷೇತ್ರದಲ್ಲಿ ಸತತ ಏಳು ಬಾರಿ ಗೆದ್ದಿದ್ದಾರೆ. ಈ ಬಾರಿಯು ಗೆದ್ದು ದಾಖಲೆಯ 8ನೇ ಬಾರಿ ಗೆಲುವಿನ ಜತೆಗೆ ಇತಿಹಾಸ ಸೃಷ್ಟಿಯಾಗಲಿದೆ.

– ಬಸವರಾಜ ಧಾರವಾಡ

ಈ ಸಂಧರ್ಭದಲ್ಲಿ ಗದಗ ಜಿಲ್ಲಾ ಮಾಧ್ಯಮಿಕ ಶಾಲಾ ಸಂಘದ ಅಧ್ಯಕ್ಷ ಎಸ್,ಎಂ,ಅಂಗಡಿ. ಶಿಕ್ಷಕ ಅರುಣ ಕುಲಕರ್ಣಿ ಇದ್ದರು.

Leave a Reply

Your email address will not be published. Required fields are marked *

You May Also Like

ಎಲ್ಲರಿಗೂ ಕೊರೋನಾ ವಿಮೆ ಒದಗಿಸಿ: ಎಚ್.ಕೆ. ಪಾಟೀಲ್ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ದಿನೆದಿನೇ ಸೋಂಕಿನ ಹಬ್ಬುವಿಕೆ ಹೆಚ್ಚುತ್ತಿದೆ. 40 ಸಾವಿರ ಪ್ರಕರಣಗಳ ಟೆಸ್ಟ್ ಫಲಿತಾಂಶ ಬಾಕಿಯಿದೆ.…

ಭಾರತದ ಹೆಮ್ಮೆಯ ಕ್ರೀಡೆ ಮಲ್ಲಕಂಬ:ಶಾಸಕ ಬಂಡಿ

ಮನಸೊರೆಗೊಂಡ ಮಲ್ಲಕಂಬ ಪ್ರದರ್ಶನ ಉತ್ತರಪ್ರಭ ನರೆಗಲ್ಲ: ನೆಲದ ಮೇಲೆ ಮಾಡುವ ಯೋಗಾಸನವನ್ನು ಕಂಬದ ಮೇಲೆ ಚಾಕಚಕ್ಯತೆಯಿಂದ…

ರಮೇಶ್ ಜಾರಕಿಹೊಳಿ ಯಾರ ಮಾತು ಕೇಳಲ್ಲ: ಸತೀಶ್ ಜಾರಕಿಹೊಳಿ

ರಮೇಶ್ ಜಾರಕಿಹೊಳಿಯವರು ಯಾರ ಮಾತುಗಳನ್ನೂ ಕೇಳುವ ಸ್ಥಿತಿಯಲ್ಲಿ ಇರಲಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಗದಗ ಜಿಲ್ಲೆಯಲ್ಲಿ ಅಂಗನವಾಡಿ ಅಕ್ಕಂದಿರ 3 ತಿಂಗಳ ಸಂಬಳಕ್ಕೂ ಲಾಕ್ಡೌನ್!: ಬೆಂಗಳೂರಿಂದ ಪಾಸ್ ವರ್ಡ್ ತಂದರೆ ಲಾಕ್ ಓಪನ್!

ಖಾಲಿ-ಪೀಲಿ ತಾಂತ್ರಿಕ ನೆಪ ಹೇಳುತ್ತಿರುವ ಅಧಿಕಾರಿಗಳು ತಮ್ಮ ಸೋಮಾರಿತನ, ನಿರ್ಲ್ಯಕ್ಷದ ಕಾರಣದಿಂದ ಮುಂಡರಗಿ ತಾಲೂಕಿನ ಅಂಗನವಾಡಿ ಅಕ್ಕಂದಿರ ಕುಟುಂಬಗಳನ್ನು ಸಂಕಷ್ಟಕ್ಕೆ ದೂಡಿದ್ದಾರೆ.