ಉತ್ತರಪ್ರಭ
ಆಲಮಟ್ಟಿ:
ಜಿಲ್ಲೆಯ ಎಲ್ಲ ಏತ ನೀರಾವರಿ ಯೋಜನೆಗಳ ವ್ಯಾಪ್ತಿಗೆ ಬರುವ ಎಲ್ಲಾ ಕಾಲುವೆಗಳಿಗೆ ಏಪ್ರಿಲ್ 30ರ ವರೆಗೆ ನೀರು ಹರಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಬರುವ ಸೋಮವಾರದಿಂದ ಆಮರಣ ಉಪವಾಸ ಸತ್ಯಾಗ್ರಹ ಪ್ರಾರಂಭಿಸಬೇಕಾಗುತ್ತದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಎಚ್ಚರಿಕೆ ನೀಡಿದ್ದಾರೆ.


ಆಲಮಟ್ಟಿಯಲ್ಲಿ ಅಖಂಡ ಕನಾ೯ಟಕ ರೈತ ಸಂಘದ ಆಶ್ರಯದಲ್ಲಿ ಸಂಘದ ಕಾರ್ಯಕರ್ತರು ಕಾಲುವೆಗಳಿಗೆ ನೀರು ಹರಿಸಲು ಒತ್ತಾಯಿಸಿ ಬುಧವಾರದಿಂದ ಆರಂಭಿಸಿರುವ ಆಹೋರಾತ್ರಿ ಧರಣಿ ಸತ್ಯಾಗ್ರಹ ಗುರುವಾರ ಎರಡನೇ ದಿನಕ್ಕೆ ಕಾಲಿರಿಸಿದ್ದು ಆ ಧರಣಿಯಲ್ಲಿ ರೈತರನ್ನುದ್ದೇಶಿಸಿ ಅವರು ಮಾತನಾಡಿದರು.
ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಗತ್ಯವಿದೆ. ನಾವೇನು ನಿಮಗೆ ಭಿಕ್ಷೆ ಕೇಳುತ್ತಿಲ್ಲ. ಆಣೆಕಟ್ಟು ನಿರ್ಮಿಸಿರುವುದು ರೈತರಿಗಾಗಿ ನೀರಿನ ಮೇಲೆ ರೈತರಿಗೆ ಸಂಪೂರ್ಣ ಹಕ್ಕಿದೆ. ಈ ಸದ್ಯ ನೀರು ಕೊಡುವುದಿಲ್ಲ ಎನ್ನುವುದಕ್ಕೆ ಇವರ್ಯಾರು ? ರೈತರಿಂದಲೇ ಆಯ್ಕೆಯಾಗಿ ಹೋದವರು ಇವರು. ರೈತರ ಹಾಗೂ ಜನಸಾಮಾನ್ಯರ ಬೇಡಿಕೆಗೆ ಸ್ಪಂದಿಸುವುದು ಇವರ ಕರ್ತವ್ಯ. ಒಂದು ವೇಳೆ ನೀರು ಹರಿಸಲು ಪ್ರಾರಂಭಿಸದಿದ್ದರೆ ಆಮರಣ ಉಪವಾಸ ಸತ್ಯಾಗ್ರಹ ಕೂಡಬೇಕಾಗುತ್ತದೆ. ರೈತರಿಗಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಯಾವುದೇ ಹಂತಗಳ ನೆಪ ಹೇಳದೆ ಎಟಿಎಂ ತರಹ ನೀರು ಕೊಡಬೇಕು ಎಂದು ಅವರು ಖಡಾತುಂಡವಾಗಿ ಆಗ್ರಹಿಸಿದರು.

ಧರಣಿಗೆ ಇಂಗಳೇಶ್ವರ ರೈತರ ಬೆಂಬಲ: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ನಡೆಸುತ್ತಿರುವ ಎರಡನೇ ದಿನ ಧರಣಿಗೆ ಇಂಗಳೇಶ್ವರ ಗ್ರಾಮದ ರೈತರು ಧರಣಿ ಸ್ಥಳಕ್ಕೆ ಆಗಮಿಸಿ ಬೆಂಬಲ ನೀಡಿದರು. ರೇವಣಸಿದ್ದ ದಳವಾಯಿ ಮಾತನಾಡಿ, ಈ ಸದ್ಯ ರೈತರಿಗೆ ನೀರು ಅಗತ್ಯವಿದ್ದು ಬೇಸಿಗೆ ಸಂದರ್ಭದಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ಅಗತ್ಯವಿದೆ. ಕೂಡಲೇ ಕಾಲುವೆಗೆ ನೀರು ಹರಿಸಿ ಎಲ್ಲ ಕೆರೆಗಳನ್ನು ಭರ್ತಿ ಮಾಡಬೇಕು. ಹಾಗೂ ಬೇಸಿಗೆಯ ಬೆಳೆಗಳಿಗೆ ನೀರಿನ ಅನುಕೂಲತೆ ಕಲ್ಪಿಸಬೇಕೆಂದು ಆಗ್ರಹಿಸಿದರು. ಒಂದು ವೇಳೆ ಹೋರಾಟಕ್ಕೆ ಸ್ಪಂದಿಸದಿದ್ದರೆ ನೂರಾರು ರೈತರು ಬೆನ್ನಿಗೆ ಬೆಂಬಲ ನೀಡಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಎರಡನೇ ದಿನದ ಧರಣಿಯಲ್ಲಿ ರೈತ ಮುಖಂಡರಾದ ವಿಠ್ಠಲ ಬಿರಾದಾರ, ಎಸ್.ಎಂ.ಬೂದಿಹಾಳ, ಯಲ್ಲಪ್ಪ ಮನ್ಯಾಳ, ಅಂಬರೀಶ ಚಿಕ್ಕಮಠ, ಸಿದ್ದಲಿಂಗಪ್ಪ ಬಿರಾದಾರ, ಚನಬಸಪ್ಪ ಸಿಂಧೂರ, ಮಲ್ಲಪ್ಪ ಮಾಡ್ಯಾಳ, ರಾಜೇಸಾಬ ವಾಲಿಕಾರ, ಅಂಬಣ್ಣ ಹಡಪದ, ಗುರಲಿಂಗಪ್ಪ ಪಡಸಲಗಿ, ಶಿವಪ್ಪ ಸುಂಗಠಾಣ, ಚನ್ನಪ್ಪ ನಾಟೀಕಾರ, ಸೋಮಯ್ಯ ಇಂಬ್ರಾಹಿಂಪೂರ, ಮೇಲಪ್ಪ ಹರಿಜನ, ಸಂಗಪ್ಪ ಪಡಸಲಗಿ, ಮಲ್ಲಪ್ಪ ಪಡಸಲಗಿ, ಅಪ್ಪು ಪತಂಗೆ, ಸಿದ್ದು ಬೊಮ್ಮನಳ್ಳಿ, ಉಮೇಶ ಹಡಪದ, ಶಂಕರ ಹದಿಮೂರ, ದಿಲೀಪ ಯಾಳವಾರ, ರಾಉ ಕಾರಬಾರಿ ಅರವಿಂದ ಕುಲಕರ್ಣಿ, ಹೋರಾಟಗಾರರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

ಕೃಷಿ ಅಧಿಕಾರಿಗಳು ಸಹ ಕೊರೊನಾ ವಾರಿಯರ್ಸ್‌ಗಳಂತೆ: ಬಿ.ಸಿ.ಪಾಟೀಲ

ಬೆಂಗಳೂರು: ರೈತರು ಕೋವಿಡ್ ಸಂದರ್ಭದಲ್ಲಿಯೂ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿದ ಕೃಷಿ ಅಧಿಕಾರಿಗಳು ಸಹ ಕೊರೊನಾ…

ಹೆಸರು, ಶೇಂಗಾ, ಹತ್ತಿ, ಗೋವಿನ ಜೋಳ ಬಿತ್ತನೆಗೆ ರೈತ ಅಣಿ ಉತ್ತಮ ಮಳೆ, ಮುಂಗಾರು ಹಂಗಾಮಿನ ಬಿತ್ತನೆಗೆ ಸಿದ್ಧತೆ ಚುರುಕು ಚಂದ್ರು ಬಿ

ಮುಳಗುಂದ: ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಉತ್ತಮ ಮಳೆಯಾಗಿದ್ದು, ಕೋವಿಡ್ ಲಾಕ್ ಡೌನ್ ಮಧ್ಯೆ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಮುಂಗಾರು ಹಂಗಾಮಿನ ಪ್ರಮುಖವಾಗಿ ಹೆಸರು, ಶೇಂಗಾ, ಹತ್ತಿ, ಗೋವಿನ ಜೋಳ ಬಿತ್ತನೆಗೆ ರೈತರು ಭೂಮಿ ಹದಗೊಳಿಸುವ ಕಾಯಕದಲ್ಲಿ ನಿರತರಾಗಿದ್ದಾರೆ.

ಡಿಎಪಿ ರಸಗೊಬ್ಬರ ದರ ಇಳಿಕೆ

ಧಾರವಾಡ: ಡಿಎಪಿ ರಸಗೊಬ್ಬರ ದರ ಇಳಿಕೆ ಮಾಡಿ ಸರ್ಕಾರ ಆದೇಶಿಸಿದೆ. ಸಂಗ್ರಹವಿರುವ ಡಿಎಪಿ ರಸಗೊಬ್ಬರ ಪ್ರತಿ ಚೀಲಕ್ಜೆ 1200 ರೂ. ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಕಾಪು ದಾಸ್ತಾನು ಅಡಿ ಕೆಎಸ್ಸಿಎಮ್ಎಫ್ ದಲ್ಲಿ ಸಂಗ್ರಹವಿದ್ದ 1960 ಟನ್ ಡಿಎಪಿ ಗೊಬ್ಬರ ಪ್ರತಿ ಚೀಲಕ್ಕೆ 1450 ರೂ.ಗಳ ದರ ನಿಗದಿಪಡಿಸಲಾಗಿತ್ತು.

ಒಂದು ಜಿಲ್ಲೆ ಒಂದು ಯೋಜನೆಗೆ ಬ್ಯಾಡಗಿ ಮೆಣಸಿನಕಾಯಿ ಆಯ್ಕೆ

ರಾಜ್ಯ ಜೀವ ವೈವಿಧ್ಯ ಮಂಡಳಿಯು ಗುರುತಿಸಿರುವ ಜೀವವೈವಿಧ್ಯ ಪಾರಂಪರಿಕ ತಾಣಗಳನ್ನು ಪರಿಣಾಮಕಾರಿಯಾಗಿ ಸಂರಕ್ಷಿಸಲು ಸೂಕ್ತ ಯೋಜನೆ ಹಮ್ಮಿಕೊಳ್ಳಲಾಗುತ್ತಿದೆ.