ಉತ್ತರಪ್ರಭ
ಶಿರಹಟ್ಟಿ:
ಪಟ್ಟಣದ ಹೊರವಲಯದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ ಘಟನೆ ಶನಿವಾರ ಸಂಭವಿಸಿದೆ.

ಮಧ್ಯಾನ್ಹ ಗಾಳಿ ಗುಡುಗು ಸಹಿತವಾಗಿ ಸುರಿದ ಭಾರಿ ಮಳೆಯಿಂದ ಹರಿಪುರ ಹೊರವಲಯದಲ್ಲಿನ ಮಾವಿನ ತೋಟ ಕಾಯಲಿಕ್ಕೆ ಹೋದ ಮಾಬುಸಾಬ ದೊಡ್ಡಮನಿ(55) ಹಾಗೂ ದನ ಮೇಯಿಸಲು ಹೋಗಿದ್ದ ಹರಿಪುರದ ನಿವಾಸಿ ಮುರಗೇಶ (40)ಹೊಸಮನಿ ಸಿಡಿಲು ಬಡಿದು ಸಾವನ್ನಪ್ಪಿದ ದುರ್ದೈವಿಗಳು.

ಘಟನಾ ಸ್ಥಳಕ್ಕೆ ತಹಶೀಲ್ದಾರ ಕಲಗೌಡ ಪಾಟೀಲ, ಕಂದಾಯ ನಿರೀಕ್ಷಕ ಮಾಂತೇಶ ಮುಗುದುಂ, ಗ್ರಾಮಲೆಕ್ಕಾಧಿಕಾರಿ ಪ್ರವೀಣ, ಪಿಎಸ್ಐ ಪ್ರವೀಣ ಗಂಗೋಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ತಮ್ಮ ಊರುಗಳತ್ತ ಮುಖ ಮಾಡಿದ ಬೆಂಗಳೂರಿಗರು – ಎಲ್ಲೆಡೆ ಟ್ರಾಫಿಕ್ ಜಾಮ್!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸ್ಫೋಟವಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ನಾಳೆ ಕರ್ಫ್ಯೂ…

ಶಾಸಕ ಬಂಡಿ ಅವ್ರಿಗೆ ಯಾವುದೇ ಅಸಮಾಧಾನ ಇಲ್ಲಂತ, ಸಚಿವ ಸ್ಥಾನ ಕೊಟ್ರ ಬ್ಯಾಡನಲ್ಲಂತ!

ಗದಗ: ಸಚಿವ ಸ್ಥಾನದ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ. ಆದರೆ ಸಚಿವ ಸ್ಥಾನ ನೀಡಿದರೆ ಬೇಡ…

ಗುಂಡು ಮೈ ಒಳಗೆ ಹೋದರೂ ಪ್ರಜ್ಞೆ ತಪ್ಪದ ರೈ!: ಮುತ್ತಪ್ಪ ರೈ ಬದುಕಿನ ಪ್ರಮುಖ ಘಟನೆಗಳ ಮೆಲಕು

ಭೂಗತ ಲೋಕವನ್ನಾಳಿದ ವ್ಯಕ್ತಿಯ ಕಥೆಯಿದು. ಸದ್ಯ ಭೂಗತ ಲೋಕದಿಂದ ನಿವೃತ್ತಿ ಹೊಂದಿದರೂ ಕೂಡ ಮುತ್ತಪ್ಪ ರೈ ಹೆಸರು ಮಾತ್ರ ಚಾಲ್ತಿಯಲ್ಲಿಯೇ ಇತ್ತು. ಮಾಜಿ ಡಾನ್ ಮುತ್ತಪ್ಪ ರೈ ಜೀವನದಲ್ಲಿ ನಡೆದ ಕೆಲವು ಪ್ರಮುಖ ಘಟನೆಗಳ ಮೆಲಕು ಇಲ್ಲಿದೆ ನೋಡಿ..

ಹೆಚ್ಚಿನ ಬಸ್ ಓಡಾಟಕ್ಕೆ ಒತ್ತಾಯಿಸಿ ಮನವಿ

ಹುಬ್ಬಳ್ಳಿ ಹಾಗು ಗದಗ ಮತ್ತು ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ಸು ಓಡಿಸುವಂತೆ ಆಗ್ರಹಿಸಿ ಶನಿವಾರ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಘಟಕ ವ್ಯವಸ್ಥಾಪಕ ಶೇಖರ ನಾಯಕ ಅವರಿಗೆ ಮನವಿ ಸಲ್ಲಿಸಿದರು.