ಉತ್ತರಪ್ರಭ
ಶಿರಹಟ್ಟಿ:
ಪಟ್ಟಣದ ಹೊರವಲಯದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ ಘಟನೆ ಶನಿವಾರ ಸಂಭವಿಸಿದೆ.

ಮಧ್ಯಾನ್ಹ ಗಾಳಿ ಗುಡುಗು ಸಹಿತವಾಗಿ ಸುರಿದ ಭಾರಿ ಮಳೆಯಿಂದ ಹರಿಪುರ ಹೊರವಲಯದಲ್ಲಿನ ಮಾವಿನ ತೋಟ ಕಾಯಲಿಕ್ಕೆ ಹೋದ ಮಾಬುಸಾಬ ದೊಡ್ಡಮನಿ(55) ಹಾಗೂ ದನ ಮೇಯಿಸಲು ಹೋಗಿದ್ದ ಹರಿಪುರದ ನಿವಾಸಿ ಮುರಗೇಶ (40)ಹೊಸಮನಿ ಸಿಡಿಲು ಬಡಿದು ಸಾವನ್ನಪ್ಪಿದ ದುರ್ದೈವಿಗಳು.

ಘಟನಾ ಸ್ಥಳಕ್ಕೆ ತಹಶೀಲ್ದಾರ ಕಲಗೌಡ ಪಾಟೀಲ, ಕಂದಾಯ ನಿರೀಕ್ಷಕ ಮಾಂತೇಶ ಮುಗುದುಂ, ಗ್ರಾಮಲೆಕ್ಕಾಧಿಕಾರಿ ಪ್ರವೀಣ, ಪಿಎಸ್ಐ ಪ್ರವೀಣ ಗಂಗೋಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

300 ಮಹಿಳಾ  ಪದವೀಧರರಿಗೆ ಉದ್ಯಮ

ಉತ್ತರಪ್ರಭ ಅರ್ಜಿ ಆಹ್ವಾನಗದಗ: 2022-23 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ…

ಬೀದಿಗೆ ಬಂದ ಕಾರ್ಮಿಕರು…!

ಲಾಕ್ ಡೌನ್ ನಿಂದ ಬಡವರ ಬದುಕು ಬೀದಿಗೆ ಬಂದು ನಿಂತಿದೆ. ಸಕ್ಕರೆ ಕಾರ್ಖಾನೆಯೊಂದರ 350ಕ್ಕೂ ಹೆಚ್ಚು ಕಾರ್ಮಿಕರು ಸದ್ಯ ಇದರಿಂದಾಗಿ ಬೀದಿಗೆ ಬಂದಿದ್ದಾರೆ.

ಇಂದು ದ್ವಿತಿಯ ಪಿಯು ಪರೀಕ್ಷೆ ಬರೆದ ವಿದ್ಯಾರ್ಥಿಗಳೆಷ್ಟು..?

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಇಂದು ಯಶಸ್ವಿಯಾಗಿ ನಡೆದಿದೆ. 5,95,997…