ಉತ್ತರಪ್ರಭ

ಗದಗ: ಗದಗ ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಎಲ್ಲಾ ಅಂಗನವಾಡಿ, ಶಾಲೆಗಳಿಗೆ ಇಂದು ಮೇ.20 ರಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ರಜೆ ಘೋಷಿಸಿದ್ದಾರೆ.

ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಮತ್ತು ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮೇ.20 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ನೀಡಲಾಗಿದೆ.

ನಿನ್ನೆ ಮೇ.19 ರಿಂದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಗುತ್ತಿದ್ದು, ಇಂದು ಮುಂದುವರೆದಿದೆ. ಜನ ಹಾಗೂ ಜಾನುವಾರುಗಳ ಸುರಕ್ಷತೆಗೆ ಜಿಲ್ಲೆಯ ಸಾರ್ವಜನಿಕರು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೆಆರ್‌ಡಿಸಿಎಲ್ ಅಧಿಕಾರಿಗಳಿಗೆ ರೂಮ್‌ನಲ್ಲಿ ಕೂಡಿ ಹಾಕಿ ಸಾರ್ವಜನಿಕರಿಂದ ಧರಣಿ

ಉತ್ತರಪ್ರಭಗದಗ: ಗದಗದಿಂದ ಮುಂಡರಗಿ ಹೋಗುವ ಮಾರ್ಗ ಮಧ್ಯೆ ಬರುವ ಪಾಪನಾಶಿ ಗ್ರಾಮದ ಹತ್ತಿರವಿರುವ ಅನಧಿಕೃತ ಟೊಲ್…

ಮುಂಡರಗಿ: ಕ್ಯಾಂಟರ್-ಬೈಕ್ ಅಪಘಾತ ಬೈಕ್ ಸವಾರ ಸಾವು.!

ಮುಂಡರಗಿ: ತಾಲೂಕಿನ ಹಳ್ಳಿಗುಡಿ ಗ್ರಾಮದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ಮತ್ತು ಬೈಕ್ ಮದ್ಯ…

ಮಾಧ್ಯಮ ಪ್ರತಿನಿಧಿ ಮೇಲೆ ತಹಶೀಲ್ದಾರ ದರ್ಪ ಖಂಡಿಸಿ ರೋಣದಲ್ಲಿ ಮನವಿ

ಗಜೇಂದ್ರಗಡ ತಹಶೀಲ್ದಾರ್ ತೋರಿದ ಪತ್ರಿಕಾ ಪ್ರತಿನಿಧಿ ಮೇಲೆ ತೋರಿದ ದರ್ಪ ಖಂಡಿಸಿ ರೋಣ ತಾಲೂಕ ಕಾರ್ಯ ನಿರತ ಪತ್ರಕರ್ತ ಸಂಘದಿಂದ ಮನವಿ ಸಲ್ಲಿಸಲಾಯಿತು.

ಸಿಲಿಂಡರ್ ಸ್ಫೋಟ: ಇಬ್ಬರಿಗೆ ಸಣ್ಣದಾಗಿ ಗಾಯ

ಪಟ್ಟಣದ 11 ನೆಯ ವಾರ್ಡ್ ನ ಕುಷ್ಠಗಿಯವರ ಓಣಿಯಲ್ಲಿ ರಾತ್ರಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ ಹಾಗೂ ಮನೆ ಕುಸಿದಿರುವ ಘಟನೆ ನಡೆದಿದೆ.