ಉತ್ತರಪ್ರಭ

ಗದಗ: ಗದಗ ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಎಲ್ಲಾ ಅಂಗನವಾಡಿ, ಶಾಲೆಗಳಿಗೆ ಇಂದು ಮೇ.20 ರಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ರಜೆ ಘೋಷಿಸಿದ್ದಾರೆ.

ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಮತ್ತು ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮೇ.20 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ನೀಡಲಾಗಿದೆ.

ನಿನ್ನೆ ಮೇ.19 ರಿಂದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಗುತ್ತಿದ್ದು, ಇಂದು ಮುಂದುವರೆದಿದೆ. ಜನ ಹಾಗೂ ಜಾನುವಾರುಗಳ ಸುರಕ್ಷತೆಗೆ ಜಿಲ್ಲೆಯ ಸಾರ್ವಜನಿಕರು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಹೂವಿನಹಡಗಲಿ ಉಪ ಕಾರಾಗೃಹದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ: ರಾಷ್ಟ್ರೀಯ ಐಕ್ಯತೆಗೆ ಭಾಷಾ ಸೌಹಾರ್ದತೆ ಸಹಕಾರಿ

ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ದೇಶದ ಐಕ್ಯತೆಗೆ ಭಾಷಾ ಸೌಹಾರ್ಧತೆಯೇ ಸಹಕಾರಿಯಾಗಿದೆ ಎಂದು ಜಿಬಿಆರ್ ಕಾಲೇಜಿನ ಕನ್ನಡ ಉಪನ್ಯಾಸಕ ಹೆಚ್.ಎಂ.ಗುರುಬಸವರಾಜಯ್ಯ ಹೇಳಿದರು.

ಬೈಕ್ ಡಿಕ್ಕಿ: ಪಾದಚಾರಿ ಸಾವು

ಹಿಂದಿನಿಂದ ಬಂದ ಬೈಕ್ ಹರಿದು ವಾಯುವಿಹಾರಿ ಸ್ಥಳದಲ್ಲೇ ಸಾವಿನಪ್ಪಿದ ಘಟನೆ ತಾಲೂಕಿನ ರಾಮಗೇರಿ ಗ್ರಾಮದಲ್ಲಿ ನಡೆದಿದೆ. ಶನಿವಾರ ಬೆಳಗಿನ ಸಮಯದಲ್ಲ್ಲಿ ವಾಯುವ ವಿಹಾರಕ್ಕೆ ತೆರಳಿದ್ದ ಹನಮಂತಪ್ಪ ಕಾಳೆ(52) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಗದಗ ಜಿಲ್ಲೆಯ 9 ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಭಂಧ ತೆರವು

ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 9 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು. ಇದೀಗ 9 ಪ್ರದೇಶಗಳ ನಿರ್ಭಂಧವನ್ನು ಜಿಲ್ಲಾಡಳಿತ ತೆರವುಗೊಳಿಸಲಾಗಿದೆ.

ಗದಗ ಜಿಲ್ಲೆಯಲ್ಲಿ 307 ಪಾಸಿಟಿವ್: ಕೊರೊನಾದಿಂದ ಮೃತರಾದವರ ವಿವರ

ಗದಗ: ಜಿಲ್ಲೆಯಲ್ಲಿ ಶನಿವಾರ 307 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 23037 ಏರಿಕೆಯಾಗಿದೆ. ಇನ್ನು ಶನಿವಾರ ಕೊರೊನಾ ಸೋಂಕಿನಿಂದ ಐವರು ಸಾವನ್ನಪ್ಪಿದ್ದು ಈ ಮೂಲಕ ವರೆಗೆ 241 ಜನ ಜಿಲ್ಲೆಯಲ್ಲಿ ಸಾವನ್ನಪ್ಪಿದಂತಾಗಿದೆ.