ಗುಲಾಬಚಂದ ಜಾಧವ
ಆಲಮಟ್ಟಿ : ಸ್ಥಳೀಯ ಎಸ್.ವ್ಹಿ.ವ್ಹಿ.ಸಂಸ್ಥೆಯ ಮಂಜಪ್ಪ ಹಡೇ೯ಕರ (ಎಂ.ಎಚ್.ಎಂ.)ಪದವಿ ಮಹಾವಿದ್ಯಾಲಯಕ್ಕೆ ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಲೋಕಲ್ ಇನ್ಸ್‌ಪೆಕ್ಷನ್ ಕಮೀಟಿ ( ಎಲ್.ಐ.ಸಿ) ತಂಡ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಪರಿಶೀಲನೆ ನಡೆಸಿತು.


ಎಲ್.ಐ.ಸಿ.ಕಮೀಟಿ ಚೇರಮನ್ ಡಾ.ಆನಂದ ಹೊಸೂರ ನೇತೃತ್ವದ ತಂಡದಲ್ಲಿ ಸದಸ್ಯರಾದ ಪ್ರೋ.ಗುಂಡಣ್ಣ ಕಲಬುರ್ಗಿ, ಫಕ್ಕೀರಪ್ಪ ಸೊಲಗದ ಇದ್ದರು.
ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ರಾಚವಿವಿ ತನ್ನದೇ ಅದ ಮಾನದಂಡಗಳನ್ನು ರಚಿಸಿ ಅವುಗಳ ಅನುಷ್ಠಾನಕ್ಕೆ ಮುಂದಾಗಿದೆ. ಶಿಕ್ಷಣ ನೀತಿ ನೀಡುವ ಗುರಿ ಸಾಧಿಸಲು ಪ್ರಾಮುಖ್ಯತೆ ನೀಡಲಾಗಿದೆ. ಆ ಹಿನ್ನೆಲೆಯಲ್ಲಿ ಎಲ್.ಐ.ಸಿ.ಕಮೀಟಿ ಸದಸ್ಯರು ಆಗಮಿಸಿ ಕಾಲೇಜಿನ ಸ್ಥಿತಿಗತಿ ಕೂಲಂಕುಷವಾಗಿ ಪರಿಶೀಲಿಸಿತು.


ಬಹು ವಿಶಾಲ ವರ್ಗಕೋಣೆಗಳತ್ತ್ ತೆರಳಿ ವ್ಯವಸ್ಥೆಗಳ ಆವಲೋಕನ ನಡೆಸಿತು.ಸೇಮಿನಾರ ಹಾಲ್,ಗ್ರಂಥಾಲಯ,ಪುಸ್ತಕಗಳ ಮಾಹಿತಿ ಸೇರಿದಂತೆ ಮೂಲಭೂತ ಸೌಲಭ್ಯಗಳ ಪರಿಶೀಲನೆ ನಡೆಸಿತು. ಹಸಿರು ತೋರಣದಲ್ಲಿ ತಲೆ ಎತ್ತಿರುವ ಕಾಲೇಜು ಭವ್ಯ ಕಟ್ಟಡ,ವಿಸ್ತಾರವಾದ ಆಟದ ಮೈದಾನ ಕಂಡು ಮೆಚ್ಚುಗೆ ಸೂಚಿಸಿತು.


ಇದೇ ಸಂದರ್ಭದಲ್ಲಿ ಬಸವನ ಬಾಗೇವಾಡಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಗದುಗಿನತ್ತ ತೆರಳುತ್ತಿದ್ದ ಸಂಸ್ಥೆಯ ಅಧ್ಯಕ್ಷ ತೋಂಟದ ಡಾ. ಸಿದ್ದರಾಮ ಮಹಾಸ್ವಾಮಿಗಳು ಆಕಸ್ಮಿಕ ಕಾಲೇಜಿಗೆ ಭೇಟಿಯಿತ್ತರು. ಶ್ರೀಗಳವರನ್ನು ಕಂಡು ಎಲ್.ಐ.ಸಿ.ತಂಡದ ಸದಸ್ಯರು ಸೇರಿದಂತೆ ಶಾಲಾ,ಕಾಲೇಜಿನ ಗುರುಬಳಗ ಕೃಪಾಶೀವಾ೯ದ ಪಡೆದರು. ತೋಂಟದ ಸಿದ್ದರಾಮ ಶ್ರೀ ಸಂಸ್ಥೆ ಪರವಾಗಿ ಎಲ್.ಐ.ಸಿ.ಕಮೀಟಿ ಚೇರಮನ್, ಸದಸ್ಯರಿಗೆ ಶಾಲು ಹೊದಿಸಿ ಸನ್ಮಾನಿಸಿದರು.
ಈ ವೇಳೆ ಬಸವನ ಬಾಗೇವಾಡಿ ವಿರಕ್ತಮಠದ ಸಿದ್ದಲಿಂಗ ಶ್ರೀ, ವಿಜಯಪುರ ಷಣ್ಮುಖಾರೂಢ ಮಠದ ಅಭಿನವ ಸಿದ್ದಾರೂಢ ಶ್ರೀ, ಎನ್.ಕೆ.ಕುಂಬಾರ, ಸುರೇಶಗೌಡ ಪಾಟೀಲ, ಪ್ರಾಚಾರ್ಯ ಎಚ್.ಎನ್.ಕೆಲೂರ, ಪಿ.ಎ.ಹೇಮಗಿರಿಮಠ,ಮುಖ್ಯ ಶಿಕ್ಷಕ ಜಿ.ಎಂ.ಕೋಟ್ಯಾಳ, ಎಸ್.ಆಯ್.ಗಿಡ್ಡಪ್ಪಗೋಳ, ಶಿಕ್ಷಕರು,ಉಪನ್ಯಾಸಕರು, ಪ್ರಾಧ್ಯಾಪಕರು,ಗುರುಮಾತೆಯರು ಮೊದಲಾದವರಿದ್ದರು.

Leave a Reply

Your email address will not be published. Required fields are marked *

You May Also Like

ಕೋವಿಡ್ ನಿಂದ ಮೃತ ಪಟ್ಟ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ಪರಿಹಾರ

ಲಖನೌ: ಕೋವಿಡ್-19 ವೇಳೆ ಕರ್ತವ್ಯ ನಿಷ್ಠೆ ಮೆರೆದು ಪ್ರಾಣ ಕಳೆದುಕೊಂಡ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

ಗದಗ ಜಿಲ್ಲೆಯಲ್ಲಿಂದು 174 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 174 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3778 ಕ್ಕೆ ಏರಿಕೆಯಾಗಿದೆ.

ಖಾಸಗಿ ಬಸ್ ಪಲ್ಟಿ 5 ಜನ ಸಾವು 25 ಜನರಿಗೆ ಗಂಭೀರ ಗಾಯ

ತುಮಕೂರು: ಇಂದು ಬೆಳ್ಳಂಬೆಳಿಗ್ಗೆ ಬಾರಿ ದುರಂತವೋಂದು ನಡೆದು ಹೋಗಿದೆ. ಹೌದು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ…

ಶಿರಹಟ್ಟಿ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ

ಖಾತೆ ಬದಲಾವಣೆಗೆ ಲಂಚದ ಬೇಡಿಕೆ ಇಟ್ಟಿದ್ದ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ ಬಿದ್ದ ಘಟನೆ ಶಿರಹಟ್ಟಿ ಪಟ್ಟಣದಲ್ಲಿ ನಡೆದಿದೆ. ಶಿರಹಟ್ಟಿಯ ಪಟ್ಟಣ ಪಂಚಾಯತಿ ಕಂಪ್ಯೂಟರ್ ಆಪರೇಟರ್ ಶರಣಪ್ಪ ಗೌಳಿ 3,500 ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದನಂತೆ.