ವರದಿ: ಗುಲಾಬಚಂದ ಜಾಧವ
ಆಲಮಟ್ಟಿ : ಇಲ್ಲಿನ ಕೃಷ್ಣಾ ಭಾಗ್ಯಜಲ ನಿಗಮದ ಯೋಜನಾ ಶಾಖೆಯಲ್ಲಿ ಸುದೀರ್ಘ ವರ್ಷಗಳಕಾಲ ಸೇವೆ ಸಲ್ಲಿಸಿ ವಿಶ್ರಾಂತ ಜೀವನ ಸಾಗಿಸುತ್ತಿದ್ದ ಸುಭಾಷಚಂದ್ರ ಕೋಳೇಕರ(72) ಭಾನುವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿ , ಮೂರು ಜನ ಪುತ್ರರು, ಮೊಮ್ಮಕ್ಕಳು, ಅಪಾರ ಬಂಧುಬಳಗವನ್ನು ಬಿಟ್ಟು ಅಗಲಿದ್ದಾರೆ. ಕೃಷ್ಣಾ ಭಾಗ್ಯ ಜಲ ನಿಗಮ ನೌಕರರ ಸಂಘದ ಪದಾಧಿಕಾರಿಯಾಗಿ, ಮಾಜಿ ಅಧ್ಯಕ್ಷರಾಗಿ ದಿವಂಗತರು ಸೇವೆ ಸಲ್ಲಿಸಿದ್ದರು. ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೋಡಗಿಸಿಕೊಂಡು ಜನಾನುರಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಮೃತರ ಕಿರಿಯ ಪುತ್ರ ಚಂದ್ರಶೇಖರ ಕೋಳೇಕರ ಸ್ಥಳೀಯ ಡ್ಯಾಂಸೈಟ್ ನಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರೆ ಹಿರಿಯ ಪುತ್ರ ಬೆಂಗಳೂರಿನಲ್ಲಿ ಹಾಗು ಎರಡನೇ ಪುತ್ರ ಪುಣೆಯಲ್ಲಿ ಎಂಜನೀಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸಂತಾಪ: ಸುಭಾಷಚಂದ್ರ ಕೋಳೇಕರ ಅವರ ಅಕಾಲಿಕ ನಿಧನಕ್ಕೆ ಕನಾ೯ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ,ಸ್ಥಳೀಯ ಕೆಬಿಜೆಎನ್ಎಲ್ ಯೋಜನಾ ಶಾಖೆ ನೌಕರರ ಸಂಘದ ಅಧ್ಯಕ್ಷ ಸದಾಶಿವ ದಳವಾಯಿ, ನಿಡಗುಂದಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಶಂಕರ ಜಲ್ಲಿ, ಆಲಮಟ್ಟಿ ಎಸ್.ವ್ಹಿ.ವ್ಹಿ.ಸಂಸ್ಥೆಯ ಶಾಲಾ,ಕಾಲೇಜುಗಳ ಮುಖ್ಯಸ್ಥರು,ಸಿಬ್ಬಂದಿ ವರ್ಗ,ಚಂದ್ರು ಕೋಳೇಕರ ಗೆಳೆಯರ ಬಳಗ ಸೇರಿದಂತೆ ಅನೇಕ ಗಣ್ಯರು ಶೋಕ ವ್ಯಕ್ತಪಡಿಸಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಮೃತರ ಅಂತ್ಯಕ್ರಿಯೆ ಭಾನುವಾರ ಸಂಜೆ ಬಾಗಲಕೋಟೆ ನವನಗರದಲ್ಲಿನ ರುದ್ರಭೂಮಿಯಲ್ಲಿ ನೆರವೇರಿತು.

Leave a Reply

Your email address will not be published. Required fields are marked *

You May Also Like

ಲಾಕ್ ಡೌನ್: ಡಿಸಿಗಳೊಂದಿಗೆ ಸಿಎಂ ಸಂವಾದ

ಬೆಂಗಳೂರು : ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಲಾಕ್ ಡೌನ್ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ…

ಅಂಬಾಭವಾನಿ ಜಾತ್ರಾ ಉತ್ಸವ ಸಡಗರ ಸಂಭ್ರಮ ಕೃಷ್ಣೆ ತಟದಲ್ಲಿ ಕುಂಭ ಮೆರವಣಿಗೆ ಕಲರವ

ಚಿತ್ರ ವರದಿ : ಗುಲಾಬಚಂದ ಆರ್.ಜಾಧವಆಲಮಟ್ಟಿ :(ವಿಜಯಪುರ ಜಿಲ್ಲೆ) ಬೆಳ್ಳಂ ಬೆಳಿಗ್ಗೆ ತಂಪಾಗಿ ಸೂಸಿ ಬರುತ್ತಿದ್ದ…

ಅರಳದಿನ್ನಿ : ಮಹಿಳಾ ಶೌಚಾಲಯ ಗೋಡೆ ಎತ್ತರಕ್ಕೆ ಆಗ್ರಹ

ಆಲಮಟ್ಟಿ : ಸಮೀಪದ ಅರಳದಿನ್ನಿ ಗ್ರಾಮದಲ್ಲಿನ ಸಾರ್ವಜನಿಕ ಮಹಿಳಾ ಶೌಚಾಲಯದ ಗೋಡೆಯನ್ನು ಎತ್ತರಿಸಬೇಕು ಹಾಗು ಹೊಸದೊಂದು…

ಲಕ್ಕುಂಡಿ ಗ್ರಾಮ ಪಂಚಾಯತಿಗೆ ಆಡಳಿತಾಧಿಕಾರಿ ಯಾರು..?

ಗದಗ: ಅವಧಿ ಮುಗಿದ್ರು ಚೇರಿನ ವ್ಯಾಮೋಹ ಮುಗಿಲ್ಲವೇ..? ಆಡಳಿತಾಧಿಕಾರಿ ನೇಮಕವಾದ್ರು, ಅಧ್ಯಕ್ಷ ಪದವಿಯ ಅವಧಿ ಮುಗಿದಿರೋದು…