ಉತ್ತರಪ್ರಭ ಸುದ್ದಿ

ನರೇಗಲ್: ಸಮೀಪದ ಕಳಕಾಪುರ ಗ್ರಾಮದಲ್ಲಿ ಶನಿವಾರ ರಾತ್ರಿ ಸುರಿದ ಮಳೆಯ ನೀರು 50ಕ್ಕೂ ಹೆಚ್ಚಿನ ಮನೆಗಳಿಗೆ ನುಗ್ಗಿದೆ. ಗ್ರಾಮದಲ್ಲಿ ಗುತ್ತಿಗೆದಾರರು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಚರಂಡಿ ಕಾರಣ ಮಳೆ ನೀರು ಮನೆಗಳಿಗೆ ನುಗ್ಗಿ ಹಾನಿ ಮಾಡಿದೆ ಎಂದು ಸ್ಥಳೀಯರಾದ ರಮಜಾನಬಿ ಗಾಣದ, ಯಲ್ಲಪ್ಪ ಶಿರಗುಂಪಿ, ಪಡಿಯವ್ವ ಮಾದರ, ಬನ್ನೆಪ್ಪ ಕಟ್ಟಿಮನಿ, ಯಮನೂರಸಾಬ ಮಾರನಬಸರಿ ಆರೋಪ ಮಾಡಿದರು.

ಗ್ರಾಮ ಪಂಚಾಯ್ತಿಯ ಸದಸ್ಯರು ಕಮಿಷನ್ ಆಸೆಗೆ ಬೇಕಾಬಿಟ್ಟಿ ಚರಂಡಿ ನಿರ್ಮಾಣ ಮಾಡಿರುವ ಕಾರಣ ಜುಮಾ ಮಸೀದಿ ಯಿಂದ ಕನಕದಾಸರ ಮೂರ್ತಿವರೆಗಿನ ಎಲ್ಲಾ ಮನೆಗಳಿಗೆ ಮಳೆ ನೀರು ನುಗ್ಗಿದೆ. ಚರಂಡಿ ತೆರುವು ಮಾಡುವಂತೆ ಗ್ರಾಮದ ಅರ್ಧಕ್ಕೂ ಹೆಚ್ಚು ಜನರು ಆಗ್ರಹ ಮಾಡಿದ ಕಾರಣ ಸಿಸಿ ರಸ್ತೆ ಇಂದಿಗೂ ನಿರ್ಮಾಣ ಆಗಿಲ್ಲ ಆದರೆ ಚರಂಡಿ ಮರು ನಿರ್ಮಾಣ ಮಾಡಲು ಮುಂದಾಗದೇ ಇರುವ ಕಾರಣಕ್ಕೆ ಗ್ರಾಮಸ್ಥರ ಮನೆಗಳು ಮಳೆ ನೀರಿನಲ್ಲಿ ನಿಂತಿವೆ ಎಂದು ಲಾಡಸಾಬ ತಿಮ್ಮನೆಟ್ಟಿ, ಮುಸ್ತುಸಾಬ ದೊಡ್ಡಮನಿ, ಅಂದಪ್ಪ ಶಿರಹಟ್ಟಿ ಆರೋಪ ಮಾಡಿದರು.

ಮುಂಗಾರು ಬಿತ್ತನೆಗಾಗಿ ತಂದಿದ್ದ ಗೊಬ್ಬರ, ಬೀಜ ಹಾಗೂ ಸಂಗ್ರಹಿಸಿ ಇಡಲಾಗಿದ್ದ ಬಿಳಿ ಜೋಳ, ಗೋಧಿ, ಮನೆಯ ದಿನಿಸಿ, ಬಟ್ಟೆ ಎಲ್ಲವೂ ಮಳೆ ನೀರಿನಲ್ಲಿ ಒದ್ದೆಯಾಗಿ ಹಾನಿಯಾಗಿದೆ ಎಂದು ರೈತ ದೇವಪ್ಪ ಹಳ್ಳಿ, ಕಳಕಪ್ಪ ಬೂದಿಹಾಳ, ಬಾಬುಸಾಬ ದೊಡ್ಡಮನಿ ಹೇಳಿದರು.

Leave a Reply

Your email address will not be published. Required fields are marked *

You May Also Like

ಉಡುಪಿಯಲ್ಲಿ ಕ್ವಾರಂಟೈನ್ ಆದವರಿಗೆ ಮಂಗಳೂರಿನಲ್ಲಿ ಸೋಂಕು!

ಮಂಗಳೂರು: ಉಡುಪಿಯಲ್ಲಿ ಕ್ವಾರಂಟೈನ್ ಮುಗಿಸಿ ನಂತರ ಮಂಗಳೂರಿಗೆ ಬಂದಿದ್ದ 7 ಜನರಲ್ಲಿ ಕೊರೊನಾ ಸೋಂಕು ಇರುವುದು…

ಕಸ್ತೂರಿ ರಂಗನ್ ವರದಿ: ಭಿನ್ನಾಭಿಪ್ರಾಯ ದಾಖಲಿಸಿದ ಬಿ.ಎಸ್.ವೈ.

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಕಸ್ತೂರಿರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ…

ಗಣರಾಜ್ಯೋತ್ಸವ ಪರೇಡ್ ನಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರ ತಿರಸ್ಕಾರ: ಖಂಡನೆ

ಉತ್ತರಪ್ರಭ ಸುದ್ದಿಶಿರಹಟ್ಟಿ: ಜನೆವರಿ 26 ರಂದು ಗಣರಾಜ್ಯೋತ್ಸವ ಪರೇಡ್ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು…

ವೀಕೆಂಡ್ ಆಲಮಟ್ಟಿ ಹೌಸ್ ಫುಲ್

“ಕಲರಮಯ ಬೆಳಕಿನ ಚಿತ್ತಾರದಲ್ಲಿ ಮಿನುಗಿದ ಡ್ಯಾಂ- ಜಲ ಸೌಂದರ್ಯ ಸವಿಯಲು ಅಸಂಖ್ಯ ಪ್ರವಾಸಿಗರ ಲಗ್ಗೆ..!” ಆಲಮಟ್ಟಿ:…