ಉತ್ತರಪ್ರಭ
ಧಾರವಾಡ:
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ರಾಯಾಪುರ ಧಾರವಾಡದಲ್ಲಿ 8 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನೂ ಯೋಗಾಭ್ಯಾಸ ಮಾಡುವದರ ಮೂಲಕ ಹಾಗೂ “ಯೋಗ ಜೀವನ ಪದ್ಧತಿ ” ಕುರಿತು ವಿಶೇಷ ವಿಚಾರಣಾ ಸಂಕೀರ್ಣ ಕಾರ್ಯಕಮವನ್ನು ಹ್ಮಮಿಕೊಳ್ಳುವುದರ ಮೂಲಕ ಆಚರಿಸಲಾಯಿತು.

ಪ್ರಸಿದ್ದ ಯೋಗ ಪಟು ಹಾಗೂ ಯೋಗ ಶಿಕ್ಷಕಿ, ಡಾ. ಸುಕುಮಾರಿ ಬಾದಾಮಿ ರವರು ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಯೋಗಾಭ್ಯಾಸ ನಡೆಸಿಕೊಟ್ಟರು. ಮುಖ್ಯ ತರಬೇತಿದಾರರಾಗಿ ಮಾತನಾಡಿದ ಅವರು ನಮ್ಮ ಯೋಗಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಋಷಿ ಮುನಿಗಳು ಇದರ ಸಿದ್ದಿ ಪಡೆದು ನೂರಾರು ವರ್ಷಗಳ ಕಾಲ ಆರೋಗ್ಯವಾಗಿ ಬದುಕಿದ್ದಾರೆ. ಇಂತಹ ಯೋಗವನ್ನು ಪುನರುತ್ಥಾನ ಮಾಡಿ ವಿಶ್ವ ಮನ್ನಣೆ ಸಿಗುವಂತೆ ಮಾಡಿದ್ದು ನಮ್ಮ ದೇಶದ ಹೆಮ್ಮೆ ಮತ್ತು ಕೀರ್ತಿಯಾಗಿದೆ. ಯೋಗವು ದಿವ್ಯವಾದ ಸಂಪತ್ತಾಗಿದ್ದು ಸದೃಢವಾದ ವ್ಯಕ್ತಿತ್ವ ಮತ್ತು ಆರೋಗ್ಯಕ್ಕಾಗಿ ಪ್ರತಿಯೊಬ್ಬರು ಯೋಗವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
GTTC ಸಂಸ್ಥೆಯ ಪ್ರಾಂಶುಪಾಲರು ಶ್ರೀ ಶಿವಾನಂದ ಕುಂಬಾರ ಮಾತನಾಡಿ ಪ್ರತಿನಿತ್ಯದ ನಿಯಮಿತ ಯೋಗಾಭ್ಯಾಸವು ಮಾನಸಿಕ ಒತ್ತಡವನ್ನು ಕಡಿಮೆ ಗೊಳಿಸುವುದಲ್ಲದೆ ಮತ್ತು ದೈಹಿಕ ಸೌಂದರ್ಯ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ದಿನನಿತ್ಯವೂ ಯೋಗಾಬ್ಯಾಸ ಮಾಡುವುದರ ಮೂಲಕ ಸದೃಢ ವ್ಯಕ್ತಿತ್ವ ರೂಪಿಸಬೇಕಾಗಿದೆ. ಭಾರತವನ್ನು ಯೋಗ ಗುರು ಎಂದು ಕರೆಯುವುದು ಉಲ್ಲೇಖನೀಯ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ HOD ಬಸವರಾಜ ಬಿ. ಹಿರಿಯ ತರಬೇತುದಾರರಾದ ಪ್ರಭು ತರೀಕೆರಿ, ದೇವದಾಸ ನಾಯಕ, ಮಂಜುನಾಥ ರೆಡೆಕರ, ಶರೀಫ್ ಖಾಜಿ, ರಘುನಾಥಗೌಡ, ಶಂಕರಗೌಡ, ಜಹೀರ್ ಕತಿಬ, ಮೊಹಮ್ಮದ್ ರಫೀಕ್, ಇಮ್ರಾನ್ ಮುಸ್ತಫಾ, ಪಾಂಡಪ್ಪ ಚವ್ಹಾಣ, ಪ್ರಶಾಂತ ಸುತಾರ, ಪ್ರಕಾಶ ನವಲೆ, ಶರಣಮ್ಮ ನಾಗರಾಳ, ಕುಮಾರಿ ಅಶ್ವಿನಿ ಅಂಗಡಿ, ಮಹೇಶ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಕೊರೋನಾ ಕಾವ್ಯ-8

ನಂರುಶಿ ಅವರು ಗಜಲ್ ಸೇರಿದಂತೆ ಸಾಹಿತ್ಯದ ವಿವಿಧ ಪ್ರಕರಾದ ಕೃತಿಗಳು ಈಗಾಗಲೇ ಹೊರತಂದಿದ್ದು, ತಮ್ಮ ಗಜಲ್ ಮೂಲಕ ಕೊರೋನಾ ವೈರಸ್ ನಿಂದಲೇ ಮಾತನಾಡಿಸಿದ್ದಾರೆ.

ಮಹಿಳೆಯರ ಬಟ್ಟೆ ಕದಿಯುತ್ತಿದ್ದ ಕಳ್ಳನಿಗೆ ಥಳಿತ..!

ಹುಬ್ಬಳ್ಳಿ: ಚಿನ್ನಾಭರಣ ಕದ್ದಿರೋ ಕಳ್ಳರನ್ನು ನೋಡಿದ್ದೇವೆ. ಮನೆ ದರೋಡೆ ಮಾಡಿರೋದನ್ನು ನೋಡಿದ್ದೇವೆ. ಆದ್ರೆ ಮಹಿಳೆಯರ ಬಟ್ಟೆ…

ಲವ್ ಜಿಹಾದ್ ತಡೆಯಲು ಸರ್ಕಾರ ಹೊಸ ಕಾನೂನು ಜಾರಿಗೊಳಿಸಲು ಮುಂದಾಗಿದೆ – ಬೊಮ್ಮಾಯಿ!

ಬೆಂಗಳೂರು : ಲವ್ ಜಿಹಾದ್ ತೆಯುವುದಕ್ಕಾಗಿ ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೊಳಿಸುವ ಚಿಂತನೆ ನಡೆದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶಿರಹಟ್ಟಿ ಕಟ್ಟಿಗೆ ಅಡ್ಡೆಗಳ ವಿಚಾರದಲ್ಲಿ ಪತ್ರಗಳ ತಾಪತ್ರೆಯ ತಪ್ಪೋದು ಯಾವಾಗ?

ಒಂದು ಮಾದ್ಯಮವಾಗಿ ಉತ್ತರಪ್ರಭ ಜನಪರವಾಗಿ ಕಾರ್ಯ ಮಾಡುತ್ತಿರುವಾಗ ಆಡಳಿತ ಯಂತ್ರಕ್ಕೆ ಮಾತ್ರ ಈ ವಿಚಾರದ ಗಂಭೀರತೆಯ ಅರ್ಥವಾಗುತ್ತಿಲ್ಲವೇ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಇದಕ್ಕೆ ಕಾರಣ ಈಗಾಗಲೇ ಶಿರಹಟ್ಟಿ ಪಟ್ಟಣದಲ್ಲಿರುವ ಕಟ್ಟಿಗೆ ಅಡ್ಡೆಗಳ ವಿಚಾರವಾಗಿ ಸೂಕ್ತ ಕ್ರಮಕ್ಕಾಗಿ ಶಿರಹಟ್ಟಿ ತಹಶೀಲ್ದಾರ್ ಸ್ಥಳೀಯ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗೆ ಆದೇಶಿಸಿದ್ದರು.