ಕೊಪ್ಪಳ: ಕರ್ನಾಟಕ ಪತ್ರಿಕಾ ದಿನಾಚರಣೆಯನ್ನು ಕೊಪ್ಪಳ ಮೀಡಿಯಾ ಕ್ಲಬ್ ವತಿಯಿಂದ ಜು. 1ರಂದು ಬೆಳಿಗ್ಗೆ 10.30ಕ್ಕೆ ತೋಟಗಾರಿಕೆ ಇಲಾಖೆಯ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಗದಗಿನ ವೀರೇಶ್ವರ ಪುಣ್ಯಾಶ್ರಮದ ಕಲ್ಲಜ್ಜನವರು ಪೀಠಾಧಿಪತಿ ಕಾರ್ಯಕ್ರಮ ಉದ್ಘಾಟಿಸುವರು. ವಿಜಯಪುರದ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಉಪನ್ಯಾಸ ನೀಡುವರು.

ಮೀಡಿಯಾ ಕ್ಲಬ್ ಅಧ್ಯಕ್ಷ ಶರಣಪ್ಪ ಬಾಚಲಾಪುರ ಅಧ್ಯಕ್ಷತೆ ವಹಿಸುವರು. ವಾರ್ತಾಧಿಕಾರಿ ಬಿ.ವಿ. ತುಕರಾಮರಾವ್, ಪತ್ರಕರ್ತ ವಿನಾಯಕ ಶ್ರೀವಾಸ್ತವ್ ಪಾಲ್ಗೊಳ್ಳುವರು.

ವಿವಿಧ ಪ್ರಶಸ್ತಿಗಳಿಗೆ ಭಾಜನರಾದ ಶಿವಕುಮಾರ ಪತ್ತಾರ, ಛಾಯಗ್ರಾಹಕರಾದ ಪ್ರಕಾಶ ಕಂದಕೂರು, ಭರತ್ ಕಂದಕೂರ, ಪತ್ರಕರ್ತರಾದ ಹುಸೇನ ಪಾಷಾ, ದೇವು ನಾಗನೂರು ಹಾಗೂ ಮೌಲಾಹುಸೇನ ಅವರಿಗೆ ಬುಲ್ಡಿಯಾರ ಸನ್ಮಾನ ನಡೆಯಲಿದೆ ಎಂದು ಮೀಡಿಯಾ ಕ್ಲಬ್ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಪ್ಯಾಕೇಜ್ ಹಾಗೂ ಅಲ್ಪಾವಧಿ ಟೆಂಡರ್ ಕ್ಕೆ ಭಾರೀ ವಿರೋಧ: ಟೆಂಡರ್ ನಿಯಮ ಗಾಳಿಗೆ ತೂರಿದ ಆರೋಪ- ಕೃಷ್ಣಾ ತೀರ ಗುತ್ತಿಗೆದಾರರ ಪ್ರತಿಭಟನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಹಲವಾರು ಕಾಮಗಾರಿಗಳನ್ನು ಏಕತ್ರಗೊಳಿಸಿ ಪ್ಯಾಕೇಜ್ ಟೆಂಡರ್…

ಅಗಸ್ತ್ಯ ತೀರ್ಥ ಬಾವಿಯಲ್ಲಿ ನೀರುಪಾಲಾದ ಯುವಕ

ದೀಪಾವಳಿ ಹಬ್ಬಕ್ಕೆಂದು ಸಂಬಂಧಿಕರ ಊರಿಗೆ ಬಂದಿದ್ದ ಯುವಕ ನೀರುಪಾಲಾದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ

ರಾಮನಗರ: ಮೇಕೆದಾಟು ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಲು ಕಾಂಗ್ರೆಸ್ ಪಕ್ಷ ಜನವರಿ 9 ರಿಂದ…

ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಪೆನ್ಷನ್ ಸ್ಕೀಮ್:ಕಂದಾಯ ಸಚಿವ ಆರ್.ಅಶೋಕ್

ಗದಗ: ಇನ್ಮುಂದೆ ನೋ ಪೊಸ್ಟ್ ಆಫೀಸ್ ಓನ್ಲಿ ಬ್ಯಾಂಕ್ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.ಗದಗನಲ್ಲಿ…