ಕೊಪ್ಪಳ: ಕರ್ನಾಟಕ ಪತ್ರಿಕಾ ದಿನಾಚರಣೆಯನ್ನು ಕೊಪ್ಪಳ ಮೀಡಿಯಾ ಕ್ಲಬ್ ವತಿಯಿಂದ ಜು. 1ರಂದು ಬೆಳಿಗ್ಗೆ 10.30ಕ್ಕೆ ತೋಟಗಾರಿಕೆ ಇಲಾಖೆಯ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಗದಗಿನ ವೀರೇಶ್ವರ ಪುಣ್ಯಾಶ್ರಮದ ಕಲ್ಲಜ್ಜನವರು ಪೀಠಾಧಿಪತಿ ಕಾರ್ಯಕ್ರಮ ಉದ್ಘಾಟಿಸುವರು. ವಿಜಯಪುರದ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಉಪನ್ಯಾಸ ನೀಡುವರು.

ಮೀಡಿಯಾ ಕ್ಲಬ್ ಅಧ್ಯಕ್ಷ ಶರಣಪ್ಪ ಬಾಚಲಾಪುರ ಅಧ್ಯಕ್ಷತೆ ವಹಿಸುವರು. ವಾರ್ತಾಧಿಕಾರಿ ಬಿ.ವಿ. ತುಕರಾಮರಾವ್, ಪತ್ರಕರ್ತ ವಿನಾಯಕ ಶ್ರೀವಾಸ್ತವ್ ಪಾಲ್ಗೊಳ್ಳುವರು.

ವಿವಿಧ ಪ್ರಶಸ್ತಿಗಳಿಗೆ ಭಾಜನರಾದ ಶಿವಕುಮಾರ ಪತ್ತಾರ, ಛಾಯಗ್ರಾಹಕರಾದ ಪ್ರಕಾಶ ಕಂದಕೂರು, ಭರತ್ ಕಂದಕೂರ, ಪತ್ರಕರ್ತರಾದ ಹುಸೇನ ಪಾಷಾ, ದೇವು ನಾಗನೂರು ಹಾಗೂ ಮೌಲಾಹುಸೇನ ಅವರಿಗೆ ಬುಲ್ಡಿಯಾರ ಸನ್ಮಾನ ನಡೆಯಲಿದೆ ಎಂದು ಮೀಡಿಯಾ ಕ್ಲಬ್ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಶರವೇಗದಲ್ಲಿ ಸೋಂಕು: ಇಂದು 72 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 72 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 774…

ಆರ್ ಆರ್ ನಗರ, ಶಿರಾದಲ್ಲಿ ಆರಂಭಿಕ ಮುನ್ನಡೆ ಕಾಯ್ದುಕೊಂಡ ಬಿಜೆಪಿ!

ಬೆಂಗಳೂರು : ರಾಜ್ಯದಲ್ಲಿ ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದ್ದು, ಫಲಿತಾಂಶ ಇಂದು ಹೊರ ಬರುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿವೆ.

ಆಮರಣ ಉಪವಾಸ ಸತ್ಯಾಗ್ರಹ 3ನೇ ದಿನದತ್ತ : ಧರಣಿ ನಿರತರ ಆರೋಗ್ಯ ತಪಾಸಣೆ

ಉತ್ತರಪ್ರಭಆಲಮಟ್ಟಿ: ಶಾಸ್ತ್ರಿ ಜಲಾಶಯ ವ್ಯಾಪ್ತಿಯಲ್ಲಿನ ಜಿಲ್ಲೆಯ ಎಲ್ಲ ಕಾಲುವೆಗಳಿಗೆ ನೀರು ಹರಿಸಿ ಕೆರೆಗಳನ್ನು ತುಂಬಬೇಕು ಎಂದು…

ಗದಗ ಜಿಲ್ಲೆಯಲ್ಲಿಂದು 116 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 116 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3894 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಗುಣಮುಖರಾಗಿ ಇಂದು 121 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಒಟ್ಟು ಬಿಡುಗಡೆ ಹೊಂದಿದವರ ಸಂಖ್ಯೆ 2756.