ಉತ್ತರಪ್ರಭ

ಇಂಡಿ: ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರವನ್ನು ನೀಡುವುದು ನಮ್ಮೆಲ್ಲರ ಜವಾಬ್ದಾರಿ ಇರುವುದರಿಂದ ಹೆಚ್ಚು ಹೆಚ್ಚು ಗಿಡಗಳನ್ನು ಬೆಳೆಸುವುದು ನಮ್ಮೆಲ್ಲರ ರ‍್ತವ್ಯವಾಗಿದೆ ಎಂದು ತಾಲೂಕಾ ಯೋಜನಾಧಿಕಾರಿ ರಾಜು ನಾಯಕ ತಿಳಿಸಿದರು.
ಅವರು ಗುರುವಾರ ಸಂಜೆ ರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಸ್ಥೆ ಹಾಗೂ ಹಿರೇರೂಗಿ ಗ್ರಾಮದ ಕೆಬಿಎಸ್,ಕೆಜಿಎಸ್,ಯುಬಿಎಸ್ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಸಾಲುಮರದ ತಿಮ್ಮಕ್ಕ ಅವರ 111 ನೇ ಜನ್ಮ ದಿನಾಚರಣೆ ನಿಮಿತ್ಯ ಜರುಗಿದ ಪರಿಸರ ಜಾಗೃತಿ ಮಾಹಿತಿ ಮತ್ತು ಸಸಿ ನೆಡುವ ಕರ‍್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪರಿಸರವನ್ನು ಸಂರಕ್ಷಿಸಲು, ಮಾನವ ಮತ್ತು ಪರಿಸರದ ನಡುವಿನ ಸಮತೋಲನವನ್ನು ಕಾಪಾಡಿಕೊಳ್ಳಲು ನಾವು ಮಾನವ ಚಟುವಟಿಕೆಗಳನ್ನು ಸುಧಾರಿಸಬೇಕಾಗಿದೆ ಎಂದು ಹೇಳಿದರು.
ಕೃಷಿ ಅಧಿಕಾರಿ ಪ್ರಕಾಶ ಬಡಿಗೇರ ಮಾತನಾಡಿ, ಶಾಲಾ ಆವರಣದಲ್ಲಿ ವಿದ್ಯರ‍್ಥಿ ಹಂತದಲ್ಲಿಯೇ ಸಸಿಗಳನ್ನು ನೆಡುವ ಮೂಲಕ ಮಕ್ಕಳಲ್ಲಿ ಗಿಡಮರಗಳನ್ನು ಬೆಳೆಸುವ ಹವ್ಯಾಸವನ್ನು ರೂಢಿಸಬೇಕು ಎಂದು ಹೇಳಿದರು.
ವಲಯ ಮೇಲ್ವಿಚಾರಕಿ ಗೀತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆಜಿಎಸ್ ಶಾಲಾ ಮುಖ್ಯ ಶಿಕ್ಷಕ ಸುರೇಶ ಅಂಕಲಗಿ, ಶಿಕ್ಷಕರಾದ ಎಸ್ ಆರ್ ಚಾಳೇಕಾರ, ಸಂತೋಷ ಬಂಡೆ ಪರಿಸರದ ಮಹತ್ವ ಕುರಿತು ಮಾತನಾಡಿದರು.
ಕೆಬಿಎಸ್ ಶಾಲಾ ಮುಖ್ಯ ಶಿಕ್ಷಕ ಜಿ ಡಿ ಜಾಧವ, ಶಿಕ್ಷಕರಾದ ಎಸ್ ಡಿ ಬಿರಾದಾರ, ಎಸ್ ಎಂ ಪಂಚಮುಖಿ, ಭಾರತಿ ಭಜಂತ್ರಿ, ಒಕ್ಕೂಟದ ಅಧ್ಯಕ್ಷ ಸುಧಾ ಕುಂಬಾರ,ಸದಸ್ಯರಾದ ಆಶಾಭಾನು ನದಾಫ್ ,ಸುನಂದಾ ಬೇನೂರ, ಶಾಂಭವಿ ಹರನಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇದೇ ಸಂರ‍್ಭದಲ್ಲಿ ಶಾಲಾ ಮಕ್ಕಳಿಗೆ ಸಸಿಗಳನ್ನು ವಿತರಿಸಲಾಯಿತು. ಮಹಿಳಾ ಸ್ವಸಹಾಯ ಸಂಘದ ಪದಾಧಿಕಾರಿಗಳು ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟರು

Leave a Reply

Your email address will not be published. Required fields are marked *

You May Also Like

ನಗರ ಸಭೆ ಚುನಾವಣೆ: 5ನೇ ವಾರ್ಡನಲ್ಲಿ ಬಿಜೆಪಿಗೆ ಜಯ

ಗದಗ ಬೇಟಗೇರಿ:ನಗರ ಸಭೆ 5 ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 5ನೇ  ವಾರ್ಡನಲ್ಲಿ…

ದುಗೂಡದ ಮದ್ಯೆಯೂ ಪರೀಕ್ಷೆ ಬರೆದ ವಿದ್ಯಾರ್ಥಿಗಳು..!: ಪರೀಕ್ಷೆ ಮುಗಿಸಿದ ಸಿದ್ದಪ್ಪ ಮನೆಗೆ ಮರಳಲೇ ಇಲ್ಲ..!

ಮುಂಡರಗಿ: ಗೆಳೆಯರಿಗೆ ಅಚ್ಚುಮೆಚ್ಚಾಗಿದ್ದಾತ. ನಿನ್ನೆಯಷ್ಟೆ ಭವಿಷ್ಯದ ನಿರ್ಣಾಯಕ ಘಟ್ಟದ ಮೊದಲ ಪರೀಕ್ಷೆ ಮುಗಿಸಿದ್ದ. ಸಹಪಾಠಿಗಳೊಂದಿಗೆ ಕೂಡಿ…

ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು!

ಹಾಸನ: ಶತಾಯುಷಿ ಸಾಲುಮರದ ತಿಮ್ಮಕ್ಕನವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಹೊಟ್ಟೆ ನೋವು, ವಾಂತಿ,…

ಮುಂಡರಗಿ ಮಿನಿ ವಿಧಾನಸೌಧಕ್ಕೂ ಶುರುವಾಯಿತೆ ಕೊರೊನಾ ಭೀತಿ..!

ಪಟ್ಟಣದಲ್ಲಿ ಕಳೆದ ಎರಡು ಮೂರು ದಿನಗಳಿಂದ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇದರಿಂದ ಮುಂಡರಗಿಯ ಜನ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ದಿಂದ ಆತಂಕಕ್ಕೀಡಾಗಿದ್ದಾರೆ. ಆದರೆ ಇಂದು ಪಟ್ಟಣದ ಮಿನಿವಿಧಾನ ಸೌಧ ಕಾರ್ಯಾಲಯ ಗೇಟ್ ಗೆ ಬೀಗ ಹಾಕಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.