ಉತ್ತರಪ್ರಭ

ಇಂಡಿ: ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರವನ್ನು ನೀಡುವುದು ನಮ್ಮೆಲ್ಲರ ಜವಾಬ್ದಾರಿ ಇರುವುದರಿಂದ ಹೆಚ್ಚು ಹೆಚ್ಚು ಗಿಡಗಳನ್ನು ಬೆಳೆಸುವುದು ನಮ್ಮೆಲ್ಲರ ರ‍್ತವ್ಯವಾಗಿದೆ ಎಂದು ತಾಲೂಕಾ ಯೋಜನಾಧಿಕಾರಿ ರಾಜು ನಾಯಕ ತಿಳಿಸಿದರು.
ಅವರು ಗುರುವಾರ ಸಂಜೆ ರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಸ್ಥೆ ಹಾಗೂ ಹಿರೇರೂಗಿ ಗ್ರಾಮದ ಕೆಬಿಎಸ್,ಕೆಜಿಎಸ್,ಯುಬಿಎಸ್ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಸಾಲುಮರದ ತಿಮ್ಮಕ್ಕ ಅವರ 111 ನೇ ಜನ್ಮ ದಿನಾಚರಣೆ ನಿಮಿತ್ಯ ಜರುಗಿದ ಪರಿಸರ ಜಾಗೃತಿ ಮಾಹಿತಿ ಮತ್ತು ಸಸಿ ನೆಡುವ ಕರ‍್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪರಿಸರವನ್ನು ಸಂರಕ್ಷಿಸಲು, ಮಾನವ ಮತ್ತು ಪರಿಸರದ ನಡುವಿನ ಸಮತೋಲನವನ್ನು ಕಾಪಾಡಿಕೊಳ್ಳಲು ನಾವು ಮಾನವ ಚಟುವಟಿಕೆಗಳನ್ನು ಸುಧಾರಿಸಬೇಕಾಗಿದೆ ಎಂದು ಹೇಳಿದರು.
ಕೃಷಿ ಅಧಿಕಾರಿ ಪ್ರಕಾಶ ಬಡಿಗೇರ ಮಾತನಾಡಿ, ಶಾಲಾ ಆವರಣದಲ್ಲಿ ವಿದ್ಯರ‍್ಥಿ ಹಂತದಲ್ಲಿಯೇ ಸಸಿಗಳನ್ನು ನೆಡುವ ಮೂಲಕ ಮಕ್ಕಳಲ್ಲಿ ಗಿಡಮರಗಳನ್ನು ಬೆಳೆಸುವ ಹವ್ಯಾಸವನ್ನು ರೂಢಿಸಬೇಕು ಎಂದು ಹೇಳಿದರು.
ವಲಯ ಮೇಲ್ವಿಚಾರಕಿ ಗೀತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆಜಿಎಸ್ ಶಾಲಾ ಮುಖ್ಯ ಶಿಕ್ಷಕ ಸುರೇಶ ಅಂಕಲಗಿ, ಶಿಕ್ಷಕರಾದ ಎಸ್ ಆರ್ ಚಾಳೇಕಾರ, ಸಂತೋಷ ಬಂಡೆ ಪರಿಸರದ ಮಹತ್ವ ಕುರಿತು ಮಾತನಾಡಿದರು.
ಕೆಬಿಎಸ್ ಶಾಲಾ ಮುಖ್ಯ ಶಿಕ್ಷಕ ಜಿ ಡಿ ಜಾಧವ, ಶಿಕ್ಷಕರಾದ ಎಸ್ ಡಿ ಬಿರಾದಾರ, ಎಸ್ ಎಂ ಪಂಚಮುಖಿ, ಭಾರತಿ ಭಜಂತ್ರಿ, ಒಕ್ಕೂಟದ ಅಧ್ಯಕ್ಷ ಸುಧಾ ಕುಂಬಾರ,ಸದಸ್ಯರಾದ ಆಶಾಭಾನು ನದಾಫ್ ,ಸುನಂದಾ ಬೇನೂರ, ಶಾಂಭವಿ ಹರನಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇದೇ ಸಂರ‍್ಭದಲ್ಲಿ ಶಾಲಾ ಮಕ್ಕಳಿಗೆ ಸಸಿಗಳನ್ನು ವಿತರಿಸಲಾಯಿತು. ಮಹಿಳಾ ಸ್ವಸಹಾಯ ಸಂಘದ ಪದಾಧಿಕಾರಿಗಳು ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟರು

Leave a Reply

Your email address will not be published. Required fields are marked *

You May Also Like

ಅಡರಕಟ್ಟಿ-ಬಡ್ನಿ ರಸ್ತೆಗೆ ದುರಸ್ಥಿ ಭಾಗ್ಯವೆಂದು? ಕಾಮಗಾರಿ ಮುಗಿಸಿ ಕೈತೊಳೆದುಕೊಂಡರೇ ಗುತ್ತಿಗೆದಾರ!

ಸಂಚಾರ ಸುಗಮವಾಗಿದ್ದರೆ, ಎಲ್ಲವೂ ಸೌಖ್ಯ, ಆದರೆ ಅದೇ ಸಂಚಾರ ಸಂಕಟದಿಂದ ಕೂಡಿದರೆ ಸಂಚಕಾರ ಗ್ಯಾರಂಟಿ. ಅದೆಷ್ಟೋ ಜನರು ಗುತ್ತಿಗೆ ಪಡೆದು ರಸ್ತೆ ನಿರ್ಮಾಣದಲ್ಲಿ ಗುಣಮಟ್ಟಕ್ಕಿಂತ ಕಮಾಯಿ ಮಾಡಿಕೊಂಡಿದ್ದೇ ಜಾಸ್ತಿ. ಇನ್ನು ರಸ್ತೆ ನಿರ್ಮಾಣದ ನಂತರ ನಿರ್ವಹಣೆ ಮಾಡಬೇಕಾದವರು ಆ ಕಡೆ ಮುಖಾನೂ ಮಾಡಿಲ್ಲ. ಇಂತಹ ಅದೆಷ್ಟೋ ರಸ್ತೆಗಳಿಂದ ಜನಸಾಮಾನ್ಯರಿಗೆ ಸಂಚಕಾರಕ್ಕೆ ಸಂಚಕಾರ ಬಂದಿದೆ. ಹೀಗಾಗಿ ನಿಮ್ಮ ಉತ್ತರಪ್ರಭ ಗದಗ ಜಿಲ್ಲೆಯಲ್ಲಿನ ಇಂಥ ರಸ್ತೆಗಳ ಕುರಿತು ಸಂಚಿಕೆ ರೂಪದಲ್ಲಿ ಸುದ್ದಿ ಪ್ರಸಾರ ಮಾಡಲು ಮುಂದಾಗಿದೆ.

ರಾಜ್ಯದಲ್ಲಿಂದು 7571 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 7571 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 264546 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 6561 ಪ್ರಕರಣಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿವೆ.

ಕಂಡಕ್ಟರ್, ಡ್ರೈವರ್ ಗಳನ್ನು ಟಾರ್ಗೇಟ್ ಮಾಡಿದ್ರಾ ಡಿಪೋ ಮ್ಯಾನೇಜರ್..?

ಇದೀಗ ಡಿಪೋ ಮ್ಯಾನೇಜರ್ ಬಸಪ್ಪ ಪೂಜಾರ್ ಅವರ ವರ್ತನೆ ಮತ್ತೊಂದು ಯಡವಟ್ಟಿಗೆ ಕಾರಣವಾಗಿದೆ. ನಿನ್ನೆ ಘಟನೆ ನಂತರ ಇದೀಗ ಸಿಬ್ಬಂಧಿಗಳನ್ನು ಡಿಪೋ ಮ್ಯಾನೇಜರ್ ಟಾರ್ಗೆಟ್ ಮಾಡಿದ್ದಾರೆಯೇ? ಎನ್ನುವ ಪ್ರಶ್ನೆ ಉದ್ಭವವಾಗಿದೆ.

ಎಷ್ಟೆ ಕಷ್ಟ ಬಂದ್ರು ಬಲ್ದೋಟ ಹುನ್ನಾರ ಫಲಿಸಲು ಬಿಡಲ್ಲ: ಎಸ್.ಆರ್.ಹಿರೇಮಠ

ಗದಗ: ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಎಷ್ಟೆ ಕಷ್ಟ ಬಂದ್ರು ಬಲ್ದೋಟ ಹುನ್ನಾರ ಫಲಿಸಲು ಬಿಡುವುದಿಲ್ಲ…