ಉತ್ತರಪ್ರಭ
ಆಲಮಟ್ಟ:
ಕೃಷ್ಣಾ ನದಿ ತೀರದ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಧಾರಾಕಾರ ಮಳೆ ಸುರಿಯುತ್ತಿದ್ದು ಆಲಮಟ್ಟಿ ಜಲಾಶಯಕ್ಕೆ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿರುವ ಪರಿಣಾಮ ಹೊರ ಹರಿವಿನಲ್ಲಿ ಹೆಚ್ಚಳವಾಗಿದೆ. ಇದರಿಂದ ನದಿತೀರದ ಗ್ರಾಮಗಳ್ಲಿ ಪ್ರವಾಹ ಬಾಧೆ ಸಮಸ್ಯೆ ಸಮರೋಪಾದಿಯಲ್ಲಿ ನಿಯಂತ್ರಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು, ಪ್ರವಾಹಪೀಡಿತ ನಿಡಗುಂದಿ ತಾಲೂಕಿನ ವಿವಿಧ ಹಳ್ಳಿಗಳಿಗೆ ಮಂಗಳವಾರ ಭೇಟಿ ನೀಡಿದರು. ಸಹಾಯಕ ಆಯುಕ್ತ ಬಲರಾಮ‌ ಲಮಾಣಿ ಅವರೊಂದಿಗೆ ಮೊದಲಿಗೆ ಸಮೀಪದ ಯಲಗೂರ ಗ್ರಾಮಕ್ಕೆ ಭೇಟಿ ನೀಡಿದರು.
ರಾಜ್ಯದ ವಿವಿಧೆಡೆ ಮತ್ತು ಪಕ್ಕದ ಮಹಾರಾಷ್ಟ್ರರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದೆ. ಇದರಿಂದಾಗಿ ನದಿಗಳು ತುಂಬಿ ಯಾವುದೇ ಸಂದರ್ಭದಲ್ಲಿ ತೀವ್ರ ಹಾನಿ ಸಂಭವಿಸಬಹುದಾಗಿದೆ. ಹೀಗಾಗಿ ನದಿತೀರದ ಗ್ರಾಮಸ್ಥರು ನದಿಯ ಬಳಿಗೆ ಹೋಗಬಾರದು. ಜಾನುವಾರು ಬಿಡಬಾರದು. ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂದು ಗ್ರಾಮಸ್ಥರಿಗೆ ತಿಳಿ ಹೇಳಿದರು. ಬಳಿಕ ಜಿಲ್ಲಾಧಾಕಾರಿಗಳು, ನದಿ ದಂಡೆಯ ಊರಾದಯಲ್ಲಮ್ಮನ ಬೂದಿಹಾಳ ಗ್ರಾಮಕ್ಕೆ ತೆರಳಿದರು.
ದೇವಸ್ಥಾನಕ್ಕೆ ಬರುವ ಭಕ್ತರು ಮತ್ತು ಗ್ರಾಮಸ್ಥರು ಸ್ನಾನಕ್ಕಾಗಿ ನದಿಗೆ ಇಳಿಯಬಾರದು ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು. ಮಳೆ ಹಿನ್ನೆಲೆಯಲ್ಲಿ ನದಿಯತ್ತ ಯಾರು ಹೋಗಬಾರದು ಎನ್ನುವ ಫಲಕವೊಂದನ್ನು ಹಾಕಿಸಲು ಮತ್ತು ಈ ಸ್ಥಳದಲ್ಲಿ ಪೊಲೀಸ್ ಪೇದೆಯೊಬ್ಬರನ್ನು ನೇಮಿಸಲು ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು. ಬಳಿಕ ಜಿಲ್ಲಾಧಿಕಾರಿಗಳು ಮಸೂತಿ ಗ್ರಾಮಕ್ಕೆ ಭೇಟಿ ನೀಡಿದರು. ಅಲ್ಲಿನ ಅಂಗನವಾಡಿಗೆ ತೆರಳಿ ಆಹಾರ ಸಾಮಗ್ರಿಗಳನ್ನು ಪರಿಶೀಲಿಸಿದರು.


ಸ್ಮಶಾನ ಜಾಗಕ್ಕೆ ಮನವಿ: ಯಲಗುರ ಗ್ರಾಮ ಭೇಟಿ ವೇಳೆ ಅಲ್ಲಿನ ಗ್ರಾಮಸ್ಥರ ಸ್ಮಶಾನಕ್ಕೆ ಜಾಗ ಕೇಳಿದರು. ಯಲಗುರ
ಮುಳುಗಡೆ ಪ್ರದೇಶ ವ್ಯಾಪ್ತಿಯನ್ನು ಸರಿಯಾಗಿ ಗುರುತಿಸಿದ ಬಳಿಕ ಉಳಿಯುವ ಜಾಗವನ್ನು ಸ್ಮಶಾನಕ್ಕಾಗಿ ಬಳಕೆ ಮಾಡಿಕೊಳ್ಳಲು ಪ್ರಸ್ತಾವನೆಯನ್ನು ಸಿದ್ದಪಡಿಸಿ ಸಲ್ಲಿಸಲು ತಹಸೀಲ್ದಾರ ಅನಿಲಕುಮಾರ ಡವಳಗಿ ಅವರಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಪರಿಶೀಲನೆ ಗ್ರಾಮಗಳ ಭೇಟಿ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಯಲಗೂರ, ಮಸೂತಿ ಮತ್ತು ಯಲ್ಲಮ್ಮನ ಬೂದಿಹಾಳ ಗ್ರಾಮಗಳಲ್ಲಿ ಹಿಂದಿನ ವರ್ಷ ದಲ್ಲಿ ಆಗಿರುವ ಬೆಳೆ ಮತ್ತು ಮನೆ ಹಾನಿಗೆ ದೊರೆತ ಪರಿಹಾರ, ಬೆಳೆ ವಿಮೆ ಪರಿಹಾರದ ಬಗ್ಗೆ ಮಾಹಿತಿ ಪಡೆದು ಪರಿಶೀಲಿಸಿದರು.


ಈ ಸಂದರ್ಭದಲ್ಲಿ ನಿಡಗುಂದಿ ತಾಪಂ ಇಓ ವಿ ಎಸ್ ಹಿರೇಮಠ, ನಿಡಗುಂದಿ ಪುರಸಭೆ ಮುಖ್ಯಾಧಿಕಾರಿ ರಮೇಶ ಮಾಡ ಬಾಳ, ಯಲಗೂರ ಪಿಡಿಓ ಹನುಮಂತ ವಡ್ಡರ, ಬಳಬಟ್ಟಿ ಪಿಡಿಓ ಮಹಾಂತೇಶ ಹೊಸಗೌಡರ ಹಾಗೂ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

ಇಂದು ಕೂಡ ಶತಕ ದಾಟಿದ ಸೋಂಕಿತರ ಸಂಖ್ಯೆ!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇಂದು ಕೂಡ ಸೋಂಕಿತರ…

ಗದಗ ಜಿಲ್ಲೆಯಲ್ಲಿ ಮಣ್ಣು-ಮಾಫಿಯಾ ಹಸಿವಿಗೆ ಬೋಳಾಗುತ್ತಿವೆ ಹೊಲ!

ಲಕ್ಷ್ಮೇಶ್ವರ: ಹಾಡು ಹಗಲೇ ಜಿಲ್ಲೆಯ ಲಕ್ಷ್ಮೇಶ್ವರದ ಹಲವು ಹಳ್ಳಿಗಳಲ್ಲಿ ಹೊಲಗಳ ಮಣ್ಣನ್ನು ಹೊತ್ತೊಯುತ್ತಿದೆ ಮಣ್ಣು ಮಾಫಿಯಾ.…

ಕೋವಿಡ್-19 ನಿಯಂತ್ರಣ : ಜಿಲ್ಲೆಯಲ್ಲಿ 2 ವಾರ ಪ್ರತಿಬಂಧಕಾಜ್ಞೆ ಮುಂದುವರಿಕೆ

ಕೋವಿಡ್ -19 ಹರಡದಂತೆ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದೇಶದನ್ವಯ ಮುಂದಿನ ಎರಡು ವಾರಗಳವರೆಗೆ ನಿಗದಿತ ಸಮಯ ಹೊರತುಪಡಿಸಿ ಉಳಿದ ಸಮಯದಲ್ಲಿ ಸಂಚಾರ ನಿಷೇಧಿಸಿದೆ.

ಮುದ್ದು ಮಾಡೋ ಗೆಳೆಯ ಪೋಸ್ಟರ್ ಅನಾವರಣ

ಆರ್ ಟಿ ರೆಕಾರ್ಡಿಂಗ್ ಸ್ಟುಡಿಯೋ ಪ್ರೊಡಕ್ಷನ್ ಬಾಗಲಕೋಟೆ ಅವರ ಮುದ್ದು ಮಾಡೋ ಗೆಳೆಯ ಮ್ಯೂಸಿಕ್ ಆಲ್ಬಂ ಸಾಂಗ್ ಫಸ್ಟ್ ಲುಕ್ ಪೋಸ್ಟರ್ ಅನ್ನು ಬಾಗಲಕೋಟೆಯ ಸಮಗ್ರ ಜೀವನ ವಿಕಾಸ ಸಂಸ್ಥೆಯ ಅಂಧ ಮಕ್ಕಳ ವಸತಿ ಶಾಲೆಯಲ್ಲಿ ಬಿಡುಗಡೆ ಮಾಡಲಾಯಿತು.