ರೋಣ: ತಾಲ್ಲೂಕಿನ ಕೌಜಗೇರಿ ಗ್ರಾಮ ಪಂಚಾಯ್ತಿ ಅಧ್ಯಕ್ಷರ ಆಯ್ಕೆಯ ಅಂಗವಾಗಿ ಮಂಗವಾರ ಚುನಾವಣಾ ಪ್ರಕ್ರಿಯೆ ಜರುಗಿತು. ಹಿಂದಿನ ಅಧ್ಯಕ್ಷೆ ಟಿ ಸಿ ಅಮರಗೋಳವರ ರಾಜೀನಾಮೆಯಿಂದ ತೆರುವುಗೊಂಡಿದ್ದ ಸ್ಥಾನಕ್ಕೆ ಸಾವಿತ್ರಮ್ಮ ಶೇಖಪ್ಪ ಉಗರಗೋಳವರು ಒಬ್ಬರೇ ನಾಮ ಪತ್ರ ಸಲ್ಲಿಸಿದ್ದರಿಂದ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಗೊಂಡರು.ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಚುನಾವಣೆ ಅಧಿಕಾರಿಯಾಗಿ ಕಾರ್ಯ ನಿರ್ವಸಿದರು ಅವರ ಜೊತೆ ತಾಲ್ಲೂಕು ಪಂಚಾಯ್ತಿ ಸಿಬ್ಬಂದಿ ಮಂಜುನಾಥ ಪಾಟೀಲ್ ಗ್ರಾಮ ಪಂಚಾಯ್ತಿ ಪಿ ಡಿ ಓ ಹಾಗೂ ಕಾರ್ಯದರ್ಶಿ ಸಿಬ್ಬಂದಿಗಳು ಸಾತ್ ನೀಡಿದರು.
ಈ ಸಂದರ್ಭದಲ್ಲಿ ಸದಸ್ಯರಾದ ವಿಜಯಕುಮಾರ ನೀಲಗುಂದ, ತನುಜಾ ಬೇಗಂ ಅಮರಗೋಳ. ಮಹಾಲಕ್ಷ್ಮಿ ರಾಮಣ್ಣವರ, ಶೇಕವ್ವ ಭಜಂತ್ರಿ, ಜ್ಯೋತಿ ಹೊನ್ನೂರು,ಬಿಜೆಪಿ ಮುಖಂಡರಾದ ಸುರೇಶಗೌಡ ಪಾಟೀಲ್, ನೀಲಪ್ಪಗೌಡ ದಾನಪ್ಪಗೌಡರ, ಮುತ್ತಣ್ಣ ಜಂಗಣ್ಣವರ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

ಅತಿಥಿ ಉಪನ್ಯಾಸಕ ನೇಮಕಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್

ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 1,835 ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಸರ್ಕಾರ ಆದೇಶಿಸಿದೆ.

ಆಲಮಟ್ಟಿ : ಕೋಟಿ ಕಂಠ ಗೀತ ಗಾಯನ ಸಂಭ್ರಮ

ಆಲಮಟ್ಟಿ:  ಇಲ್ಲಿನ ಶಾಲಾ,ಕಾಲೇಜುಗಳಲ್ಲಿ ಶುಕ್ರವಾರ ಕನ್ನಡ ಸಿರಿತನದ ಗೀತೆಗಳು ಮೊಳಗಿದವು. ಕನ್ನಡಮ್ಮನ ಜ್ಞಾನ ದೀಪದ ಗೀತಗಾನ…

ಕಿಚ್ಚನಿಗೆ ಜಪಾನ್ ನಿಂದ ಅಭಿಮಾನಿಯ ಮನವಿ

ಅನಾರೋಗ್ಯದಿಂದಾಗಿ ಕಳೆದ ಎರಡು ವಾರಗಳಿಂದ ಬಿಗ್ ಬಾಸ್ನಲ್ಲಿ ಕಿಚ್ಚ ಸುದೀಪ್ ಭಾಗಿಯಾಗಿಲ್ಲ. ಇದು ಅಭಿಮಾನಿಗಳಿಗೆ ಬೇಸರವುಂಟು ಮಾಡಿದ್ದು ಒಂದುಕಡೆಯಾದರೇ, ಕಿಚ್ಚನ ಆರೋಗ್ಯದ ಬಗ್ಗೆಯೂ ಅಭಿಮಾನಿಗಳಿಗೆ ಚಿಂತೆಯಾಗಿದೆ.

ಕೊಡಗಾನೂರ ವೀರಭದ್ರೇಶ್ವರ ರಥೋತ್ಸವ

ಸಮೀಪದ ಕೊಡಗಾನೂರ ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವ ಭಕ್ತರ ಹರ್ಷೊದ್ಘಾರದ ಮಧ್ಯೆ ಶನಿವಾರ ಸಂಜೆ ಸಂಭ್ರಮದಿಂದ ನಡೆಯಿತು.