ರೋಣ: ತಾಲ್ಲೂಕಿನ ಕೌಜಗೇರಿ ಗ್ರಾಮ ಪಂಚಾಯ್ತಿ ಅಧ್ಯಕ್ಷರ ಆಯ್ಕೆಯ ಅಂಗವಾಗಿ ಮಂಗವಾರ ಚುನಾವಣಾ ಪ್ರಕ್ರಿಯೆ ಜರುಗಿತು. ಹಿಂದಿನ ಅಧ್ಯಕ್ಷೆ ಟಿ ಸಿ ಅಮರಗೋಳವರ ರಾಜೀನಾಮೆಯಿಂದ ತೆರುವುಗೊಂಡಿದ್ದ ಸ್ಥಾನಕ್ಕೆ ಸಾವಿತ್ರಮ್ಮ ಶೇಖಪ್ಪ ಉಗರಗೋಳವರು ಒಬ್ಬರೇ ನಾಮ ಪತ್ರ ಸಲ್ಲಿಸಿದ್ದರಿಂದ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಗೊಂಡರು.ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಚುನಾವಣೆ ಅಧಿಕಾರಿಯಾಗಿ ಕಾರ್ಯ ನಿರ್ವಸಿದರು ಅವರ ಜೊತೆ ತಾಲ್ಲೂಕು ಪಂಚಾಯ್ತಿ ಸಿಬ್ಬಂದಿ ಮಂಜುನಾಥ ಪಾಟೀಲ್ ಗ್ರಾಮ ಪಂಚಾಯ್ತಿ ಪಿ ಡಿ ಓ ಹಾಗೂ ಕಾರ್ಯದರ್ಶಿ ಸಿಬ್ಬಂದಿಗಳು ಸಾತ್ ನೀಡಿದರು.
ಈ ಸಂದರ್ಭದಲ್ಲಿ ಸದಸ್ಯರಾದ ವಿಜಯಕುಮಾರ ನೀಲಗುಂದ, ತನುಜಾ ಬೇಗಂ ಅಮರಗೋಳ. ಮಹಾಲಕ್ಷ್ಮಿ ರಾಮಣ್ಣವರ, ಶೇಕವ್ವ ಭಜಂತ್ರಿ, ಜ್ಯೋತಿ ಹೊನ್ನೂರು,ಬಿಜೆಪಿ ಮುಖಂಡರಾದ ಸುರೇಶಗೌಡ ಪಾಟೀಲ್, ನೀಲಪ್ಪಗೌಡ ದಾನಪ್ಪಗೌಡರ, ಮುತ್ತಣ್ಣ ಜಂಗಣ್ಣವರ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

ಆನ್ ಲೈನ್ ವಂಚನೆ – ಶಿಕ್ಷಕರೇ ಇವರ ಟಾರ್ಗೆಟ್!

ಕೊಪ್ಪಳ : ಆನ್ ಲೈನ್ ವಂಚಕರು ಇಲ್ಲಿ ಶಿಕ್ಷಕರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಶಿಕ್ಷಕರ ಖಾತೆಗೆ ಕನ್ನ ಹಾಕಿ, ವಂಚಿಸುತ್ತಿರುವ ನೂರಾರು ಪ್ರಕರಣಗಳು ಜಿಲ್ಲೆಯಲ್ಲಿ ಬೆಳಕಿಗೆ ಬರುತ್ತಿವೆ.

ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ ಜಯಕರ್ನಾಟಕ ಸಂಘಟನೆ ಆಕ್ರೊಶ

ರೈತ ವಿರೋಧಿ ಮಸೂದೆ ಜಾರಿ ಖಂಡಿಸಿ ಕರ್ನಾಟಕ ಬಂದ್ ಗೆ ಗದಗ ನಗರದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ನಗರದಲ್ಲಿ ಬೆಳ್ಳಂಬೆಳಿಗ್ಗೆಯೇ ಕನ್ನಡಪರ ಸಂಘಟನೆ ಕಾ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ರೈತವಿರೋಧ ಕಾಯ್ದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ರೈತ ವಿರೋಧ ನಿಲುವಿನ ಬಗ್ಗೆ ಕಿಡಿಕಾರಿದರು.

ಲಕ್ಷ್ಮೇಶ್ವರ ತಾಲೂಕಿನಲ್ಲಿ 7 ಜನ ಅವಿರೋಧ ಆಯ್ಕೆ: 167 ಸ್ಥಾನಗಳಿಗೆ ಚುನಾವಣೆ

ತಾಲ್ಲೂಕಿನಲ್ಲಿ ಗ್ರಾಮ ಪಂಚಾಯ್ತಿಗಳ ಚುನಾವಣಾ ಕಣ ರಂಗೇರುತ್ತಿದೆ. ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು.

ಬಾಗಲಕೋಟೆಯಲ್ಲಿಂದು 6 ಕೊರೊನಾ ಪಾಸಿಟಿವ್..!

ಬಾಗಲಕೋಟೆ: ಜಿಲ್ಲೆಯಲ್ಲಿಂದು 6 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ‌ 137 ಏರಿಕೆಯಾಗಿದೆ.…