ಆಲಮಟ್ಟಿ: ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಆಲಮಟ್ಟಿ ಆಣೆಕಟ್ಟುಯಿಂದ 1.25 ಲಕ್ಷ ಕ್ಯುಸೆಕ್ ನೀರು ಹೊರ ಗರಿವಿನ ಮೂಲಕ ಬುಧವಾರ ಮಧ್ಯಾಹ್ನದಿಂದ ಹರಿಸಲಾಗುತ್ತಿದೆ. ಜಲಾಶಯದ ಎಲ್ಲ ಗೇಟಗಳನ್ನು ತೆರೆದು ಜಲಾಶಯದ ಕೆಳಭಾಗದಲ್ಲಿರುವ ಕೃಷ್ಣಾ ನದಿಯ ತಳಪಾತ್ರಕ್ಕೆ ನೀರು ಬಿಡಲಾಗಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೃಷ್ಣಾ ನದಿಯ ಹರಿವನ್ನು ಗಮನದಲ್ಲಿಟ್ಟುಕೊಂಡು ಬುಧವಾರ ಮಧ್ಯಾಹ್ನ 3 ಗಂಟೆಯಿಂದ ಆಲಮಟ್ಟಿ ಜಲಾಶಯದ ಹೊರಹರಿವನ್ನು ಹೆಚ್ಚಿಸಲಾಗಿದೆ.
ಮಂಗಳವಾರದಿಂದ 1 ಲಕ್ಷ ಕ್ಯುಸೆಕ್ ಇದ್ದ ಹೊರಹರಿವು ಬುಧವಾರ 1.25 ಲಕ್ಷ ಕ್ಯುಸೆಕ್ ಗೆ ಹೆಚ್ಚಿಸಲಾಗಿದೆ.
ಬುಧವಾರ ಸಂಜೆ ಜಲಾಶಯಕ್ಕೆ 1.10 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ. ನಾಳೆಯೊಳಗೆ ಅದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮುಖ್ಯ ಎಂಜಿನಿಯರ್ ಎಚ್. ಸುರೇಶ ತಿಳಿಸಿದರು. ಪ್ರವಾಹ ಪರಸ್ಥಿತಿ ನಿಯಂತ್ರಣಕ್ಕಾಗಿ ಸುರಕ್ಷಿತ ಅಂತರ ಇಟ್ಟುಕೊಂಡು ಹಂತ ಹಂತವಾಗಿ ಹೊರಹರಿವು ಹೆಚ್ಚಿಸಲಾಗುತ್ತಿದೆ. ಸದ್ಯ ಒಳಹರಿವಿಗಿಂತ ಹೊರಹರಿವು ಹೆಚ್ಚಾದರೂ, ಒಳಹರಿವು ಇನ್ನಷ್ಟು ಹೆಚ್ಚಾಗಲಿದೆ ಎಂದರು. ಜಲಾಶಯಕ್ಕೆ ಬುಧವಾರ 9 ಟಿಎಂಸಿ ಅಡಿಯಷ್ಟು ನೀರು ಹರಿದು ಬಂದಿದೆ. ಸದ್ಯ 519.6 ಮೀ ಎತ್ತರದ ಜಲಾಶಯದಲ್ಲಿ 517.33 ಮೀ.ವರೆಗೆ ನೀರು ಸಂಗ್ರಹವಾಗಿದೆ. ಜಲಾಶಯದಲ್ಲಿ 88.63 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಕೊಯ್ನಾ 12.3 ಸೆಂ.ಮೀ, ನವಜಾ 14.2 ಸೆಂ.ಮೀ, ಮಹಾಬಳೇಶ್ವರ 13.6 ಸೆಂ.ಮೀ, ರಾಧಾನಗರಿ 12.6 ಸೆಂ.ಮೀ, ದೂಧಗಂಗಾ 9.6 ಸೆಂ.ಮೀ ಮಳೆಯಾಗಿದೆ.
ರಾಜಾಪುರ ಬ್ಯಾರೇಜ್ ಬಳಿ ಕೃಷ್ಣೆಯ ಹರಿವು 88500 ಕ್ಯುಸೆಕ್ ಹಾಗೂ ದೂಧಗಂಗಾ ನದಿಯಿಂದ 23,760 ಕ್ಯುಸೆಕ್ ಸೇರಿ 1,12,260 ಕ್ಯುಸೆಕ್ ನದಿ ಹರಿವು ಬಂದು ಕಲ್ಲೋಲ ಬ್ಯಾರೇಜ್ ಬಳಿ ಕರ್ನಾಟಕದ ಕೃಷ್ಣಾ ನದಿಯನ್ನು ಸೇರುತ್ತಿದೆ.

Leave a Reply

Your email address will not be published. Required fields are marked *

You May Also Like

ಬಿಜೆಪಿಯಲ್ಲಿನ ರಾಜಕೀಯ ಮೇಲಾಟಕ್ಕೆ ಕಾರಣವಾಗುತ್ತಾ ಶೀಕರಣಿ ಊಟ!

ಎರಡ್ಮೂರು ದಿನಗಳಿಂದ ಈಗಾಗಲೇ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ನಾಯಕತ್ವದ ಪ್ರಶ್ನೆ ಎದುರಾಗಿದೆ. ಈಗಾಗಲೇ ಕೆಲವು ಅತೃಪ್ತ ಶಾಸಕರು ನೀಡುತ್ತಿರುವ ಹೇಳಿಕೆಯಿಂದಾಗಿ ಸದ್ಯ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವಂತಿದೆ.

ಪಕ್ಷದ ಬಲವರ್ಧನೆಗೆ ಸರ್ವರೂ ಶ್ರಮಿಸಿ: ಲಮಾಣಿ

ಕಾರ್ಯಕರ್ತರ ಉತ್ತಮ ಕಾರ್ಯದಿಂದ ಪಕ್ಷ ಉತ್ತುಂಗಕ್ಕೆರಿದ್ದು, ನೂತನ ಪದಾಧಿಕಾರಿಗಳು ಪಕ್ಷ, ಸರ್ಕಾರ ಹಾಗೂ ಜನರ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವುದರ ಮೂಲಕ ಪಕ್ಷದ ಸಂಪೂರ್ಣ ಬಲವರ್ಧನೆಗೆ ಶ್ರಮಿಸಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಮನೆಯವರ ಕಿರುಕುಳಕ್ಕೆ ನೊಂದ ಸೊಸೆ ಮಾಡಿದ್ದೇನು?

ಮಂಡ್ಯ : ಮನೆಯವರ ನಿರಂತರ ದೌರ್ಜನ್ಯಕ್ಕೆ ಬೇಸತ್ತ ಸೊಸೆಯೊಬ್ಬರು ಪತಿ, ಮಾವ ಹಾಗೂ ಅತ್ತೆಯನ್ನು ರಾಡ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ.

ಕೊರೋನಾ ಸೋಂಕಿತರ ಚಿಕಿತ್ಸೆಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚುಎಷ್ಟು ಗೊತ್ತಾ?

ಕೊರೋನಾ ಸೋಂಕಿತರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇನ್ನು ಇಡೀ ದೇಶದ ಆರ್ಥಿಕ ಸ್ಥಿತಿ ಅಷ್ಟಕ್ಕಷ್ಟೆ. ಆದರೆ ಒಬ್ಬ ಕೊರೋನಾ ಸೋಂಕಿತರಿಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚು ಎಷ್ಟು ಎಂದು ನೋಡುವುದಾದರೆ ನಿಜಕ್ಕೂ ಆಶ್ಚರ್ಯ.