ಆಲಮಟ್ಟಿ: ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಆಲಮಟ್ಟಿ ಆಣೆಕಟ್ಟುಯಿಂದ 1.25 ಲಕ್ಷ ಕ್ಯುಸೆಕ್ ನೀರು ಹೊರ ಗರಿವಿನ ಮೂಲಕ ಬುಧವಾರ ಮಧ್ಯಾಹ್ನದಿಂದ ಹರಿಸಲಾಗುತ್ತಿದೆ. ಜಲಾಶಯದ ಎಲ್ಲ ಗೇಟಗಳನ್ನು ತೆರೆದು ಜಲಾಶಯದ ಕೆಳಭಾಗದಲ್ಲಿರುವ ಕೃಷ್ಣಾ ನದಿಯ ತಳಪಾತ್ರಕ್ಕೆ ನೀರು ಬಿಡಲಾಗಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೃಷ್ಣಾ ನದಿಯ ಹರಿವನ್ನು ಗಮನದಲ್ಲಿಟ್ಟುಕೊಂಡು ಬುಧವಾರ ಮಧ್ಯಾಹ್ನ 3 ಗಂಟೆಯಿಂದ ಆಲಮಟ್ಟಿ ಜಲಾಶಯದ ಹೊರಹರಿವನ್ನು ಹೆಚ್ಚಿಸಲಾಗಿದೆ.
ಮಂಗಳವಾರದಿಂದ 1 ಲಕ್ಷ ಕ್ಯುಸೆಕ್ ಇದ್ದ ಹೊರಹರಿವು ಬುಧವಾರ 1.25 ಲಕ್ಷ ಕ್ಯುಸೆಕ್ ಗೆ ಹೆಚ್ಚಿಸಲಾಗಿದೆ.
ಬುಧವಾರ ಸಂಜೆ ಜಲಾಶಯಕ್ಕೆ 1.10 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ. ನಾಳೆಯೊಳಗೆ ಅದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮುಖ್ಯ ಎಂಜಿನಿಯರ್ ಎಚ್. ಸುರೇಶ ತಿಳಿಸಿದರು. ಪ್ರವಾಹ ಪರಸ್ಥಿತಿ ನಿಯಂತ್ರಣಕ್ಕಾಗಿ ಸುರಕ್ಷಿತ ಅಂತರ ಇಟ್ಟುಕೊಂಡು ಹಂತ ಹಂತವಾಗಿ ಹೊರಹರಿವು ಹೆಚ್ಚಿಸಲಾಗುತ್ತಿದೆ. ಸದ್ಯ ಒಳಹರಿವಿಗಿಂತ ಹೊರಹರಿವು ಹೆಚ್ಚಾದರೂ, ಒಳಹರಿವು ಇನ್ನಷ್ಟು ಹೆಚ್ಚಾಗಲಿದೆ ಎಂದರು. ಜಲಾಶಯಕ್ಕೆ ಬುಧವಾರ 9 ಟಿಎಂಸಿ ಅಡಿಯಷ್ಟು ನೀರು ಹರಿದು ಬಂದಿದೆ. ಸದ್ಯ 519.6 ಮೀ ಎತ್ತರದ ಜಲಾಶಯದಲ್ಲಿ 517.33 ಮೀ.ವರೆಗೆ ನೀರು ಸಂಗ್ರಹವಾಗಿದೆ. ಜಲಾಶಯದಲ್ಲಿ 88.63 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಕೊಯ್ನಾ 12.3 ಸೆಂ.ಮೀ, ನವಜಾ 14.2 ಸೆಂ.ಮೀ, ಮಹಾಬಳೇಶ್ವರ 13.6 ಸೆಂ.ಮೀ, ರಾಧಾನಗರಿ 12.6 ಸೆಂ.ಮೀ, ದೂಧಗಂಗಾ 9.6 ಸೆಂ.ಮೀ ಮಳೆಯಾಗಿದೆ.
ರಾಜಾಪುರ ಬ್ಯಾರೇಜ್ ಬಳಿ ಕೃಷ್ಣೆಯ ಹರಿವು 88500 ಕ್ಯುಸೆಕ್ ಹಾಗೂ ದೂಧಗಂಗಾ ನದಿಯಿಂದ 23,760 ಕ್ಯುಸೆಕ್ ಸೇರಿ 1,12,260 ಕ್ಯುಸೆಕ್ ನದಿ ಹರಿವು ಬಂದು ಕಲ್ಲೋಲ ಬ್ಯಾರೇಜ್ ಬಳಿ ಕರ್ನಾಟಕದ ಕೃಷ್ಣಾ ನದಿಯನ್ನು ಸೇರುತ್ತಿದೆ.

Leave a Reply

Your email address will not be published. Required fields are marked *

You May Also Like

ಕುಡಿಯುವ ನೀರಿಗಾಗಿ ಆಹೋರಾತ್ರಿ ಧರಣಿ : ಕೆರೆಗಳನ್ನು ತುಂಬಿಸಿ ಪುಣ್ಯಕಟ್ಟಿಕೊಳ್ಳಿ- ಸಂಗನಬಸವ ಶ್ರೀ

ಉತ್ತರಪ್ರಭ ಆಲಮಟ್ಟಿ: ರಾಷ್ಟ್ರದ ಅಭಿವೃದ್ಧಿಗಾಗಿ ತ್ಯಾಗ ಮಾಡಿದ ಅಖಂಡ ವಿಜಯಪುರ ಜಿಲ್ಲೆಯ ರೈತರಿಗೆ, ಜನ-ಜಾನುವಾರುಗಳ ಕುಡಿಯುವ…

ಗ್ರಾಮೀಣಾಭಿವೃದ್ಧಿ ವಿವಿಯಿಂದ ಸಸಿ ನೆಟ್ಟು, ಸೆಲ್ಫಿ ಹಂಚಿಕೊಳ್ಳುವ ನನ್ನ ಗಿಡ ನನ್ನ ಉಸಿರು ಅಭಿಯಾನ

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಹಾಗೂ ಜಿಲ್ಲಾ ಅರಣ್ಯ ಇಲಾಖೆ ಇವರ ಸಹಯೋಗದೊಂದಿಗೆ ಜೂ.5ರಂದು ವಿಶಿಷ್ಟ ರೀತಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ವಾರದಲ್ಲಿ ಸಮಸ್ಯೆ ಬಗೆಹರಿಸಲು ಕರವೆ ಆಗ್ರಹ

ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾ ಘಟಕದ ವತಿಯಿಂದ ಶನಿವಾರ ಹೆಬ್ಬಾಳ ಗ್ರಾಪಂ ಎದುರು ಪ್ರತಿಭಟನೆ ನಡೆಸಲಾಯಿತು.

ಗದಗನಲ್ಲಿಂದು 18 ಕೊರೊನಾ ಪಾಸಿಟಿವ್: ಸೋಂಕಿತರ ಸಂಖ್ಯೆ 78 ಕ್ಕೆ ಏರಿಕೆ

ಗದಗ: ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 78…