ಆಲಮಟ್ಟಿ: ಕೃಷ್ಣಾ ನದಿ ತೀರದ ಸಂಭವನೀಯ ಪ್ರವಾಹಕ್ಕೊಳಗಾಗುವ ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.ಆ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳೆಲ್ಲ ಸನ್ನದ್ಧರಾಗಿ ಕೆಲಸ ನಿರ್ವಹಿಸಬೇಕು ಎಂಬ ಸೂಚನೆ ನೀಡಲಾಗಿದೆ. ಆಲಮಟ್ಟಿ ಜಲಾಶಯ ಹಾಗೂ ನಾರಾಯಣಪುರ ಜಲಾಶಯದಿಂದ ನೀರು ಬಿಡುಗಡೆಯಿಂದ ಉಂಟಾಗುವ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೆಬಿಜೆಎನ್ ಎಲ್ ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಕುಮಾರ ಸೂಚಿಸಿದರು. ಆಲಮಟ್ಟಿಯ ಎಂ.ಡಿ. ಕಚೇರಿಯ ಸಭಾಂಗಣದಲ್ಲಿ ಬುಧವಾರ, ಕೆಬಿಜೆಎನ್ ಎಲ್ ವಿವಿಧ ವಲಯಗಳ ಮುಖ್ಯ ಎಂಜಿನಿಯರ್ ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಸೂಚನೆ ನೀಡಿದರು.
ನೀರು ಬಿಡುವ ಮಾಹಿತಿಯನ್ನು ಸ್ಥಳೀಯ ಆಡಳಿತ, ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಮಾಹಿತಿ ಹಂಚಿಕೊಂಡು ಪ್ರವಾಹ ನಿಯಂತ್ರಣಕ್ಕೆ ಅವರೊಂದಿಗೆ ಕೈಜೋಡಿಸಬೇಕು, ಮಹಾರಾಷ್ಟ್ರ ರಾಜ್ಯದ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಪ್ರವಾಹ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು.ಯಾವುದೇ ಕಾರಣಕ್ಕೂ ಪ್ರವಾಹದ ಸಮಯದಲ್ಲಿ ಅಣೆಕಟ್ಟು ವಿಭಾಗದ ಅಧಿಕಾರಿಗಳಿಗೆ, ನೌಕರರ ವರ್ಗದವರಿಗೆ ರಜೆ ನೀಡಬಾರದು. ರಜಾ ದಿನದಂದೂ ಕಾರ್ಯನಿರ್ವಹಿಸಬೇಕು, ಕಾರ್ಯಕ್ಷೇತ್ರ ಬಿಟ್ಟು ತೆರಳಬಾರದು ಎಂದು ಎಂಡಿ ಸೂಚಿಸಿದರು.
ಆಲಮಟ್ಟಿ ಅಣೆಕಟ್ಟು ವಲಯದ ಮುಖ್ಯ ಎಂಜಿನಿಯರ್ ಎಚ್. ಸುರೇಶ, ನಾರಾಯಣಪುರ ವಲಯದ ಮುಖ್ಯ ಎಂಜಿನಿಯರ್ ಅಶೋಕ ವಾಸನದ, ಬಾಗಲಕೋಟೆ ಬಿಟಿಡಿಎ ಮುಖ್ಯ ಎಂಜಿನಿಯರ್ ಎಂ. ಸ್ವಾಮಿ, ರಾಂಪೂರ ವಲಯದ ಮುಖ್ಯ ಎಂಜಿನಿಯರ್ ಎಸ್.ಡಿ. ನಾಯ್ಕರ, ಸೂಪರಿಂಟೆಂಡಿಂಗ್ ಎಂಜಿನಿಯರ್ ಡಿ. ಬಸವರಾಜು, ರಾಠೋಡ ಇನ್ನೀತರ ಅಧಿಕಾರಿಗಳು ಇದ್ದರು.
ಆಲಮಟ್ಟಿಯ ಎಂಡಿ ಕಚೇರಿಯಲ್ಲಿ ಆಲಮಟ್ಟಿ, ನಾರಾಯಣಪುರ ಜಲಾಶಯಗಳಿಂದ ಉಂಟಾಗುವ ಪ್ರವಾಹ ಪರಿಸ್ಥಿತಿ ನಿಯಂತ್ರಣ ಕುರಿತು ಕೆಬಿಜೆಎನ್ ಎಲ್ ಎಂ.ಡಿ. ಬಿ. ಶಿವಕುಮಾರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ಜರುಗಿತು

Leave a Reply

Your email address will not be published. Required fields are marked *

You May Also Like

ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡಿ

ಮೈಸೂರು: ರಾಜ್ಯದ ಎಸ್.ಟಿ ಕಾರ್ಯಕಾರಿ ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಎಸ್.ಟಿ ಸಮುದಾಯ ಒತ್ತಾಯಿಸಿದರು.

ಇಲಿಗಳೂ ಸಾರಾಯಿ ಕುಡಿಯುತ್ತವೆ.

ಆ ಟ್ಯೂಬ್ ನಲ್ಲಿ ಇದ್ದ ಸಾರಾಯಿಯನ್ನು ಮುದ್ದೆ ಮಾಲು ಕೊಠಡಿಯಲ್ಲಿ ಇದ್ದ ಇಲಿಗಳು ಕುಡಿದಿವೆ ಅಂತ ಹೇಳಿದ. ಆ ಕೊಠಡಿಯಲ್ಲಿ ಇಲಿ ಇದ್ದದ್ದು ನಿಜ ಆದರೆ ಇಲಿ ಸಾರಾಯಿ ಕುಡಿದಿದ್ದು ಯಾರು ಗಮನಿಸಿಲ್ಲ. ಆದರೂ ಇಲಿ ಸಾರಾಯಿ ಕುಡಿದಿದ್ದು, ನಿಜ..!

ಗದಗನಲ್ಲಿ ಏಳು ಲಕ್ಷದೊಂದಿಗೆ ಕೆಲಸಗಾರ ನಾಪತ್ತೆ ; ಮಾಲಿಕನಿಂದ ದೂರು

ಗದಗ: ಬ್ಯಾಂಕಿಗೆ ಹಣ ಕಟ್ಟಿಬಾ ಅಂತಾ ಕಳಿಸಿದ ಮಾಲಿಕನ ಲಕ್ಷಾಂತರ ರೂಪಾಯಿಯೊಂದಿಗೆ ಕೆಲಸಗಾರ ನಾಪತ್ತೆಯಾಗಿದ್ದಾನೆ ಎನ್ನುವ…