ಉತ್ತರಪ್ರಭ ಸುದ್ದಿ
ಗದಗ:
2022-23 ನೇ ಸಾಲಿನಲ್ಲಿ ಪ್ರಪ್ರಥಮವಾಗಿ ಪ್ರತಿ ಗ್ರಾಮ ಪಂಚಾಯತಿಗೆ ಒಂದರ0ತೆ ಸ್ವಾಮಿ ವಿವೇಕಾನಂದ ಯುವ ಸ್ವ-ಸಹಾಯ ಗುಂಪುಗಳನ್ನು ರಚಿಸಿ, ಸ್ವ-ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಯುವಕರನ್ನು ಪ್ರೋತ್ಸಾಹಿಸಲಾಗುವುದು. ಸ್ವಾಮಿ ವಿವೇಕಾನಂದ ಯುವಕರ ಸ್ವ-ಸಹಾಯ ಗುಂಪುಗಳನ್ನು ರಚಿಸಿ ಸ್ವ-ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಯುವಕರನ್ನು ಪ್ರೋತ್ಸಾಹಿಸುವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅನುಷ್ಟಾನಗೊಳಿಸಲು ನಿರ್ಧರಿಸಿದೆ. ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಸಂಘಗಳನ್ನು ಜಿಲ್ಲೆಯಲ್ಲಿರುವ 122 ಗ್ರಾಮ ಪಂಚಾಯತಿಗೆ ಒಂದರAತೆ ಯುವ ಸ್ವಸಹಾಯ ಗುಂಪನ್ನು ರಚಿಸಲು 18-29 ವರ್ಷದೊಳಗಿನ ಯುವಕರು ಸ-ಸಹಾಯ ಗುಂಪನ್ನು ರಚಿಸಲು ಅರ್ಹರಾಗಿರುತ್ತಾರೆ.
ಸರ್ಕಾರದಿಂದ ಯುವ ಜನರಿಗಾಗಿ ಇರುವ ಯೋಜನೆಗಳನ್ನು ಉಪಯೋಗಿಸಿಕೊಂಡು ಮತ್ತು ಸ್ಥಳೀಯವಾಗಿ ಇರುವ ಸಂಪನ್ಮೂಲಗಳನ್ನು ಬಳಸಿಕೊಂಡು ಒಂದು ಸಶಕ್ತ, ಸುಸ್ಥಿತ ಮತ್ತು ಸ್ವ-ಸಹಾಯ ಸಂಘವನ್ನು ಸ್ಥಾಪಿಸುವುದು, ಈ ಯೋಜನೆಯ ಮುಖ್ಯ ಗುರಿಯಾಗಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಯುವಕರು ಈ ಯೋಜನೆಯ ಸದುಪಯೋಗಪಡೆದುಕೊಳ್ಳಲು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಗದಗ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಯುವ ಸಮಾಲೋಚಕರು, ಯುವ ಸ್ಪಂದನ, ಗದಗ ದೂರವಾಣಿ ಸಂಖ್ಯೆ 8277234335, 08372-220375 ಹಾಗೂ ಸಹಾಯಕ ನರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08372-238345 ಸಂರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 337 ಕೊರೊನಾ ಪಾಸಿಟಿವ್, ಮೃತ ಪಟ್ಟವರ ಸಂಖ್ಯೆ 10 : ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 337 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 8281…

24 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ಯಾವ ಶಾಸಕರಿಗೆ ಯಾವ ನಿಗಮ?

ರಾಜ್ಯ ಬಿಜೆಪಿ ಸರ್ಕಾರಕ್ಕೆ ಈಗ ಒಂದು ವರ್ಷ. ವರ್ಷ ತುಂಬಿದ ಈ ಸಂದರ್ಭದಲ್ಲಿ ಸರ್ಕಾರ ವಿವಿಧ 24 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಿ ಆದೇಶಿಸಿದೆ.

ಗದಗ ಜಿಲ್ಲೆಯಲ್ಲಿ ಮತ್ತೆ 10 ಕಂಟೇನ್ ಮೆಂಟ್ ಪ್ರದೇಶಗಳ ಘೋಷಣೆ

ಗದಗ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜುಲೈ 10ರಂದು 10 ಪ್ರತಿಬಂಧಿತ ಪ್ರದೇಶಗಳನ್ನು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಘೋಷಿಸಿದ್ದಾರೆ.

ನೂತನ 52 ತಾಲೂಕುಗಳಲ್ಲಿ ಬಿಇಒ ಕಚೇರಿ ಮರೀಚಿಕೆ ? ಆರಂಭದ ಸುಳಿವೇ ಇಲ್ಲ ! ಪ್ರಾರಂಭ ಎಂದು ? ಬಿಇಒ ಕಚೇರಿ, ಸಿಬ್ಬಂದಿ ಮಂಜೂರಾತಿಗೆ ಆಗ್ರಹ

ಆಲಮಟ್ಟಿ : ಹೊಸ ಭರವಸೆಯ ಆಶಾ ಕಿರಣದೊಂದಿಗೆ ನೂತನವಾಗಿ ತೆಲೆಯತ್ತಿದ್ದ ರಾಜ್ಯದ 52 ನವ ತಾಲೂಕುಗಳು…