ಉತ್ತರಪ್ರಭ ಸುದ್ದಿ

ಗದಗ: ಕರ್ನಾಟಕ ಸ್ಫೋರ್ಟ್ಸ್ ಆ್ಯಂಡ್ ಎಜ್ಯುಕೇಶನ್ ಅಕ್ಯಾಡೆಮಿ ಗದಗ ಇವರ ವತಿಯಿಂದ ಕೆ. ಎಚ್. ಪಾಟೀಲ ಫುಟಬಾಲ್ ಲೀಗ್-2022 ಆಯೋಜಿಸಲಾಗಿದೆ. ಟೋರ್ನಿಯು ಗದಗ ಶಹರದ ಮುಳಗುಂದ ರಸ್ತೆಯ ಕನಕ ಭವನ ಹತ್ತಿರವಿರು ಫುಟ್‌ಬಾಲ್ ಮೈದಾನದಲ್ಲಿ ಆಯೋಜಿಸಲಾಗಿದ್ದು ದಿನಾಂಕ 23-7-2022 ಶನಿವಾರ ಸಾಯಂಕಾಲ 5-30 ಘಂಟೆಗೆ ಉದ್ಘಾಟನೆಗೊಳ್ಳುವುದು.

ಮಾಜಿ ಅಂತರಾಷ್ಟ್ರೀಯ ಫುಟ್‌ಬಾಲ್ ಆಟಗಾರರು ಹಾಗೂ ಕೆ.ಎಸ್.ಎಫ್.ಎ. ಬೆಂಗಳೂರು ಇವರ ಉಪಕಾರ್ಯದರ್ಶಿಗಳಾದ ಶ್ರೀ ಅಸ್ಲಂಖಾನ ಇವರು ಟೋರ್ನಿಯನ್ನು ಉದ್ಘಾಟಿಸುರುವರು. ಶಾಸಕ ಎಚ್. ಕೆ. ಪಾಟೀಲ ಅಧ್ಯಕ್ಷತೆಯನ್ನು ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ. ಎಸ್. ಪಾಟೀಲ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿ ಗದಗ, ಮಾಜಿ ಶಾಸಕ ಡಿ. ಆರ್. ಪಾಟೀಲ, ಮಾಜಿ ಶಾಸಕ ಜಿ. ಎಸ್. ಗಡ್ಡದೇವರಮಠ (ಶಿರಹಟ್ಟಿ), ಮಾಜಿ ಶಾಸಕ ಎಸ್. ಎಸ್. ಪಾಟೀಲ (ಮುಂಡರಗಿ), ಮಾಜಿ ಸಚಿವ ಬಿ. ಆರ್. ಯಾವಗಲ್ (ನರಗುಂದ), ಮಾಜಿ ಶಾಸಕ ಎಸ್. ಎನ್. ಪಾಟೀಲ (ಶಿರಹಟ್ಟಿ), ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ (ಶಿರಹಟ್ಟಿ), ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ (ಗದಗ) ಇವರುಗಳು ಆಗಮಿಸಲಿದ್ದು.

ಅತಿಥಿಗಳಾಗಿ ಎಲ್. ಡಿ. ಚಂದಾವರಿ ವಿರೋಧಪಕ್ಷದ ನಾಯಕರು ಗದಗ-ಬೆಟಗೇರಿ ನಗರಸಭೆ ಗದಗ, ಬರಕತಅಲಿ ಮುಲ್ಲಾ ವಿರೋಧಪಕ್ಷದ ಉಪನಾಯಕರು, ಗದಗ-ಬೆಟಗೇರಿ ನಗರಸಭೆ ಗದಗ, ಗುರಣ್ಣ ಬಳಗಾನೂರ ಅಧ್ಯಕ್ಷರು ಗದಗ-ಬೆಟಗೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಪ್ರಭು ಬುರಬುರೆ ಮಾಜಿ ಅಧ್ಯಕ್ಷರು ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರ ಇವರುಗಳು ಉಪಸ್ಥಿತರಿರುವರು.

Leave a Reply

Your email address will not be published. Required fields are marked *

You May Also Like

ಕೆಜಿ “ಬಂಡಿ”ಗೆ ನಾನು ತಮಾಷೆ ಮಾಡಿದ್ದೆ: ಬಿ ಎಸ್ ವೈ ಸ್ಪಷ್ಟನೆ

ಉತ್ತರಪ್ರಭ ಸುದ್ದಿನಾನು ದಿನಾಂಕ 08-11-2022ರಂದು ಶಿರಹಟ್ಟಿಯಲ್ಲಿ ಜನಸಂಪರ್ಕ ಯಾತ್ರೆಯನ್ನು ಮುಗಿಸಿಕೊಂಡು ಬರುತ್ತಿರುವ ಸಂಧರ್ಭದಲ್ಲಿ ರೋಣ ಕ್ಷೇತ್ರದ…

ಸಂಗೀತಾಳಿಗೆ ಬೇಕಿದೆ ಸಹಾಯ: ಪಿಯಸಿಯಲ್ಲಿ ಶೇ.90 ಅಂಕ; ಬೆಂಬಿಡದ ಬಡತನದಿಂದ ಶಿಕ್ಷಣ ನಿಲ್ಲಿಸಲು ಮುಂದಾದ ವಿದ್ಯಾರ್ಥಿನಿ..!

ಪಿಯುಸಿ ಪರೀಕ್ಷೆಯಲ್ಲಿ ಶೇ.90 ಅಂಕ ಪಡೆದ ಪ್ರತಿಭಾವಂತೆಯ ಕಥೆ ಇದು. ಪಿಯುಸಿಯಲ್ಲಿನ ಹೆಚ್ಚು ಅಂಕದ ಉತ್ಸಾಹದಲ್ಲಿದ್ದ ವಿದ್ಯಾರ್ಥಿನಿಗೆ ಕುಟುಂಬದ ಆರ್ಥಿಕ ಸ್ಥಿತಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸುವ ಹಂತಕ್ಕೆ ತಂದಿದೆ. ಹೀಗಾಗಿ ಬದುಕಿನಲ್ಲಿ ಓದಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹತ್ತು ಹಲವು ಕನಸು ಕಟ್ಟಿಕೊಂಡಿದ್ದ ವಿದ್ಯಾರ್ಥಿನಿ ಸಂಗೀತಾಳಿಗೆ ಓದು ಮುಂದುವರೆಸುವುದು ಕಷ್ಟವಾಗಿದೆ.

ಹಾವೇರಿಯಲ್ಲಿ ಮತ್ತೆ ನಾಲ್ಕು ಜನರಿಗೆ ಕೊರೋನಾ ಸೋಂಕು.!

ಹಾವೇರಿ: ಜಿಲ್ಲೆಯಲ್ಲಿ ಹೊಸದಾಗಿ ನಾಲ್ಕು ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ…

ಉತ್ತರ ಕರ್ನಾಟಕ ಪ್ರವಾಹದ ಕುರಿತು ಪ್ರಧಾನಿಯೊಂದಿಗೆ ಚರ್ಚೆ ಮಾಡಿದ್ದೇನೆ – ಸಿಎಂ!

ಶಿವಮೊಗ್ಗ : ಉತ್ತರ ಕರ್ನಾಟಕದಲ್ಲಿ ಸೃಷ್ಟಿಯಾಗಿರುವ ಪ್ರವಾಹದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ಮಾಡಿದ್ದೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.