ಗದಗ: ಸ್ಥಳೀಯ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾ ಪೀಠದ ಸಿ.ಬಿ.ಎಸ್.ಇ. ಶಾಲೆಗೆ ೨೦೨೧-೨೨ನೇ ಸಾಲಿನ ಸಿ.ಬಿ.ಎಸ್.ಇ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಲಭಿಸಿದೆ. ಫಲಿತಾಂಶ ಪ್ರಕಟಗೊಂಡಿದ್ದು,ಪರೀಕ್ಷೆಗೆ ಹಾಜರಾದ ಒಟ್ಟು ೬೯ ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿ ಶಾಲೆಯ,ಸಂಸ್ಥೆಯ ಕೀತಿ೯ ಹೆಚ್ಚಿಸಿದ್ದಾರೆ. ಈ ವರ್ಷವೂ ಶೇಕಡ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದುಕೊಂಡಿದ್ದು ವಿಶೇಷವಾಗಿದೆ. ವಿದ್ಯಾರ್ಥಿಗಳಾದ ಕುಮಾರ ಚಿನ್ಮಯಸ್ವಾಮಿ ಆರ್ ಹಿರೇಮಠ್ (ಶೇ ೯೧.೪)ಪ್ರಥಮ ಸ್ಥಾನ, ಕುಮಾರ ಸುಜಲ್ ಆರ್ ಖಟವಟೆ (ಶೇ ೯೦.೦೦) ದ್ವಿತೀಯ ಸ್ಥಾನ, ಕುಮಾರಿ ಸಹನಾ ಡಿ ಯಾದವ (ಶೇ ೮೭.೦೨) ಕುಮಾರಿ ಸುಪ್ರಿತಾ ಆರ್ ಪಾನಗಂಟಿ(ಶೇ ೮೭.೦೨) ತೃತೀಯ ಸ್ಥಾನ ಗಳಿಸಿದ್ದಾರೆ.ಜೊತೆಗೆ ದಿಯಾ ಬಾಕಳೆ(ಶೇ ೮೬.೮), ಶಾಹಿನ್ ನದಾಫ್(ಶೇ ೮೬.೪), ರಾಹುಲ್ ಹೊಸಮನಿ(ಶೇ ೮೫.೮), ನಿಖೀಲ್ ಮಾನ್ವಿ(೮೫.೪), ಅಮೋಘ ವಾಲಿ (ಶೇ ೮೪.೬), ಪಲ್ಲವಿ ಧರ್ಮಾಯತ್ (ಶೇ ೮೪.೬) , ಪ್ರೀತಿ ಗೊರೋಜಿ (ಶೇ ೮೪.೪) ಈ ವಿದ್ಯಾರ್ಥಿಗಳು ಪ್ರಥಮ ಸ್ಥಾನದ ಜೊತೆಗೆ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಈ ವಾರ್ಷಿಕ ಪರೀಕ್ಷೆಗೆ ಹಾಜರಾದ ಒಟ್ಟು ೬೯ ವಿದ್ಯಾರ್ಥಿಗಳಲ್ಲಿ ೨೬ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, ೪೨ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ , ೦೧ ವಿದ್ಯಾರ್ಥಿ ದ್ವಿತೀಯ ಶ್ರೇಣಿಯೊಂದಿಗೆ ಉತ್ತೀರ್ಣರಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.ಪರೀಕ್ಷೆಯಲ್ಲಿ ಸಾಧನೆಗೈದ ಎಲ್ಲ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಪೂಜ್ಯ ಶ್ರೀ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಎಸ್ ಎಸ್ ಪಟ್ಟಣಶೆಟ್ಟಿ, ಸ್ಥಳೀಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಾಲೆಯ ಶೈಕ್ಷಣಿಕ ಸಲಹಾ ಆಡಳಿತಾಧಿಕಾರಿಗಳಾದ ಶ್ರೀ ಮಂಜುನಾಥ್ ಕಂಡಕಿ, ಪ್ರಾಚಾರ್ಯರಾದ ಶ್ರೀಮತಿ ಜ್ಯೋತಿ ನಾಯಕ್, ಉಪ ಪ್ರಾಚಾರ್ಯರಾದ ಶ್ರೀಮತಿ ಶುಭಾಂಗಿನಿ ಹಿರೇಮಠ, ಶಾಲೆಯ ಸರ್ವ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಆನ್ ಲೈನ್ ಶಿಕ್ಷಣದ ಬಗ್ಗೆ ನಾಳೆ ಮಹತ್ವದ ಸಭೆ: ಸಚಿವ ಸುರೇಶ್ ಕುಮಾರ್

ಎಲ್ ಕೆಜಿ, ಯುಕೆಜಿ ಆನ್ ಲೈನ್ ಶಿಕ್ಷಣ ಒಳಿತಲ್ಲ. ಪ್ರಾಥಮಿಕ ಮಕ್ಕಳಿಗೂ ಆನ್ ಲೈನ್ ಶಿಕ್ಷಣ ಒಳಿತಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆ

ಇಂದು ಮತ್ತೆ ರಾಜ್ಯದಲ್ಲಿ ಐದು ಹೊಸ ಕೊರೋನಾ ಪಾಸಿಟಿವ್ ಕೇಸುಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ 606ಕ್ಕೆ ಏರಿಕೆ ಆಗಿದೆ.

ಗದಗನಲ್ಲಿ ಮಾಶಾಸನ ಪಡೆಯಲು ಎರಡು ಕಿಲೋಮಿಟರ್ ನಡೆದು ಬಂದ ಅಜ್ಜಿ

ಗದಗ: ಕೊರೊನಾದ ಸಂಕಷ್ಟದ ದಿನಗಳು ಕೇವಲ ಬಡ ಜನರಿಗಷ್ಟೆ ಅಲ್ಲದೇ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಕಾರಣದಿಂದ ತೀವ್ರ ಸಂಕಷ್ಟಕ್ಕೀಡು ಮಾಡಿದೆ. ಅದರಲ್ಲೂ ತುತ್ತಿನ ಚೀಲ ತುಂಬಿಕೊಳ್ಳಲು ದಿನದ ದುಡಿಮೆಯನ್ನೇ ನಂಬಿಕೊಂಡಿರುವವರ ಪಾಡಂತೂ ಹೇಳತೀರದು. ಇದೆಲ್ಲದಕ್ಕಿಂತ ಮುಖ್ಯವಾಗಿ ಅದೆಷ್ಟೋ ವೃದ್ಧರು, ವಿಕಲಚೇತನರು, ವಿದವೆಯರು ಮಾಶಾಸನವನ್ನೇ ನಂಬಿ ಬದುಕು ಸಾಗಿಸುತ್ತಿದ್ದಾರೆ. ಅಂತಹವರ ಪಾಡಂತೂ ಹೇಳತೀರದು

ಸರ್ಕಾರ ಕೊಟ್ರೆ ಮಾತ್ರ ಬಿಎಂಟಿಸಿ ನೌಕರರಿಗೆ ಸಂಬಳ..?

ಲಾಕ್ ಡೌನ್ ಹಿನ್ನೆಲೆ ಮಾ.23 ರಿಂದ ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ಬಂದ್ ಆಗಿತ್ತು. ಈಗಾಗಲೇ ಮಾರ್ಚ್ ಹಾಗೂ ಏಪ್ರೀಲ್ ತಿಂಗಳ ಸಂಬಳ ನೀಡಲಾಗಿದೆ. ಆದರೆ ಮೇ ತಿಂಗಳ ಸಂಬಳವೇ ಸಿಬ್ಬಂಧಿಗಳಲ್ಲಿ ಆತಂಕ ಮೂಡಿಸಿದೆ.