ಆಲಮಟ್ಟಿ:
ಬಿ.ಎಸ್.ಯಡಿಯೂರಪ್ಪ, ರಾಜಕಾರಣದಿಂದ ನಿವೃತ್ತಿಯಾಗಲ್ಲ, ಅವರು ಚುನಾವಣಾ ರಾಜಕೀಯದಿಂದ ಮಾತ್ರ ನಿವೃತ್ತರಾಗುತ್ತಾರೆ, ಪಕ್ಷಕ್ಕೆ ಕೋಚ್ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಾರೆ ಎಂದು ಸುರಪುರ ಶಾಸಕ ನರಸಿಂಹ (ರಾಜುಗೌಡ) ನಾಯಕ ಹೇಳಿದರು. ಆಲಮಟ್ಟಿಯಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. 75 ವರ್ಷ ಪೂರೈಸಿದವರಿಗೆ ರಾಜಕಾರಣದಿಂದ ನಿವೃತ್ತಿ, ಕುಟುಂಬ ರಾಜಕಾರಣ ಎಂಬ ಬಿಜೆಪಿ ತತ್ವ ಎಲ್ಲರಿಗೂ ಅನ್ವಯಿಸುತ್ತದೆ, ಆದರೆ ಯಡಿಯೂರಪ್ಪ ಅವರ ಕುಟುಂಬಕ್ಕೆ ಇದು ಅನ್ವಯಿಸುವುದಿಲ್ಲ, ಬಿ.ಎಸ್. ವಿಜಯೇಂದ್ರ ಯುವಕರ ಐಕಾನ್ ಆಗಿದ್ದಾರೆ ಎಂದರು. ಕಾoಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿಗಾಗಿ ನಡೆಯುತ್ತಿರುವ ಪೈಪೋಟಿ, ದಿನನಿತ್ಯದ ಗೊಂದಲ ಹೇಳಿಕೆಗಳಿಂದ ಕಾಮಿಡಿ ಶೋ ಎಂಬoತೆ ಬಿಂಬಿತವಾಗುತ್ತಿದೆ ಎಂದು ಅವರು ವ್ಯಂಗ್ಯವಾಡಿದರು.


ಭದ್ರತೆ:
ಆಲಮಟ್ಟಿಯ ಎಂಡಿ ಕಚೇರಿಯಲ್ಲಿ ಮಂಗಳವಾರ ನಡೆದ ನೀರಾವರಿ ಸಲಹಾ ಸಮಿತಿ ಸಭೆಗೆ ಭಾರಿ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿತ್ತು. ಗೇಟ್ ಗೆ ಸ್ವತಃ ಡಿ.ವೈ.ಎಸ್. ಪಿ. ಅರುಣಕುಮಾರ ಕೋಳುರ ಹಾಗೂ ಸಿಪಿಐ ಸೋಮಶೇಖರ ಜುಟ್ಟಲ ನಿಂತೂ ಯಾರನ್ನೂ ಒಳಗಡೆ ಬಿಡಲಿಲ್ಲ. ಸಭೆಗೆ ಪತ್ರಕರ್ತರನ್ನು ಸೇರಿ ಸದಸ್ಯರಲ್ಲದ ಯಾರನ್ನೂ ಬಿಡಲಿಲ್ಲ. ಒಬ್ಬ ಡಿ.ವೈ.ಎಸ್.ಪಿ, ಇಬ್ಬರೂ ಸಿಪಿಐ, 5 ಜನ ಪಿಎಸ್ ಐ, 10 ಜನ ಎ.ಎಸ್.ಐ, 16 ಜನ ಹೆಡ್ ಕಾನ್ಸ್ ಟೇಬಲ್, 44 ಕಾನ್ಸ್ ಟೇಬಲ್, 8 ಮಹಿಳಾ ಕಾನ್ಸ್ ಟೇಬಲ್, 2 ಡಿ.ಆರ್. ವಾಹನ ಸೇರಿ ಸುಮಾರು 100 ಜನ ಪೊಲೀಸ್ ರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.

Leave a Reply

Your email address will not be published. Required fields are marked *

You May Also Like

ಮಕ್ಕಳಲ್ಲಿ ಸೋಂಕಿನ ಪ್ರಮಾಣ ಆಧರಿಸಿ ಶಾಲೆಗಳಿಗೆ ರಜೆ ಘೋಷಿಸಲು ತೀರ್ಮಾನ

ಗದಗ:ಜಿಲ್ಲಾದ್ಯಂತ ಕೋವಿಡ್ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಾಗಿ ಕ್ರಮ ಜರುಗಿಸಲಾಗುತ್ತಿದೆ. ಶಾಲಾ ಮಕ್ಕಳಿಗೆ ಸೋಂಕು ತಗಲುವಿಕೆಯ ಪ್ರಮಾಣ…

ಚರಂಡಿ ಹೂಳು ಎತ್ತಿಸಿ ಸ್ವಚ್ಛತೆ : ಗ್ರಾ.ಪಂ ಸದಸ್ಯನ ಕಾರ್ಯಕ್ಕೆ ಪ್ರಶಂಸೆ

ಕಲ್ಲೂರ ಗ್ರಾಮದ 2ನೇ ವಾರ್ಡಿನ ಯಳವತ್ತಿ ರಸ್ತೆಯ ಚರಂಡಿಯಲ್ಲಿ ಸುಮಾರು ವರ್ಷಗಳಿಂದ ತುಂಬಿಕೊಂಡಿದ್ದ ಹೂಳು ಎತ್ತಿಸಿ ಸ್ವಚ್ಛತೆ ಕೈಗೊಂಡ ಗ್ರಾಮ ಪಂಚಾಯ್ತಿ ಸದಸ್ಯ ಬಸವರಾಜ ರಾಮರಡ್ಡಿ ಅವರ ಕಾರ್ಯಕ್ಕೆ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ ಬಿಜೆಪಿ!

ಬೆಂಗಳೂರು : ಉಪ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಮಾತಿನ ಸಮರ ಜೋರಾಗಿದೆ.

ಗದಗ ಜಿಲ್ಲೆಯಲ್ಲಿ ಕೊರೊನಾ ಕಾರ್ಮೋಡ: ಇಂದು 31 ಪಾಸಿಟಿವ್!

ಜಿಲ್ಲೆಯಲ್ಲಿಂದು 31 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 616 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 226. 376