ಆಲಮಟ್ಟಿ: ಮುಂಗಾರು ಹಂಗಾಮಿಗಾಗಿ ಕಾಲುವೆಗಳ ಮೂಲಕ ಕೃಷ್ಣೆಯ ಜಲನಿಧಿ ರೈತರ ಭೂವೊಡಲು ಸೇರುವ ಮೂರ್ಹತ ಇದೀಗ ಕೂಡಿಬಂದಿದೆ. ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಲ್ಲಿನ ಪ್ರಸ್ತುತ ಲಭ್ಯವಿರುವ ನೀರಿನ ಲೆಕ್ಕಾಚಾರದ ಬಗ್ಗೆ ಚರ್ಚಿಸಿದ ಬಳಿಕ ಅಂತಿಮವಾಗಿ, ಮುಂಗಾರು ಹಂಗಾಮಿಗೆ ಜುಲೈ 26ರಿಂದಲೇ ಅನ್ವಯವಾಗುವಂತೆ ಮುಂಗಾರು ಹಂಗಾಮಿಗೆ ಜಲಾಶಯಗಳಿಂದ ನೀರು ಪೂರೈಸಲು ಮಂಗಳವಾರ ಇಲ್ಲಿನ ಕೆಬಿಜೆಎನ್‌ಎಲ್ ಕಚೇರಿ ಸಭಾಂಗಣದಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆಯು ತೀರ್ಮಾನ ತೆಗೆದುಕೊಂಡಿತು. ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಆಗಿರುವ ಲೋಕೋಪಯೋಗಿ ಸಚಿವರಾದ ಸಿ.ಸಿ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ, ಅರಣ್ಯ, ಆಹಾರ ಹಾಗೂ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರಾದ ಉಮೇಶ ಕತ್ತಿ ಅವರ ಸಮ್ಮುಖದಲ್ಲಿ ಜುಲೈ 26ರಂದು ನಡೆದ 2022-23ನೇ ಸಾಲಿನ ಮುಂಗಾರು ಹಂಗಾಮಿಗೆ ಕೃಷ್ಣ ಮೇಲ್ದಂಡೆ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನೀರಿನ ಲಭ್ಯತೆಯ ಬಗ್ಗೆ ಚರ್ಚೆ ನಡೆಯಿತು.
ಆಲಮಟ್ಟಿ ಮತ್ತು ನಾರಾಯಣಪುರ ಎರಡೂ ಜಲಾಶಯಗಳಲ್ಲಿ 97.491 ಟಿಎಂಸಿ ಜೀವಜಲ ಲಭ್ಯವಿದೆ. ಮುಂಗಾರು ಹಂಗಾಮಿನ 120 ದಿನಗಳಿಗೆ ಯೋಜನಾ ವರದಿಯಂತೆ 67 ಟಿಎಂಸಿ ನೀರಿನ ಪ್ರಮಾಣದ ಅಗತ್ಯವಿದೆ. ಅಗತ್ಯ ಬಳಕೆಗೆ ಮುಂಗಾರು ಹಂಗಾಮಿಗೆ 13 ಟಿಎಂಸಿ ನೀರು ಬೇಕಾಗುತ್ತದೆ. ಇವೆರಡು ಸೇರಿ ಒಟ್ಟು ಬಳಕೆಗೆ 80 ಟಿಎಂಸಿ ನೀರಿ ಬೇಕಾಗುತ್ತದೆ. ಮುಂಗಾರು ಹಂಗಾಮಿಗೆ ಅಗತ್ಯ ಇರುವ ನೀರಿನ ಪ್ರಮಾಣ ಜಲಾಶಯದಲ್ಲಿ ಸಂಗ್ರಹಣೆಯಾಗಿದೆ. ಮುಂಗಾರು ಹಂಗಾಮಿಗೆ ಅಗತ್ಯ ಇರುವ ನೀರಿನ ಪ್ರಮಾಣವು ಜಲಾಶಯದಲ್ಲಿ ಸಂಗ್ರಹಣೆಯಾಗಿರುವುದರಿAದ ಹಾಗೂ ಮುಂಬರುವ ದಿನಗಳಲ್ಲಿ ಬರುವ ಒಳಹರಿವನ್ನು ಗಮನದಲ್ಲಿರಿಸಿಕೊಂಡು 2022-23 ರ ಮುಂಗಾರು ಹಂಗಾಮಿಗೆ ಅಚ್ಚುಕಟ್ಟು ಪ್ರದೇಶದ ಕಾಲುವೆ ಜಾಲ, ಆಣಿಕಟ್ಟು ಹಾಗೂ ಮುಖ್ಯ ಸ್ಥಾವರಗಳ ಕ್ಲೋಜರ್ ಅವಧಿಯ ಕಾಮಗಾರಿಗಳ ಪ್ರಗತಿಯನ್ನು ಗಮನದಲ್ಲಿರಿಸಿಕೊಂಡು ಮುಂಗಾರು ಹಂಗಾಮಿಗೆ ಜುಲೈ 26 ರಿಂದ ನವ್ಹಂಬರ್ 24 ರವರೆಗೆ ನೀರು ಪೂರೈಸಲಾಗುವುದು ಎಂದು ಸಚಿವ ಸಿ.ಸಿ. ಪಾಟೀಲ ತಿಳಿಸಿದರು.
ಒಳಹರಿವು ಇರುವವರೆಗೆ ನಿರಂತರ ನೀರು, ಒಳಹರಿವು ಸ್ಥಗಿತಗೊಂಡ ನಂತರ 14 ದಿನ ಚಾಲು 8 ದಿನ ಬಂದ್ ಪದ್ಧತಿ ಅನುಸರಿಸಲಾಗುವುದು ಎಂದರು.
ಗುತ್ತಿ ಬಸವಣ್ಣ ಏತ ನೀರಾವರಿಯ 7 ಪಂಪಸೆಟ್ ಗಳು ದುರಸ್ತಿ ಕಾರ್ಯ ನಡೆದಿದ್ದು, ಇದೇ ಆಗಷ್ಟ್ 15 ರಿಂದ ನಾಲ್ಕು ಪಂಪಸೆಟ್ ಮೂಲಕ ನೀರು ಹರಿಸಲಾಗುವುದು ಎಂದರು. ಶಾಸಕರಾದ ಅಮರೇಗೌಡ ಬಯ್ಯಾಪುರ, ರಮೇಶ ಭೂಸನೂರ, ಶಿವನಗೌಡ ನಾಯಕ, ರಾಜುಗೌಡ, ಯಶವಂತರಾಯಗೌಡ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ, ಎ.ಎಸ್. ಪಾಟೀಲ ನಡಹಳ್ಳಿ, ವೀರಣ್ಣ ಚರಂತಿಮಠ, ಡಿ.ಎಸ್. ಹೂಲಗೇರಿ, ಬಸನಗೌಡ ದದ್ದಲ್ ಸೇರಿ ಹಲವರು ಸಭೆಯಲ್ಲಿದ್ದರು. ಕೆಬಿಜೆಎನ್ ಎಲ್ ಎಂಡಿ ಬಿ.ಎಸ್. ಶಿವಕುಮಾರ, ಜಿಲ್ಲಾಧಿಕಾರಿಳಾದ ವಿಜಯಮಹಾಂತೇಶ ದಾನಮ್ಮನವರ, ಪಿ.ಸುನೀಲಕುಮಾರ, ಮುಖ್ಯ ಎಂಜಿನಿಯರ್ ಪ್ರದೀಪಮಿತ್ರ ಮಂಜುನಾಥ, ಎಚ್. ಸುರೇಶ ಸೇರಿದಂತೆ ಹಲವರು ಇದ್ದರು.
ರೈತರಲ್ಲಿ ಮನವಿ:
ಸಮಸ್ತ ಅಚ್ಚುಕಟ್ಟು ರೈತ ಬಾಂಧವರು ಲಘು ನೀರಾವರಿ ಬೆಳೆಗಳನ್ನು ಮಾತ್ರ ಬೆಳೆಯಲು ಹಾಗೂ ನೀರು ಪೋಲಾಗದಂತೆ ಹಿತಮಿತ ಬಳಸಲು ಕೃಷ್ಣ ಭಾಗ್ಯ ಜಲ ನಿಗಮ ಅಧಿಕಾರಿಗಳೊಂದಿಗೆ ಸಹಭಾಗಿತ್ವ ನೀಡಲು ಇದೆ ವೇಳೆ ಸಚಿವರಾದ ಸಿಸಿ ಪಾಟೀಲ ರೈತ ಬಾಂಧವರಲ್ಲಿ ಮನವಿ ಮಾಡಿದರುನವೆಂಬರ್ ಅತ್ಯಂಕ್ಕೆ ಸಭೆ: ನವೆಂಬರ್ 2022ರಲ್ಲಿ ಎರಡೂ ಜಲಾಶಯಗಳ ಸಂಗ್ರಹಣೆಯನ್ನು ಗಮನದಲ್ಲಿರಿಸಿಕೊಂಡು 2022-23ನೇ ಸಾಲಿನ ಹಿಂಗಾರು ಹಂಗಾಮಿನ ನೀರವಾರಿ ಸಲಹಾ ಸಮಿತಿ ಸಭೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

Leave a Reply

Your email address will not be published. Required fields are marked *

You May Also Like

ಗದಗ ನಗರ ಸಭೆ ಮತ ಎಣಿಕೆ ಮುಕ್ತಾಯ :15 ಕಾಂಗ್ರೇಸ್,18 ಬಿಜೆಪಿ 2 ಪಕ್ಷೇತರರು

ಗದಗ: ನಗರ ಸಭೆ ಮತ ಎಣಿಕೆ ಮುಕ್ತಾಯ ವಾಗಿದ್ದು ಒಟ್ಟು 15 ಕಾಂಗ್ರೇಸ್  18  ಬಿಜೆಪಿ …

21 ಸಾವಿರಕ್ಕಿಂತ ಕಡಿಮೆ ವೇತನ ಪಡೆಯುವ ಉದ್ಯೋಗಿಗಳಿಗೆ ಸಿಹಿ ಸುದ್ದಿ

ನೌಕರರ ರಾಜ್ಯ ವಿಮಾ ನಿಗಮದಡಿ ಬರುವ ನೌಕರರು ಇಎಸ್‌ಐಸಿ ಯೋಜನೆಯಡಿ ಎಲ್ಲ ಜಿಲ್ಲೆಗಳಲ್ಲಿ ಆರೋಗ್ಯ ಸೇವೆಯನ್ನು ಪಡೆಯಲಿದ್ದಾರೆ. ಫೆಬ್ರವರಿ 1ರಿಂದ ಎಲ್ಲ 735 ಜಿಲ್ಲೆಗಳಲ್ಲಿ ಆರೋಗ್ಯ ಸಂಬAಧಿ ಸೇವೆ ಸಿಗಲಿದೆ. ಸದ್ಯ 387 ಜಿಲ್ಲೆಗಳಲ್ಲಿ ಆರೋಗ್ಯ ಸೇವೆ ಲಭ್ಯವಿತ್ತು. 187 ಜಿಲ್ಲೆಗಳಲ್ಲಿ ಭಾಗಶಃ ಸೇವೆಗಳು ಲಭ್ಯವಿದ್ರೆ 161 ಜಿಲ್ಲೆಗಳಲ್ಲಿ ಇಎಸ್‌ಐಸಿ ನೌಕರರಿಗೆ ಯಾವುದೇ ಸೇವೆ ಲಭ್ಯವಿರಲಿಲ್ಲ.

ಗದಗ ಜಿಲ್ಲೆ ಅಕ್ರಮ ಮರಳು ಗಣಿಗಾರಿಕೆ: ತಹಶೀಲ್ದಾರ್-ಸಿಪಿಐ ಸೇರಿ 9 ಅಧಿಕಾರಿಗಳಿಗೆ ಹೈಕೋರ್ಟ್ ನೋಟಿಸ್..!

ಅಕ್ರಮ ಮರಳು ಗಣಿಗಾರಿಕೆ ಕುರಿತು ಉಚ್ಛ ನ್ಯಾಯಾಲಯ ಬೆಂಗಳೂರಿನಲ್ಲಿ ರಿಟ್ ಪಿಟೇಶನ್ ದಾಖಲಾಗಿತ್ತು. ಈ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಹೈಕೋರ್ಟ್..!

ಜಿಲೆಟಿನ್‌ ಸ್ಫೋಟ ದುರಂತ: ಗ್ರಾಮಸ್ಥರಿಂದ ಆಕ್ರೋಶ

ಜಿಲ್ಲೆಯ ಹುಣಸೋಡು ಅಕ್ರಮ ಕಲ್ಲು ಕ್ವಾರೆ ಪ್ರದೇಶದಲ್ಲಿ ಜಿಲೆಟಿನ್‌ ಸ್ಪೋಟಗೊಂಡ ಘಟನೆ ಮಾಸುವ ಮೊದಲೇ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ ದುರಂತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಳ್ಳಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟಗೊಂಡಿದೆ.