ಆಲಮಟ್ಟಿ: ಮುಂಗಾರು ಹಂಗಾಮಿಗಾಗಿ ಕಾಲುವೆಗಳ ಮೂಲಕ ಕೃಷ್ಣೆಯ ಜಲನಿಧಿ ರೈತರ ಭೂವೊಡಲು ಸೇರುವ ಮೂರ್ಹತ ಇದೀಗ ಕೂಡಿಬಂದಿದೆ. ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಲ್ಲಿನ ಪ್ರಸ್ತುತ ಲಭ್ಯವಿರುವ ನೀರಿನ ಲೆಕ್ಕಾಚಾರದ ಬಗ್ಗೆ ಚರ್ಚಿಸಿದ ಬಳಿಕ ಅಂತಿಮವಾಗಿ, ಮುಂಗಾರು ಹಂಗಾಮಿಗೆ ಜುಲೈ 26ರಿಂದಲೇ ಅನ್ವಯವಾಗುವಂತೆ ಮುಂಗಾರು ಹಂಗಾಮಿಗೆ ಜಲಾಶಯಗಳಿಂದ ನೀರು ಪೂರೈಸಲು ಮಂಗಳವಾರ ಇಲ್ಲಿನ ಕೆಬಿಜೆಎನ್‌ಎಲ್ ಕಚೇರಿ ಸಭಾಂಗಣದಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆಯು ತೀರ್ಮಾನ ತೆಗೆದುಕೊಂಡಿತು. ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಆಗಿರುವ ಲೋಕೋಪಯೋಗಿ ಸಚಿವರಾದ ಸಿ.ಸಿ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ, ಅರಣ್ಯ, ಆಹಾರ ಹಾಗೂ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರಾದ ಉಮೇಶ ಕತ್ತಿ ಅವರ ಸಮ್ಮುಖದಲ್ಲಿ ಜುಲೈ 26ರಂದು ನಡೆದ 2022-23ನೇ ಸಾಲಿನ ಮುಂಗಾರು ಹಂಗಾಮಿಗೆ ಕೃಷ್ಣ ಮೇಲ್ದಂಡೆ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನೀರಿನ ಲಭ್ಯತೆಯ ಬಗ್ಗೆ ಚರ್ಚೆ ನಡೆಯಿತು.
ಆಲಮಟ್ಟಿ ಮತ್ತು ನಾರಾಯಣಪುರ ಎರಡೂ ಜಲಾಶಯಗಳಲ್ಲಿ 97.491 ಟಿಎಂಸಿ ಜೀವಜಲ ಲಭ್ಯವಿದೆ. ಮುಂಗಾರು ಹಂಗಾಮಿನ 120 ದಿನಗಳಿಗೆ ಯೋಜನಾ ವರದಿಯಂತೆ 67 ಟಿಎಂಸಿ ನೀರಿನ ಪ್ರಮಾಣದ ಅಗತ್ಯವಿದೆ. ಅಗತ್ಯ ಬಳಕೆಗೆ ಮುಂಗಾರು ಹಂಗಾಮಿಗೆ 13 ಟಿಎಂಸಿ ನೀರು ಬೇಕಾಗುತ್ತದೆ. ಇವೆರಡು ಸೇರಿ ಒಟ್ಟು ಬಳಕೆಗೆ 80 ಟಿಎಂಸಿ ನೀರಿ ಬೇಕಾಗುತ್ತದೆ. ಮುಂಗಾರು ಹಂಗಾಮಿಗೆ ಅಗತ್ಯ ಇರುವ ನೀರಿನ ಪ್ರಮಾಣ ಜಲಾಶಯದಲ್ಲಿ ಸಂಗ್ರಹಣೆಯಾಗಿದೆ. ಮುಂಗಾರು ಹಂಗಾಮಿಗೆ ಅಗತ್ಯ ಇರುವ ನೀರಿನ ಪ್ರಮಾಣವು ಜಲಾಶಯದಲ್ಲಿ ಸಂಗ್ರಹಣೆಯಾಗಿರುವುದರಿAದ ಹಾಗೂ ಮುಂಬರುವ ದಿನಗಳಲ್ಲಿ ಬರುವ ಒಳಹರಿವನ್ನು ಗಮನದಲ್ಲಿರಿಸಿಕೊಂಡು 2022-23 ರ ಮುಂಗಾರು ಹಂಗಾಮಿಗೆ ಅಚ್ಚುಕಟ್ಟು ಪ್ರದೇಶದ ಕಾಲುವೆ ಜಾಲ, ಆಣಿಕಟ್ಟು ಹಾಗೂ ಮುಖ್ಯ ಸ್ಥಾವರಗಳ ಕ್ಲೋಜರ್ ಅವಧಿಯ ಕಾಮಗಾರಿಗಳ ಪ್ರಗತಿಯನ್ನು ಗಮನದಲ್ಲಿರಿಸಿಕೊಂಡು ಮುಂಗಾರು ಹಂಗಾಮಿಗೆ ಜುಲೈ 26 ರಿಂದ ನವ್ಹಂಬರ್ 24 ರವರೆಗೆ ನೀರು ಪೂರೈಸಲಾಗುವುದು ಎಂದು ಸಚಿವ ಸಿ.ಸಿ. ಪಾಟೀಲ ತಿಳಿಸಿದರು.
ಒಳಹರಿವು ಇರುವವರೆಗೆ ನಿರಂತರ ನೀರು, ಒಳಹರಿವು ಸ್ಥಗಿತಗೊಂಡ ನಂತರ 14 ದಿನ ಚಾಲು 8 ದಿನ ಬಂದ್ ಪದ್ಧತಿ ಅನುಸರಿಸಲಾಗುವುದು ಎಂದರು.
ಗುತ್ತಿ ಬಸವಣ್ಣ ಏತ ನೀರಾವರಿಯ 7 ಪಂಪಸೆಟ್ ಗಳು ದುರಸ್ತಿ ಕಾರ್ಯ ನಡೆದಿದ್ದು, ಇದೇ ಆಗಷ್ಟ್ 15 ರಿಂದ ನಾಲ್ಕು ಪಂಪಸೆಟ್ ಮೂಲಕ ನೀರು ಹರಿಸಲಾಗುವುದು ಎಂದರು. ಶಾಸಕರಾದ ಅಮರೇಗೌಡ ಬಯ್ಯಾಪುರ, ರಮೇಶ ಭೂಸನೂರ, ಶಿವನಗೌಡ ನಾಯಕ, ರಾಜುಗೌಡ, ಯಶವಂತರಾಯಗೌಡ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ, ಎ.ಎಸ್. ಪಾಟೀಲ ನಡಹಳ್ಳಿ, ವೀರಣ್ಣ ಚರಂತಿಮಠ, ಡಿ.ಎಸ್. ಹೂಲಗೇರಿ, ಬಸನಗೌಡ ದದ್ದಲ್ ಸೇರಿ ಹಲವರು ಸಭೆಯಲ್ಲಿದ್ದರು. ಕೆಬಿಜೆಎನ್ ಎಲ್ ಎಂಡಿ ಬಿ.ಎಸ್. ಶಿವಕುಮಾರ, ಜಿಲ್ಲಾಧಿಕಾರಿಳಾದ ವಿಜಯಮಹಾಂತೇಶ ದಾನಮ್ಮನವರ, ಪಿ.ಸುನೀಲಕುಮಾರ, ಮುಖ್ಯ ಎಂಜಿನಿಯರ್ ಪ್ರದೀಪಮಿತ್ರ ಮಂಜುನಾಥ, ಎಚ್. ಸುರೇಶ ಸೇರಿದಂತೆ ಹಲವರು ಇದ್ದರು.
ರೈತರಲ್ಲಿ ಮನವಿ:
ಸಮಸ್ತ ಅಚ್ಚುಕಟ್ಟು ರೈತ ಬಾಂಧವರು ಲಘು ನೀರಾವರಿ ಬೆಳೆಗಳನ್ನು ಮಾತ್ರ ಬೆಳೆಯಲು ಹಾಗೂ ನೀರು ಪೋಲಾಗದಂತೆ ಹಿತಮಿತ ಬಳಸಲು ಕೃಷ್ಣ ಭಾಗ್ಯ ಜಲ ನಿಗಮ ಅಧಿಕಾರಿಗಳೊಂದಿಗೆ ಸಹಭಾಗಿತ್ವ ನೀಡಲು ಇದೆ ವೇಳೆ ಸಚಿವರಾದ ಸಿಸಿ ಪಾಟೀಲ ರೈತ ಬಾಂಧವರಲ್ಲಿ ಮನವಿ ಮಾಡಿದರುನವೆಂಬರ್ ಅತ್ಯಂಕ್ಕೆ ಸಭೆ: ನವೆಂಬರ್ 2022ರಲ್ಲಿ ಎರಡೂ ಜಲಾಶಯಗಳ ಸಂಗ್ರಹಣೆಯನ್ನು ಗಮನದಲ್ಲಿರಿಸಿಕೊಂಡು 2022-23ನೇ ಸಾಲಿನ ಹಿಂಗಾರು ಹಂಗಾಮಿನ ನೀರವಾರಿ ಸಲಹಾ ಸಮಿತಿ ಸಭೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

Leave a Reply

Your email address will not be published. Required fields are marked *

You May Also Like

ನಿಗದಿತ ವೇಳಾಪಟ್ಟಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಹೊರಟ್ಟಿ ಪತ್ರ

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಗೃಹ ಸಚಿವರಿಗೂ ಕೊರೊನ ಪಾಸಿಟಿವ್!

ಹಾವೇರಿ: ಜಿಲ್ಲೆಯ ಶಿಗ್ಗಾವಿ – ಸವಣೂರು ಕ್ಷೇತ್ರದ ಶಾಸಕ ಬೊಮ್ಮಾಯಿ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಪಟ್ಟಣದ ಅಭಿವೃದ್ಧಿಗೆ ಸದಾ ಸಿದ್ಧ : ಮಿಥುನ್ ಜಿ ಪಾಟೀಲ

ರೋಣ: ಪುರಸಭೆ ಅಧ್ಯಕ್ಷೆ ವಿದ್ಯಾಶ್ರೀ ದೊಡ್ಡಮನಿ ಹಾಗೂ ಉಪಾಧ್ಯಕ್ಷ ಮಿಥುನ್ ಜಿ ಪಾಟೀಲ ಒಂದು ಮತ್ತು…

ಕ್ರೇಜಿಸ್ಟಾರ್ ರವಿಚಂದ್ರನ್‌ಗೆ 60ನೆ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು: ಚಿತ್ರರಂಗದ ಬಣ್ಣದ ಲೋಕದಲ್ಲೇ ಕನಸು ಕಟ್ಟಿಕೊಂಡ ಕನಸುಗಾರ ವಿ.ರವಿಚಂದ್ರನ್ ಅವರಿಗೆ ಇಂದು 60 ನೆ ವರ್ಷದ ಹುಟ್ಟುಹಬ್ಬದ ಸಂಭ್ರಮ. ತಮ್ಮ ನೆಚ್ಚಿನ ನಟನ ಷಷ್ಠಿ ಪೂರ್ತಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಬೇಕು ಎಂದು ರವಿಚಂದ್ರನ್ ಅಭಿಮಾನಿಗಳು ಕನಸು ಕಟ್ಟಿಕೊಂಡಿದ್ದರಾದರೂ ಅವರ ಕನಸಿಗೆ ಕೊರೊನಾ ಮಹಾಮಾರಿ ತಣ್ಣಿರೆರಚಿರುವುದರಿಂದ ತಾವು ಇದ್ದಲ್ಲಿಯೇ ಸರಳವಾಗಿ ಆಚರಿಸಿದ್ದಾರೆ.