ಉತ್ತರಪ್ರಭ ಸುದ್ದಿ
ಬೆಂಗಳೂರು:
ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಸಿಬ್ಬಂದಿಗಳನ್ನು ನೇಮಕವಾದ ಹಾಗೂ ಅನುಮೋದನೆಯಾದ ಮೂಲ ಗ್ರಾಮ ಪಂಚಾಯತಿದ ಅನ್ಯ ತಾಲ್ಲೂಕು/ಗ್ರಾಮ ಪಂಚಾಯತಿಗಳಿಗೆ ನಿಯೋಜನೆ ಅಥವಾ ವರ್ಗಾವಣೆಯನ್ನು ಮಾಡಲಾಗಿದ್ದು, ಸದರಿ ಆದೇಶಗಳನ್ನು ರದ್ದುಪಡಿಸಿ ನೇಮಕವಾದ ಮೂಲ ಗ್ರಾಮ ಪಂಚಾಯತಿಯಲ್ಲಿ ಕರ್ತವ್ಯ ನಿರ್ವಹಿಸಲು ಸೂಚಿಸುವಂತೆ ಕರ್ನಾಟಕ ಗ್ರಾಮ ಪಂಚಾಯತ್ ಕ್ಲರ್ಕ್ ಕಂ ಡೇಟಾ ಎಂಟ್ರಿ ಅಪರೇಟರ್ ನೌಕರರ ಕ್ಷೇಮಾಭಿವೃದ್ಧಿ ಸಂಘ ರಾಜ್ಯಾಧ್ಯಕ್ಷ ಭೀಮರಡಿ ಪೋ ಪಾಟೀಲ್, ಅವರು ದಿನಾಂಕ 21-03-2021 ರಂದು ಮನವಿಯಲ್ಲಿ ಮನವಿ ಸಲ್ಲಿಸಲಾಗಿತ್ತು,
ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿ ಸಿಬ್ಬಂದಿ ಸ್ವರೂಪ ವೇತನ ಶ್ರೇಣಿಗಳು, ನೇಮಕಾತಿ ವಿಧಾನ ಮತ್ತು ಇತರ ಸೇವಾ ಷರತ್ತುಗಳು) ನಿಯಮಗಳು, 2020ನ್ನು ಹೊರಡಿಸಲಾಗಿದ್ದು, ಗ್ರಾಮ ಪಂಚಾಯತಿಯ ಸಿಬ್ಬಂದಿಗಳ ನೇಮಕಾತಿ ಆಯಾ ಗ್ರಾಮ ಪಂಚಾಯತಿಗಳಾಗಿರುತ್ತದೆ ಹಾಗೂ ಶಿಸ್ತು ಪ್ರಾಧಿಕಾರವು ಆಯಾ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾಗಿರುತ್ತಾರೆ. ಗ್ರಾಮ ಪಂಚಾಯತಿಯ ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟರ್ ಹುದ್ದೆಯು ಗ್ರಾಮ ಪಂಚಾಯತಿಯ ಸಿಬ್ಬಂದಿ ಮಾದರಿಯಲ್ಲಿ ಒಂದು ಹುದ್ದೆಯಾಗಿರುವುದರಿಂದ ಯಾವುದೇ ಕಾರಣಕ್ಕೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ನೇಮಕವಾದ ಮೂಲ ಗ್ರಾಮ ಪಂಚಾಯತಿಯಿAದ ಅನ್ಯ ಜಿಲ್ಲಾ/ತಾಲ್ಲೂಕು/ಗ್ರಾಮ ಪಂಚಾಯತಿಗೆ ವರ್ಗಾಯಿಸಲು ಅಥವಾ ನಿಯೋಜಿಸಲು ಅವಕಾಶವಿರುವುದಿಲ್ಲ. ಆದ್ದರಿಂದ ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟರ್ ಹುದ್ದೆಗೆ ನೇಮಕವಾದ ನೌಕರರು ಅವರು ನೇಮಕಗೊಂಡ ಮೂಲ ಗ್ರಾಮ ಪಂಚಾಯತಿಯಲ್ಲಿಯೇ ಕರ್ತವ್ಯ ನಿರ್ವಹಿಸಬೇಕಾಗಿರುತ್ತದೆ. ಒಂದು ವೇಳೆ, ಇಂತಹ ಸಿಬ್ಬಂದಿಗಳನ್ನು ಅನ್ಯ ಜಿಲ್ಲಾ/ ತಾಲ್ಲೂಕು/ ಗ್ರಾಮ ಪಂಚಾಯತಿಗಳಿಗೆ ವರ್ಗಾಯಿಸಿದಲ್ಲಿ ಅಥವಾ ನಿಯೋಜಿಸಿದಲ್ಲಿ ಅಂತಹ ಆದೇಶಗಳನ್ನು ಕೂಡಲೇ ರದ್ದುಪಡಿಸಿ, ನೌಕರರು ನೇಮಕವಾದ ಮೂಲ ಗ್ರಾಮ ಪಂಚಾಯತಿಯಲ್ಲಿ ಕರ್ತವ್ಯ ನಿರ್ವಹಿಸಲು ಅಗತ್ಯ ಕ್ರಮ ವಹಿಸುವಂತೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಎಂಎಲ್ ಸಿ ಹೆಚ್.ವಿಶ್ವನಾಥ್ ಮಂತ್ರಿಯಾಗುವ ಕನಸಿಗೆ: ಸುಪ್ರೀಂ ಶಾಕ್

ಸೋತು ಎಂಎಲ್ಸಿಯಾಗಿದ್ದಂತ ಹೆಚ್.ವಿಶ್ವನಾಥ್ ಅವರಿಗೆ ಪರಿಷತ್ ಸ್ಥಾನದ ಮೂಲಕ ಸಚಿವ ಸ್ಥಾನದ ಕನಸು ಕಂಡಿದ್ದ ವಿಶ್ವನಾಥ್‌ಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ.

ಕಾಫಿ ನಾಡಿನಲ್ಲಿ ಸದ್ಯದಲ್ಲಿಯೇ ಶುರುವಾಗಲಿದೆ ವೈದ್ಯಕೀಯ ಕಾಲೇಜು!

ಬೆಂಗಳೂರು : ಕಾಫಿ ನಾಡಿನಲ್ಲಿ 24 ರಿಂದ 30 ತಿಂಗಳಲ್ಲಿ ಸುಸಜ್ಜಿತ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ.

ಕಡಕೋಳದಲ್ಲಿ ಸಿಡಿಲು: ಮೂವರು ಸಾವು: ನಾಲ್ವರಿಗೆ ಗಂಭೀರ ಗಾಯ

ತಾಲೂಕಿನ ಕಡಕೋಳ ಗ್ರಾಮದಲ್ಲಿ ಶನಿವಾರ ಸುರಿದ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ ಧಾರುಣ ಘಟನೆ ಜರುಗಿದೆ. ಘಟನೆಯ ವಿವರ: ಕಡಕೋಳ ಗ್ರಾಮದ ನಿವಾಸಿಗಳಾದ ಕುಮಾರ(24), ಶರಣಪ್ಪ ಮಾಲಿಂಗಪ್ಪ(38) ಮಾರುತಿ(50) ಹೊಲ ನೋಡಿ ಬರಲು ಹೋಗಿದ್ದು, ಮಳೆ, ಗಾಳಿ ಪ್ರಾರಂಭವಾಗಿದ್ದರಿಂದ ಅಲ್ಲಿಯೇ ಗಿಡದ ಮರೆಯಲ್ಲಿ ನಿಂತುಕೊಂಡಿದ್ದಾರೆ. ದುರಾದೃಷ್ಟವಶಾತ್ ಸಿಡಿಲು ಬಡಿದು ಈ ಮೂವರು ಸಾವನ್ನಪ್ಪಿದ್ದಾರೆ.

ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!!

ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!! ನವದೆಹಲಿ : ದೇಶದಲ್ಲಿ ಶನಿವಾರ ಒಂದೇ ದಿನ…